<p><strong>ನವದೆಹಲಿ</strong>: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಗೆ ಸಂಬಂಧಿಸಿದಂತೆ ಕೆಲವು ರಾಜ್ಯಗಳಲ್ಲಿ ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್ಒ) ಮತ್ತು ಚುನಾವಣಾ ಅಧಿಕಾರಿಗಳು ಮೃತಪಟ್ಟಿರುವ ಸಂಬಂಧ ಕಾಂಗ್ರೆಸ್, ಕೇಂದ್ರ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದೆ.</p><p>ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಬಿಎಲ್ಒಗಳ ಹಾಗೂ ಚುನಾವಣಾ ಅಧಿಕಾರಿಗಳ ಮೇಲೆ ಕೆಲಸದ ಒತ್ತಡ ಹೇರುತ್ತಿರುವುದರಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ತಮ್ಮ ಪ್ರೀತಿ ಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ಈ ನೋವನ್ನು ಭರಿಸುವ ಶಕ್ತಿ ದೇವರು ಕರುಣಿಸಿ, ಮೃತಪಟ್ಟವರಿಗೆ ನನ್ನ ಸಂತಾಪಗಳು ಎಂದಿದ್ದಾರೆ.</p>.ನೇಪಾಳವನ್ನು ಮಣಿಸಿ ಅಂಧ ಮಹಿಳೆಯರ ಚೊಚ್ಚಲ ಟಿ–20 ವಿಶ್ವಕಪ್ ಗೆದ್ದ ಭಾರತ.ಸನಾತನ ಧರ್ಮ ಉತ್ತೇಜಿಸಲು ಕ್ರಮ: ಬಿಹಾರ ಸರ್ಕಾರದಿಂದ 38 ಸಂಚಾಲಕರ ನೇಮಕ. <p>ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯನ್ನು ಇಷ್ಟು ತರಾತುರಿಯಲ್ಲಿ ಮಾಡುತ್ತಿರುವುದು ಏಕೆ?, ಈ ಆತುರದ ಹಾಗೂ ಬಲವಂತದ ಎಸ್ಐಆರ್ ಕ್ರಮವು ನೋಟು ರದ್ಧತಿ ಹಾಗೂ ಕೋವಿಡ್ ಸಮಯವನ್ನು ನೆನಪಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p><p>ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಸಮಯದಲ್ಲಿ 19 ದಿನಗಳಲ್ಲಿ 16 ಬಿಎಲ್ಒಗಳು ಮೃತಪಟ್ಟಿದ್ದಾರೆ ಎಂದು ಮಾಹಿತಿಯನ್ನು ಹಂಚಿಕೊಂಡಿದ್ದಾರೆ.</p>.ಹೈಕಮಾಂಡ್ ಸೂಚಿಸಿದರೂ ಸಿದ್ದರಾಮಯ್ಯ ಸಿಎಂ ಕುರ್ಚಿ ಬಿಡಲ್ಲ: ಜಗದೀಶ ಶೆಟ್ಟರ್.Video| ಮದುವೆ ಸಂಭ್ರಮದಲ್ಲಿ ಸ್ಮೃತಿ ಮಂದಾನ: ಭಾವಿ ಪತಿಯೊಂದಿಗೆ ಭರ್ಜರಿ ಡ್ಯಾನ್ಸ್. <p>ಬಿಜೆಪಿ ಕದ್ದ ಅಧಿಕಾರದ ಫಲವನ್ನು ಅನುಭವಿಸುವಲ್ಲಿ ನಿರತವಾಗಿದೆ. ಆದರೆ ಚುನಾವಣಾ ಆಯೋಗವು ಮೂಕ ಪ್ರೇಕ್ಷಕರಂತೆ ನೋಡುತ್ತಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ.</p><p>ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಬಿಎಲ್ಒ ಅವರ ಸಾವಿನ ಬಗ್ಗೆ ಆಘಾತ ವ್ಯಕ್ತಪಡಿಸಿದ್ದು, ಇದು ನಿಜವಾಗಿಯೂ ಆತಂಕಕಾರಿ ಎಂದಿದ್ದಾರೆ.</p><p>ಆದರೆ ಬಿಜೆಪಿಯ ಮುಖಂಡ ರಾಹುಲ್ ಸಿನ್ಹಾ ಅವರು ಈ ಆತ್ಮಹತ್ಯೆ ಪತ್ರ 'ನಕಲಿ' ಎಂದಿದ್ದಾರೆ.</p>.ಮಹಾರಾಷ್ಟ್ರ ಸಚಿವೆ ಪಂಕಜಾ ಮುಂಡೆ ಆಪ್ತ ಸಹಾಯಕನ ಪತ್ನಿ ಆತ್ಮಹತ್ಯೆ: ಕಿರುಕುಳ ಆರೋಪ.ಆಸ್ಟ್ರೇಲಿಯಾ ಓಪನ್ ಬ್ಯಾಡ್ಮಿಂಟನ್: ಫೈನಲ್ಗೆ ಲಗ್ಗೆಯಿಟ್ಟ ಲಕ್ಷ್ಯ ಸೇನ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಗೆ ಸಂಬಂಧಿಸಿದಂತೆ ಕೆಲವು ರಾಜ್ಯಗಳಲ್ಲಿ ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್ಒ) ಮತ್ತು ಚುನಾವಣಾ ಅಧಿಕಾರಿಗಳು ಮೃತಪಟ್ಟಿರುವ ಸಂಬಂಧ ಕಾಂಗ್ರೆಸ್, ಕೇಂದ್ರ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದೆ.</p><p>ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಬಿಎಲ್ಒಗಳ ಹಾಗೂ ಚುನಾವಣಾ ಅಧಿಕಾರಿಗಳ ಮೇಲೆ ಕೆಲಸದ ಒತ್ತಡ ಹೇರುತ್ತಿರುವುದರಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ತಮ್ಮ ಪ್ರೀತಿ ಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ಈ ನೋವನ್ನು ಭರಿಸುವ ಶಕ್ತಿ ದೇವರು ಕರುಣಿಸಿ, ಮೃತಪಟ್ಟವರಿಗೆ ನನ್ನ ಸಂತಾಪಗಳು ಎಂದಿದ್ದಾರೆ.</p>.ನೇಪಾಳವನ್ನು ಮಣಿಸಿ ಅಂಧ ಮಹಿಳೆಯರ ಚೊಚ್ಚಲ ಟಿ–20 ವಿಶ್ವಕಪ್ ಗೆದ್ದ ಭಾರತ.ಸನಾತನ ಧರ್ಮ ಉತ್ತೇಜಿಸಲು ಕ್ರಮ: ಬಿಹಾರ ಸರ್ಕಾರದಿಂದ 38 ಸಂಚಾಲಕರ ನೇಮಕ. <p>ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯನ್ನು ಇಷ್ಟು ತರಾತುರಿಯಲ್ಲಿ ಮಾಡುತ್ತಿರುವುದು ಏಕೆ?, ಈ ಆತುರದ ಹಾಗೂ ಬಲವಂತದ ಎಸ್ಐಆರ್ ಕ್ರಮವು ನೋಟು ರದ್ಧತಿ ಹಾಗೂ ಕೋವಿಡ್ ಸಮಯವನ್ನು ನೆನಪಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p><p>ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಸಮಯದಲ್ಲಿ 19 ದಿನಗಳಲ್ಲಿ 16 ಬಿಎಲ್ಒಗಳು ಮೃತಪಟ್ಟಿದ್ದಾರೆ ಎಂದು ಮಾಹಿತಿಯನ್ನು ಹಂಚಿಕೊಂಡಿದ್ದಾರೆ.</p>.ಹೈಕಮಾಂಡ್ ಸೂಚಿಸಿದರೂ ಸಿದ್ದರಾಮಯ್ಯ ಸಿಎಂ ಕುರ್ಚಿ ಬಿಡಲ್ಲ: ಜಗದೀಶ ಶೆಟ್ಟರ್.Video| ಮದುವೆ ಸಂಭ್ರಮದಲ್ಲಿ ಸ್ಮೃತಿ ಮಂದಾನ: ಭಾವಿ ಪತಿಯೊಂದಿಗೆ ಭರ್ಜರಿ ಡ್ಯಾನ್ಸ್. <p>ಬಿಜೆಪಿ ಕದ್ದ ಅಧಿಕಾರದ ಫಲವನ್ನು ಅನುಭವಿಸುವಲ್ಲಿ ನಿರತವಾಗಿದೆ. ಆದರೆ ಚುನಾವಣಾ ಆಯೋಗವು ಮೂಕ ಪ್ರೇಕ್ಷಕರಂತೆ ನೋಡುತ್ತಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ.</p><p>ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಬಿಎಲ್ಒ ಅವರ ಸಾವಿನ ಬಗ್ಗೆ ಆಘಾತ ವ್ಯಕ್ತಪಡಿಸಿದ್ದು, ಇದು ನಿಜವಾಗಿಯೂ ಆತಂಕಕಾರಿ ಎಂದಿದ್ದಾರೆ.</p><p>ಆದರೆ ಬಿಜೆಪಿಯ ಮುಖಂಡ ರಾಹುಲ್ ಸಿನ್ಹಾ ಅವರು ಈ ಆತ್ಮಹತ್ಯೆ ಪತ್ರ 'ನಕಲಿ' ಎಂದಿದ್ದಾರೆ.</p>.ಮಹಾರಾಷ್ಟ್ರ ಸಚಿವೆ ಪಂಕಜಾ ಮುಂಡೆ ಆಪ್ತ ಸಹಾಯಕನ ಪತ್ನಿ ಆತ್ಮಹತ್ಯೆ: ಕಿರುಕುಳ ಆರೋಪ.ಆಸ್ಟ್ರೇಲಿಯಾ ಓಪನ್ ಬ್ಯಾಡ್ಮಿಂಟನ್: ಫೈನಲ್ಗೆ ಲಗ್ಗೆಯಿಟ್ಟ ಲಕ್ಷ್ಯ ಸೇನ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>