<p><strong>ನವದೆಹಲಿ:</strong> ದೆಹಲಿಯ ರೋಹಿಣಿ ನಗರದ ಪ್ರಶಾಂತ್ ವಿಹಾರ್ ಪ್ರದೇಶದ ಪಿವಿಆರ್ ಮಲ್ಟಿಪ್ಲೆಕ್ಸ್ ಬಳಿ ಗುರುವಾರ ಸ್ಫೋಟ ಸಂಭವಿಸಿ, ವ್ಯಕ್ತಿಯೊಬ್ಬರು ಗಾಯಗೊಂಡಿದ್ದಾರೆ.</p><p>ಸಿಆರ್ಪಿಎಫ್ ಶಾಲೆಯ ಗೋಡೆಯ ಮೇಲೆ ಅ.20ರಂದು ಸ್ಫೋಟ ಸಂಭವಿಸಿದ್ದ ಪ್ರದೇಶದಲ್ಲೇ ಉದ್ಯಾನದ ಸಮೀಪ ಸಿಹಿ ತಿನಿಸು ಅಂಗಡಿ ಬಳಿ ಈ ಸ್ಫೋಟ ನಡೆದಿದೆ. </p><p>ಸ್ಫೋಟದ ಸಮಯದಲ್ಲಿ ಸಮೀಪದಲ್ಲೇ ನಿಲ್ಲಿಸಿದ್ದ ಮೂರು ಚಕ್ರ ವಾಹನದ ಚಾಲಕ ಚೇತನ್ ಕುಶ್ವಾಹ (28) ಎಂಬುವವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸ್ಫೋಟ ನಡೆದ ಸ್ಥಳದಲ್ಲಿ ಚೆಲ್ಲಿದ್ದ ‘ಬಿಳಿ ಪುಡಿ’ಯ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.</p><p>‘ಬೆಳಿಗ್ಗೆ ಸುಮಾರು 11.48ಕ್ಕೆ ಪ್ರಶಾಂತ್ ವಿಹಾರ್ ಬಳಿ ಸ್ಫೋಟ ಸಂಭವಿಸಿದ ಬಗ್ಗೆ ಕರೆ ಬಂದಿತ್ತು. ತಕ್ಷಣ ಸ್ಥಳಕ್ಕೆ ಧಾವಿಸಿದೆವು’ ಎಂದು ದೆಹಲಿ ಅಗ್ನಿಶಾಮಕ ದಳದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p><p>ಸ್ಫೋಟದಿಂದಾಗಿ ನಾಗರಿಕರಲ್ಲಿ ಆತಂಕ ಮನೆಮಾಡಿತ್ತು.</p><p><strong>ಕಾನೂನು ಸುವ್ಯವಸ್ಥೆ ಕಾಪಾಡದ ಕೇಂದ್ರ:</strong> </p><p>ಸ್ಫೋಟ ಕುರಿತು ಪ್ರತಿಕ್ರಿಯಿಸಿರುವ ದೆಹಲಿ ಮುಖ್ಯಮಂತ್ರಿ ಆತಿಶಿ ಅವರು ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದ್ದಾರೆ.</p><p>ಕಳೆದ ಎರಡು ತಿಂಗಳಲ್ಲಿ ಇದೇ ಪ್ರದೇಶದಲ್ಲಿ ನಡೆದ ಎರಡನೇ ಘಟನೆ ಇದಾಗಿದೆ. ಇದು ಕಾನೂನು ಕಟ್ಟುನಿಟ್ಟಿನ ಜಾರಿ ಮತ್ತು ಸುರಕ್ಷತಾ ಕ್ರಮಗಳ ವೈಫಲ್ಯವನ್ನು ಸೂಚಿಸುತ್ತದೆ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.</p><p>‘ಬಿಜೆಪಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಈ ಘಟನೆಗೆ ಜವಾಬ್ದಾರರಾಗಿದ್ದಾರೆ. ರಾಜಧಾನಿಯಲ್ಲಿ ತಮ್ಮ ಜವಾಬ್ದಾರಿ ನಿಭಾಯಿಸುವಲ್ಲಿ ವಿಫಲರಾಗಿದ್ದಾರೆ’ ಎಂದು ದೂರಿದ್ದಾರೆ.</p>.ಬೆಂಗಳೂರಿನಲ್ಲಿ ಭಯೋತ್ಪಾದನೆ ಸಂಚು; ರುವಾಂಡದಿಂದ ಭಾರತಕ್ಕೆ ಎಲ್ಇಟಿ ಸದಸ್ಯ.ದೆಹಲಿ | ಸೈಬರ್ ವಂಚನೆ ಪ್ರಕರಣ: ದಾಳಿಗೆ ತೆರಳಿದ್ದ ಇ.ಡಿ ಅಧಿಕಾರಿಗಳ ಮೇಲೆ ಹಲ್ಲೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ದೆಹಲಿಯ ರೋಹಿಣಿ ನಗರದ ಪ್ರಶಾಂತ್ ವಿಹಾರ್ ಪ್ರದೇಶದ ಪಿವಿಆರ್ ಮಲ್ಟಿಪ್ಲೆಕ್ಸ್ ಬಳಿ ಗುರುವಾರ ಸ್ಫೋಟ ಸಂಭವಿಸಿ, ವ್ಯಕ್ತಿಯೊಬ್ಬರು ಗಾಯಗೊಂಡಿದ್ದಾರೆ.</p><p>ಸಿಆರ್ಪಿಎಫ್ ಶಾಲೆಯ ಗೋಡೆಯ ಮೇಲೆ ಅ.20ರಂದು ಸ್ಫೋಟ ಸಂಭವಿಸಿದ್ದ ಪ್ರದೇಶದಲ್ಲೇ ಉದ್ಯಾನದ ಸಮೀಪ ಸಿಹಿ ತಿನಿಸು ಅಂಗಡಿ ಬಳಿ ಈ ಸ್ಫೋಟ ನಡೆದಿದೆ. </p><p>ಸ್ಫೋಟದ ಸಮಯದಲ್ಲಿ ಸಮೀಪದಲ್ಲೇ ನಿಲ್ಲಿಸಿದ್ದ ಮೂರು ಚಕ್ರ ವಾಹನದ ಚಾಲಕ ಚೇತನ್ ಕುಶ್ವಾಹ (28) ಎಂಬುವವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸ್ಫೋಟ ನಡೆದ ಸ್ಥಳದಲ್ಲಿ ಚೆಲ್ಲಿದ್ದ ‘ಬಿಳಿ ಪುಡಿ’ಯ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.</p><p>‘ಬೆಳಿಗ್ಗೆ ಸುಮಾರು 11.48ಕ್ಕೆ ಪ್ರಶಾಂತ್ ವಿಹಾರ್ ಬಳಿ ಸ್ಫೋಟ ಸಂಭವಿಸಿದ ಬಗ್ಗೆ ಕರೆ ಬಂದಿತ್ತು. ತಕ್ಷಣ ಸ್ಥಳಕ್ಕೆ ಧಾವಿಸಿದೆವು’ ಎಂದು ದೆಹಲಿ ಅಗ್ನಿಶಾಮಕ ದಳದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p><p>ಸ್ಫೋಟದಿಂದಾಗಿ ನಾಗರಿಕರಲ್ಲಿ ಆತಂಕ ಮನೆಮಾಡಿತ್ತು.</p><p><strong>ಕಾನೂನು ಸುವ್ಯವಸ್ಥೆ ಕಾಪಾಡದ ಕೇಂದ್ರ:</strong> </p><p>ಸ್ಫೋಟ ಕುರಿತು ಪ್ರತಿಕ್ರಿಯಿಸಿರುವ ದೆಹಲಿ ಮುಖ್ಯಮಂತ್ರಿ ಆತಿಶಿ ಅವರು ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದ್ದಾರೆ.</p><p>ಕಳೆದ ಎರಡು ತಿಂಗಳಲ್ಲಿ ಇದೇ ಪ್ರದೇಶದಲ್ಲಿ ನಡೆದ ಎರಡನೇ ಘಟನೆ ಇದಾಗಿದೆ. ಇದು ಕಾನೂನು ಕಟ್ಟುನಿಟ್ಟಿನ ಜಾರಿ ಮತ್ತು ಸುರಕ್ಷತಾ ಕ್ರಮಗಳ ವೈಫಲ್ಯವನ್ನು ಸೂಚಿಸುತ್ತದೆ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.</p><p>‘ಬಿಜೆಪಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಈ ಘಟನೆಗೆ ಜವಾಬ್ದಾರರಾಗಿದ್ದಾರೆ. ರಾಜಧಾನಿಯಲ್ಲಿ ತಮ್ಮ ಜವಾಬ್ದಾರಿ ನಿಭಾಯಿಸುವಲ್ಲಿ ವಿಫಲರಾಗಿದ್ದಾರೆ’ ಎಂದು ದೂರಿದ್ದಾರೆ.</p>.ಬೆಂಗಳೂರಿನಲ್ಲಿ ಭಯೋತ್ಪಾದನೆ ಸಂಚು; ರುವಾಂಡದಿಂದ ಭಾರತಕ್ಕೆ ಎಲ್ಇಟಿ ಸದಸ್ಯ.ದೆಹಲಿ | ಸೈಬರ್ ವಂಚನೆ ಪ್ರಕರಣ: ದಾಳಿಗೆ ತೆರಳಿದ್ದ ಇ.ಡಿ ಅಧಿಕಾರಿಗಳ ಮೇಲೆ ಹಲ್ಲೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>