ಶ್ರೀನಗರ: ಇಲ್ಲಿನ ಹೊರವಲಯದಲ್ಲಿರುವ ಝೀಲಂ ನದಿಯಲ್ಲಿ ದೋಣಿ ಮುಳುಗಿದ್ದು, ಆರು ಮಂದಿ ಮೃತಪಟ್ಟಿದ್ದು ಕೆಲವರು ನಾಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಂಗಳವಾರ ಬೆಳಗ್ಗೆ ಈ ಘಟನೆ ಸಂಭವಿಸಿದೆ. ದೋಣಿಯಲ್ಲಿ 7 ಅಪ್ರಾಪ್ತರು ಮತ್ತು 8 ವಯಸ್ಕರು ಸೇರಿದಂತೆ 15 ಜನರಿದ್ದರು. 3 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 3 ಜನ ಸುರಕ್ಷಿತವಾಗಿದ್ದು ಮನೆಗೆ ಕಳುಹಿಸಲಾಗಿದೆ. ಎನ್ಡಿಆರ್ಎಫ್, ಎಸ್ಡಿಆರ್ಎಫ್ ಮತ್ತು ಸೇನಾ ತಂಡಗಳು ಸ್ಥಳದಲ್ಲಿದ್ದು ರಕ್ಷಣಾ ಕಾರ್ಯಾಚರಣೆ ಮುಂದರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.