ವಡೋದರ, ಗುಜರಾತ್ (ಪಿಟಿಐ): ನಗರ ಹೊರವಲಯದ ಕೆರೆಯೊಂದರಲ್ಲಿ ಗುರುವಾರ ದೋಣಿ ಮಗುಚಿಕೊಂಡಿದ್ದು, ಪ್ರವಾಸ ತೆರಳಿದ್ದ 14 ವಿದ್ಯಾರ್ಥಿಗಳು ಮತ್ತು ಇಬ್ಬರು ಶಿಕ್ಷಕರು ಮೃತಪಟ್ಟಿದ್ದಾರೆ.
ಶಾಲೆಯೊಂದರ 24 ವಿದ್ಯಾರ್ಥಿಗಳು, ನಾಲ್ವರು ಶಿಕ್ಷಕರು ಪ್ರವಾಸ ತೆರಳಿದ್ದರು. ಹೊರವಲಯದ ಹರ್ನಿ ಕೆರೆಯಲ್ಲಿ ಅವಘಡ ಸಂಭವಿಸಿದೆ.
ನಾಪತ್ತೆಯಾಗಿರುವ ಇತರರಿಗೆ ಶೋಧ ಕಾರ್ಯ ನಡೆದಿದೆ. ಸದ್ಯ, 14 ಮಕ್ಕಳು ಮತ್ತು ಇಬ್ಬರು ಶಿಕ್ಷಕರ ಶವ ಪತ್ತೆಯಾಗಿದೆ. ಒಬ್ಬ ವಿದ್ಯಾರ್ಥಿಯನ್ನು ರಕ್ಷಿಸಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದರು.
ಕೆರೆಯಲ್ಲಿ ದೋಣಿ ಮಗುಚಿ ಪಿಕ್ನಿಕ್ಗೆ ಹೊರಟಿದ್ದ 14 ಮಕ್ಕಳು, ಇಬ್ಬರು ಶಿಕ್ಷಕರು ಸಾವಿಗೀಡಾಗಿರುವ ದುರ್ಘಟನೆ ಗುಜರಾತ್ನ ಅಹಮದಾಬಾದ್ನಲ್ಲಿ ಗುರುವಾರ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೃತ ಮಕ್ಕಳೆಲ್ಲ ಹತ್ತು ವರ್ಷದವರಾಗಿದ್ದಾರೆ. ಘಟನೆಗೆ ಕಾರಣ ತಿಳಿದುಬಂದಿಲ್ಲ. ದೋಣಿಯಲ್ಲಿ ತೆರಳಿದ್ದವರಲ್ಲಿ ಯಾರೂ ಜೀವರಕ್ಷಕ ಕವಚ ಧರಿಸಿರಲಿಲ್ಲ ಎಂದು ಘಟನೆಯ ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ದುರಂತಕ್ಕೆ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಸಂತಾಪ ವ್ಯಕ್ತಪಡಿಸಿದ್ದಾರೆ.
Distressed by the loss of lives due to a boat capsizing at the Harni lake in Vadodara. My thoughts are with the bereaved families in this hour of grief. May the injured recover soon. The local administration is providing all possible assistance to those affected.
— PMO India (@PMOIndia) January 18, 2024
An ex-gratia…
गुजरात के वडोदरा में नाव दुर्घटना में बच्चों और अध्यापकों की मृत्यु का समाचार अत्यंत दुखद है। मैं शोक संतप्त परिवारजनों के प्रति गहन संवेदना व्यक्त करती हूं और बचाव कार्य की सफलता की कामना करती हूं।
— President of India (@rashtrapatibhvn) January 18, 2024
વડોદરાના હરણી તળાવમાં બોટ પલટી જતાં બાળકોના ડૂબવાની ઘટના અત્યંત હૃદયવિદારક છે. જાન ગુમાવનાર નિર્દોષ બાળકોના આત્માની શાંતિ માટે પ્રાર્થના કરું છું.
— Bhupendra Patel (@Bhupendrapbjp) January 18, 2024
દુ:ખની આ ઘડીમાં તેમના પરિવારજનો પ્રત્યે આત્મીય સંવેદના વ્યક્ત કરું છું. પરમકૃપાળુ પરમાત્મા તેમને આ દુ:ખ સહન કરવાની શક્તિ આપે.…
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.