<p><strong>ಹೈದರಾಬಾದ್</strong>: ಲೋಕಸಭಾ ಚುನಾವಣೆ ದಿನಾಂಕ ಘೋಷಣೆ ಬೆನ್ನಲ್ಲೇ ತೆಲಂಗಾಣದ ಮಾಜಿ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ನೇತೃತ್ವದ ಭಾರತ ರಾಷ್ಟ್ರ ಸಮಿತಿ(ಬಿಆರ್ಎಸ್) ಪಕ್ಷಕ್ಕೆ ಆಘಾತ ನೀಡಿರುವ ಹಾಲಿ ಶಾಸಕ, ಸಂಸದ, ಪಕ್ಷ ತೊರೆದು ಕಾಂಗ್ರೆಸ್ ಸೇರಿದ್ದಾರೆ.</p><p>ಚೆವೆಳ್ಳ ಕ್ಷೇತ್ರದ ಸಂಸದ ರಂಜಿತ್ ರೆಡ್ಡಿ ಮತ್ತು ಖೈರತಾಬಾದ್ನ ಶಾಸಕ ಡಿ ನಾಗೇಂದ್ರ ಇಂದು ಪಕ್ಷ ತೊರೆದಿದ್ದಾರೆ. ಮುಖ್ಯಮಂತ್ರಿ ರೇವಂತ್ ರೆಡ್ಡಿ ಸಮ್ಮುಖದಲ್ಲಿ ಅವರು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.</p><p>ಬಿಆರ್ಎಸ್ ಪಕ್ಷಕ್ಕೆ ನಾನು ರಾಜೀನಾಮೆ ಸಲ್ಲಿಸಿದ್ದು, ನನ್ನ ಬೆಂಬಲಿಗರಿಗೆ ಈ ವಿಷಯ ತಿಳಿಸಲು ಬಯಸುತ್ತೇನೆ. ಚೆವೆಳ್ಳ ಕ್ಷೇತ್ರದಲ್ಲಿ ಜನರ ಸೇವೆ ಮಾಡಲು ನನಗೆ ಅರ್ಥಪೂರ್ಣ ಅವಕಾಶ ಕೊಟ್ಟ ಬಿಆರ್ಎಸ್ ಪಕ್ಷಕ್ಕೆ ಧನ್ಯವಾದ ಹೇಳಲು ಇಚ್ಛಿಸುತ್ತೇನೆ. ಬದಲಾದ ರಾಜಕೀಯ ಪರಿಸ್ಥಿತಿ ಹಿನ್ನೆಲೆಯಲ್ಲಿ ಈ ಕಠಿಣ ನಿರ್ಧಾರ ಕೈಗೊಂಡಿದ್ದೇನೆ’ ಎಂದು ಅವರು ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.</p><p>ಇವತ್ತು ಇತರೆ ಪಕ್ಷಗಳ ನಾಯಕರಿಗೆ ನಾವು ಬಾಗಿಲು ತೆರೆದಿದ್ದೇವೆ ಎಂದು ಪತ್ರಿಕಾಗೋಷ್ಠಿಯಲ್ಲಿ ರೇವಂತ್ ರೆಡ್ಡಿ ಹೇಳಿದ್ದಾರೆ.</p><p>ವಾರಂಗಲ್ ಕ್ಷೇತ್ರದ ಸಂಸದ ಪಸುನೂರಿ ದಯಾಕರ್ ಶನಿವಾರ ಕಾಂಗ್ರೆಸ್ ಸೇರಿದ್ದರು.</p><p>ಈ ಹಿಂದೆ ಬಿಆರ್ಎಸ್ ಪಕ್ಷದ ಜಹೀರಾಬಾದ್ ಮತ್ತು ನಾಗರ್ ಕರ್ನೂಲ್ನ ಸಂಸದರಾದ ಬಿ.ವಿ. ಪಾಟೀಲ್ ಮತ್ತು ಬಿ. ರಾಮುಲು ಬಿಜೆಪಿ ಸೇರಿದ್ದರು.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್</strong>: ಲೋಕಸಭಾ ಚುನಾವಣೆ ದಿನಾಂಕ ಘೋಷಣೆ ಬೆನ್ನಲ್ಲೇ ತೆಲಂಗಾಣದ ಮಾಜಿ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ನೇತೃತ್ವದ ಭಾರತ ರಾಷ್ಟ್ರ ಸಮಿತಿ(ಬಿಆರ್ಎಸ್) ಪಕ್ಷಕ್ಕೆ ಆಘಾತ ನೀಡಿರುವ ಹಾಲಿ ಶಾಸಕ, ಸಂಸದ, ಪಕ್ಷ ತೊರೆದು ಕಾಂಗ್ರೆಸ್ ಸೇರಿದ್ದಾರೆ.</p><p>ಚೆವೆಳ್ಳ ಕ್ಷೇತ್ರದ ಸಂಸದ ರಂಜಿತ್ ರೆಡ್ಡಿ ಮತ್ತು ಖೈರತಾಬಾದ್ನ ಶಾಸಕ ಡಿ ನಾಗೇಂದ್ರ ಇಂದು ಪಕ್ಷ ತೊರೆದಿದ್ದಾರೆ. ಮುಖ್ಯಮಂತ್ರಿ ರೇವಂತ್ ರೆಡ್ಡಿ ಸಮ್ಮುಖದಲ್ಲಿ ಅವರು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.</p><p>ಬಿಆರ್ಎಸ್ ಪಕ್ಷಕ್ಕೆ ನಾನು ರಾಜೀನಾಮೆ ಸಲ್ಲಿಸಿದ್ದು, ನನ್ನ ಬೆಂಬಲಿಗರಿಗೆ ಈ ವಿಷಯ ತಿಳಿಸಲು ಬಯಸುತ್ತೇನೆ. ಚೆವೆಳ್ಳ ಕ್ಷೇತ್ರದಲ್ಲಿ ಜನರ ಸೇವೆ ಮಾಡಲು ನನಗೆ ಅರ್ಥಪೂರ್ಣ ಅವಕಾಶ ಕೊಟ್ಟ ಬಿಆರ್ಎಸ್ ಪಕ್ಷಕ್ಕೆ ಧನ್ಯವಾದ ಹೇಳಲು ಇಚ್ಛಿಸುತ್ತೇನೆ. ಬದಲಾದ ರಾಜಕೀಯ ಪರಿಸ್ಥಿತಿ ಹಿನ್ನೆಲೆಯಲ್ಲಿ ಈ ಕಠಿಣ ನಿರ್ಧಾರ ಕೈಗೊಂಡಿದ್ದೇನೆ’ ಎಂದು ಅವರು ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.</p><p>ಇವತ್ತು ಇತರೆ ಪಕ್ಷಗಳ ನಾಯಕರಿಗೆ ನಾವು ಬಾಗಿಲು ತೆರೆದಿದ್ದೇವೆ ಎಂದು ಪತ್ರಿಕಾಗೋಷ್ಠಿಯಲ್ಲಿ ರೇವಂತ್ ರೆಡ್ಡಿ ಹೇಳಿದ್ದಾರೆ.</p><p>ವಾರಂಗಲ್ ಕ್ಷೇತ್ರದ ಸಂಸದ ಪಸುನೂರಿ ದಯಾಕರ್ ಶನಿವಾರ ಕಾಂಗ್ರೆಸ್ ಸೇರಿದ್ದರು.</p><p>ಈ ಹಿಂದೆ ಬಿಆರ್ಎಸ್ ಪಕ್ಷದ ಜಹೀರಾಬಾದ್ ಮತ್ತು ನಾಗರ್ ಕರ್ನೂಲ್ನ ಸಂಸದರಾದ ಬಿ.ವಿ. ಪಾಟೀಲ್ ಮತ್ತು ಬಿ. ರಾಮುಲು ಬಿಜೆಪಿ ಸೇರಿದ್ದರು.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>