<p><strong>ಚಂಡೀಗಢ</strong>: ಪಂಜಾಬ್ನ ಪಟಿಯಾಲ ಮತ್ತು ಹರಿಯಾಣದಲ್ಲಿ ಪೊಲೀಸ್ ಠಾಣೆಗಳ ಮೇಲೆ ನಡೆದ ಗ್ರೆನೇಡ್ ದಾಳಿಗಳಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಬಬ್ಬರ್ ಖಾಲ್ಸಾ ಇಂಟರ್ನ್ಯಾಷನಲ್ (ಬಿಕೆಐ) ಭಯೋತ್ಪಾದಕ ಸಂಘಟನೆಯ ಮೂವರನ್ನು ಪಂಜಾಬ್ ಪೊಲೀಸರು ಭಾನುವಾರ ಬಂಧಿಸಿದ್ದಾರೆ.</p>.<p class="bodytext">ಬಂಧಿತರದಿಂದ ಗ್ರೆನೇಡ್ಗಳು ಮತ್ತು ಎರಡು ಪಿಸ್ತೂಲ್ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಡಿಜಿಪಿ ಗೌರವ್ ಯಾದವ್ ತಿಳಿಸಿದ್ದಾರೆ.</p>.<p class="bodytext">‘ಗುಪ್ತಚರ ಮಾಹಿತಿಯ ಮೇರೆಗೆ ಪಟಿಯಾಲದ ಗುಪ್ತಚರ ವಿಭಾಗದ ಅಧಿಕಾರಿಗಳು ಮತ್ತು ಮೊಹಾಲಿ ಪೊಲೀಸರ ವಿಶೇಷ ಕಾರ್ಯಾಚರಣೆ ತಂಡದ ಸದಸ್ಯರು ಬಿಕೆಐನ ಮೂವರನ್ನು ಬಂಧಿಸಿದ್ದಾರೆ. ಪೊಲೀಸ್ ಠಾಣೆಗಳ ಮೇಲಿನ ಗ್ರೆನೇಡ್ ದಾಳಿಯಲ್ಲಿ ಇವರ ಕೈವಾಡವಿರುವುದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ’ ಎಂದು ಹೇಳಿದ್ದಾರೆ.</p>.<p class="bodytext">‘ವಿದೇಶದಲ್ಲಿ ನೆಲಸಿ ಬಿಕೆಐ ಪರ ಕೆಲಸ ಮಾಡುತ್ತಿರುವ ಮನು ಅಗವಾನ್ (ಗ್ರೀಸ್), ಮಣಿಂದರ್ ಬಿಲ್ಲಾ (ಮಲೇಷ್ಯಾ) ಮತ್ತು ಹರ್ವಿಂದರ್ ಸಿಂಗ್ (ಪಾಕಿಸ್ತಾನ) ಅವರ ಸೂಚನೆಯ ಮೇಲೆ ಈ ದಾಳಿ ನಡೆಸಿದ್ದಾರೆ’ ಎಂದು ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಂಡೀಗಢ</strong>: ಪಂಜಾಬ್ನ ಪಟಿಯಾಲ ಮತ್ತು ಹರಿಯಾಣದಲ್ಲಿ ಪೊಲೀಸ್ ಠಾಣೆಗಳ ಮೇಲೆ ನಡೆದ ಗ್ರೆನೇಡ್ ದಾಳಿಗಳಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಬಬ್ಬರ್ ಖಾಲ್ಸಾ ಇಂಟರ್ನ್ಯಾಷನಲ್ (ಬಿಕೆಐ) ಭಯೋತ್ಪಾದಕ ಸಂಘಟನೆಯ ಮೂವರನ್ನು ಪಂಜಾಬ್ ಪೊಲೀಸರು ಭಾನುವಾರ ಬಂಧಿಸಿದ್ದಾರೆ.</p>.<p class="bodytext">ಬಂಧಿತರದಿಂದ ಗ್ರೆನೇಡ್ಗಳು ಮತ್ತು ಎರಡು ಪಿಸ್ತೂಲ್ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಡಿಜಿಪಿ ಗೌರವ್ ಯಾದವ್ ತಿಳಿಸಿದ್ದಾರೆ.</p>.<p class="bodytext">‘ಗುಪ್ತಚರ ಮಾಹಿತಿಯ ಮೇರೆಗೆ ಪಟಿಯಾಲದ ಗುಪ್ತಚರ ವಿಭಾಗದ ಅಧಿಕಾರಿಗಳು ಮತ್ತು ಮೊಹಾಲಿ ಪೊಲೀಸರ ವಿಶೇಷ ಕಾರ್ಯಾಚರಣೆ ತಂಡದ ಸದಸ್ಯರು ಬಿಕೆಐನ ಮೂವರನ್ನು ಬಂಧಿಸಿದ್ದಾರೆ. ಪೊಲೀಸ್ ಠಾಣೆಗಳ ಮೇಲಿನ ಗ್ರೆನೇಡ್ ದಾಳಿಯಲ್ಲಿ ಇವರ ಕೈವಾಡವಿರುವುದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ’ ಎಂದು ಹೇಳಿದ್ದಾರೆ.</p>.<p class="bodytext">‘ವಿದೇಶದಲ್ಲಿ ನೆಲಸಿ ಬಿಕೆಐ ಪರ ಕೆಲಸ ಮಾಡುತ್ತಿರುವ ಮನು ಅಗವಾನ್ (ಗ್ರೀಸ್), ಮಣಿಂದರ್ ಬಿಲ್ಲಾ (ಮಲೇಷ್ಯಾ) ಮತ್ತು ಹರ್ವಿಂದರ್ ಸಿಂಗ್ (ಪಾಕಿಸ್ತಾನ) ಅವರ ಸೂಚನೆಯ ಮೇಲೆ ಈ ದಾಳಿ ನಡೆಸಿದ್ದಾರೆ’ ಎಂದು ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>