<p><strong>ಜೈಪುರ</strong>: ರಾಜಸ್ಥಾನದ ಜೈಸಲ್ಮೇರ್, ಬಾಡಮೇರ್ ಮತ್ತಿತರ ಗಡಿ ಪ್ರದೇಶಗಳಲ್ಲಿ ಭಾನುವಾರ ರಾತ್ರಿ ಮುನ್ನೆಚ್ಚರಿಕೆ ಕ್ರಮವಾಗಿ ಬ್ಲ್ಯಾಕ್ಔಟ್ ಮಾಡಲಾಯಿತು.</p>.<p>ಶನಿವಾರ ಭಾರತ–ಪಾಕಿಸ್ತಾನದ ನಡುವೆ ಸೇನಾ ಸಂಘರ್ಷ ಶಮನವಾದ ನಂತರವೂ ಪಾಕ್ ಒಪ್ಪಂದ ಉಲ್ಲಂಘಿಸಿ ದಾಳಿ ನಡೆಸಿತ್ತು. ಹೀಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಭಾನುವಾರ ರಾತ್ರಿ 7.30ರಿಂದ ಜೈಸಲ್ಮೇರ್ನಲ್ಲಿ ಹಾಗೂ ರಾತ್ರಿ 8ರಿಂದ ಬಾಡಮೇರ್ನಲ್ಲಿ ಬ್ಲ್ಯಾಕ್ಔಟ್ ಮಾಡಲಾಯಿತು. </p>.<p>ಬ್ಲ್ಯಾಕ್ಔಟ್ ಮಾಡಿದ ನಂತರ ಬಾಡಮೇರ್ ಪ್ರದೇಶದಲ್ಲಿ ಕೆಂಪು ಬಣ್ಣದ ವಸ್ತುವೊಂದು ಗೋಚರಿಸಿದ್ದು, ಅದು ಡ್ರೋನ್ ಇರಬಹುದು ಎಂದು ಶಂಕಿಸಲಾಗಿದೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ಹೇಳಿದ್ದಾರೆ. ಆದರೆ, ಅದನ್ನು ಅಧಿಕೃತವಾಗಿ ಯಾರೂ ದೃಢಪಡಿಸಿಲ್ಲ.</p>.<p>ಸೇನಾ ಸಿಬ್ಬಂದಿ ಕಟ್ಟೆಚ್ಚರದಿಂದ ಇದ್ದಾರೆ. ಭಾನುವಾರ ರಾಜಸ್ಥಾನದ ಬಹುತೇಕ ಸ್ಥಳಗಳಲ್ಲಿ ಮಾರುಕಟ್ಟೆಗಳಲ್ಲಿ ಎಂದಿನಂತೆ ವ್ಯಾಪಾರ ನಡೆಯಿತು. </p>.<p class="title">ಕೇಂದ್ರ ಸಚಿವ ಗಜೇಂದ್ರಸಿಂಗ್ ಶೆಖಾವತ್ ಅವರು ಸ್ಥಳೀಯ ಅಧಿಕಾರಿಗಳ ಜತೆ ಜೋಧಪುರದಲ್ಲಿ ಸಭೆ ನಡೆಸಿ, ಪರಿಸ್ಥಿತಿಯ ಕುರಿತು ಚರ್ಚೆ ನಡೆಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜೈಪುರ</strong>: ರಾಜಸ್ಥಾನದ ಜೈಸಲ್ಮೇರ್, ಬಾಡಮೇರ್ ಮತ್ತಿತರ ಗಡಿ ಪ್ರದೇಶಗಳಲ್ಲಿ ಭಾನುವಾರ ರಾತ್ರಿ ಮುನ್ನೆಚ್ಚರಿಕೆ ಕ್ರಮವಾಗಿ ಬ್ಲ್ಯಾಕ್ಔಟ್ ಮಾಡಲಾಯಿತು.</p>.<p>ಶನಿವಾರ ಭಾರತ–ಪಾಕಿಸ್ತಾನದ ನಡುವೆ ಸೇನಾ ಸಂಘರ್ಷ ಶಮನವಾದ ನಂತರವೂ ಪಾಕ್ ಒಪ್ಪಂದ ಉಲ್ಲಂಘಿಸಿ ದಾಳಿ ನಡೆಸಿತ್ತು. ಹೀಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಭಾನುವಾರ ರಾತ್ರಿ 7.30ರಿಂದ ಜೈಸಲ್ಮೇರ್ನಲ್ಲಿ ಹಾಗೂ ರಾತ್ರಿ 8ರಿಂದ ಬಾಡಮೇರ್ನಲ್ಲಿ ಬ್ಲ್ಯಾಕ್ಔಟ್ ಮಾಡಲಾಯಿತು. </p>.<p>ಬ್ಲ್ಯಾಕ್ಔಟ್ ಮಾಡಿದ ನಂತರ ಬಾಡಮೇರ್ ಪ್ರದೇಶದಲ್ಲಿ ಕೆಂಪು ಬಣ್ಣದ ವಸ್ತುವೊಂದು ಗೋಚರಿಸಿದ್ದು, ಅದು ಡ್ರೋನ್ ಇರಬಹುದು ಎಂದು ಶಂಕಿಸಲಾಗಿದೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ಹೇಳಿದ್ದಾರೆ. ಆದರೆ, ಅದನ್ನು ಅಧಿಕೃತವಾಗಿ ಯಾರೂ ದೃಢಪಡಿಸಿಲ್ಲ.</p>.<p>ಸೇನಾ ಸಿಬ್ಬಂದಿ ಕಟ್ಟೆಚ್ಚರದಿಂದ ಇದ್ದಾರೆ. ಭಾನುವಾರ ರಾಜಸ್ಥಾನದ ಬಹುತೇಕ ಸ್ಥಳಗಳಲ್ಲಿ ಮಾರುಕಟ್ಟೆಗಳಲ್ಲಿ ಎಂದಿನಂತೆ ವ್ಯಾಪಾರ ನಡೆಯಿತು. </p>.<p class="title">ಕೇಂದ್ರ ಸಚಿವ ಗಜೇಂದ್ರಸಿಂಗ್ ಶೆಖಾವತ್ ಅವರು ಸ್ಥಳೀಯ ಅಧಿಕಾರಿಗಳ ಜತೆ ಜೋಧಪುರದಲ್ಲಿ ಸಭೆ ನಡೆಸಿ, ಪರಿಸ್ಥಿತಿಯ ಕುರಿತು ಚರ್ಚೆ ನಡೆಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>