<p><strong>ಚಂಡೀಗಢ:</strong> ಪಂಜಾಬ್ನ ಬಿಜೆಪಿ ನಾಯಕ ಮನೋರಂಜನ್ ಕಾಲಿಯಾ ಅವರ ನಿವಾಸದ ಬಳಿ ಮಂಗಳವಾರ ಮುಂಜಾನೆ ಅಪರಿಚಿತ ವ್ಯಕ್ತಿಗಳು ಗ್ರೆನೇಡ್ ಸ್ಫೋಟಿಸಿದ್ದಾರೆ.</p>.<p>‘ಜಲಂಧರ್ ಜಿಲ್ಲೆಯಲ್ಲಿರುವ ಕಾಲಿಯಾ ಅವರ ನಿವಾಸದಲ್ಲಿ ಸ್ಫೋಟ ಸಂಭವಿಸಿದೆ. ಮನೆಯ ಕಿಟಕಿ, ಕಾರು ಮತ್ತು ಬೈಕಿಗೆ ಹಾನಿಯಾಗಿದ್ದು, ಯಾರಿಗೂ ತೊಂದರೆಯಾಗಿಲ್ಲ. ಸ್ಫೋಟ ನಡೆದ ವೇಳೆ ಕಾಲಿಯಾ ಅದೇ ನಿವಾಸದಲ್ಲಿದ್ದರು’ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಘಟನೆ ಸಂಬಂಧ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ‘ಪಂಜಾಬ್ನಲ್ಲಿ ಉದ್ವಿಗ್ನತೆ ಸೃಷ್ಟಿಸುವ ಸಲುವಾಗಿ ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ಐ ಮತ್ತು ಲಾರೆನ್ಸ್ ಬಿಷ್ಣೋಯಿ ತಂಡ ಈ ಕೃತ್ಯಕ್ಕೆ ಸಂಚು ನಡೆಸಿದೆ’ ಎಂದು ಹೇಳಿದ್ದಾರೆ.</p>.<p>‘ಕೃತ್ಯಕ್ಕೆ ಬಳಸಿದ್ದ ಇ–ರಿಕ್ಷಾವನ್ನು ವಶಪಡಿಸಿಕೊಳ್ಳಲಾಗಿದೆ. ಲಾರೆನ್ಸ್ ಬಿಷ್ಣೋಯಿ ಮತ್ತು ಪಾಕ್ ಗ್ಯಾಂಗ್ಸ್ಟರ್ ಶಹಝಾದ್ ಭಟ್ಟಿ ಆಪ್ತ ಝೀಶಾನ್ ಅಖ್ತರ್ ಈ ಕೃತ್ಯದ ಸಂಚು ರೂಪಿಸಿದ್ದ’ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಪಾಕಿಸ್ತಾನ ಮೂಲದ ‘ಬಾಬರ್ ಖಾಲ್ಸಾ ಇಂಟರ್ನ್ಯಾಷನಲ್’ಗೂ ಈ ಕೃತ್ಯದ ಜೊತೆ ನಂಟು ಇರುವ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.</p>.<p>ಕಾಲಿಯಾ ಅವರು ಪಂಜಾಬ್ನ ಸಚಿವರಾಗಿ ಮತ್ತು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಂಡೀಗಢ:</strong> ಪಂಜಾಬ್ನ ಬಿಜೆಪಿ ನಾಯಕ ಮನೋರಂಜನ್ ಕಾಲಿಯಾ ಅವರ ನಿವಾಸದ ಬಳಿ ಮಂಗಳವಾರ ಮುಂಜಾನೆ ಅಪರಿಚಿತ ವ್ಯಕ್ತಿಗಳು ಗ್ರೆನೇಡ್ ಸ್ಫೋಟಿಸಿದ್ದಾರೆ.</p>.<p>‘ಜಲಂಧರ್ ಜಿಲ್ಲೆಯಲ್ಲಿರುವ ಕಾಲಿಯಾ ಅವರ ನಿವಾಸದಲ್ಲಿ ಸ್ಫೋಟ ಸಂಭವಿಸಿದೆ. ಮನೆಯ ಕಿಟಕಿ, ಕಾರು ಮತ್ತು ಬೈಕಿಗೆ ಹಾನಿಯಾಗಿದ್ದು, ಯಾರಿಗೂ ತೊಂದರೆಯಾಗಿಲ್ಲ. ಸ್ಫೋಟ ನಡೆದ ವೇಳೆ ಕಾಲಿಯಾ ಅದೇ ನಿವಾಸದಲ್ಲಿದ್ದರು’ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಘಟನೆ ಸಂಬಂಧ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ‘ಪಂಜಾಬ್ನಲ್ಲಿ ಉದ್ವಿಗ್ನತೆ ಸೃಷ್ಟಿಸುವ ಸಲುವಾಗಿ ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ಐ ಮತ್ತು ಲಾರೆನ್ಸ್ ಬಿಷ್ಣೋಯಿ ತಂಡ ಈ ಕೃತ್ಯಕ್ಕೆ ಸಂಚು ನಡೆಸಿದೆ’ ಎಂದು ಹೇಳಿದ್ದಾರೆ.</p>.<p>‘ಕೃತ್ಯಕ್ಕೆ ಬಳಸಿದ್ದ ಇ–ರಿಕ್ಷಾವನ್ನು ವಶಪಡಿಸಿಕೊಳ್ಳಲಾಗಿದೆ. ಲಾರೆನ್ಸ್ ಬಿಷ್ಣೋಯಿ ಮತ್ತು ಪಾಕ್ ಗ್ಯಾಂಗ್ಸ್ಟರ್ ಶಹಝಾದ್ ಭಟ್ಟಿ ಆಪ್ತ ಝೀಶಾನ್ ಅಖ್ತರ್ ಈ ಕೃತ್ಯದ ಸಂಚು ರೂಪಿಸಿದ್ದ’ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಪಾಕಿಸ್ತಾನ ಮೂಲದ ‘ಬಾಬರ್ ಖಾಲ್ಸಾ ಇಂಟರ್ನ್ಯಾಷನಲ್’ಗೂ ಈ ಕೃತ್ಯದ ಜೊತೆ ನಂಟು ಇರುವ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.</p>.<p>ಕಾಲಿಯಾ ಅವರು ಪಂಜಾಬ್ನ ಸಚಿವರಾಗಿ ಮತ್ತು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>