<p><strong>ಲಖನೌ</strong>: ಉತ್ತರಪ್ರದೇಶದ ಫರೂಖಬಾದ್ ಜಿಲ್ಲೆಯಲ್ಲಿ ದಲಿತ ಇಬ್ಬರು ಬಾಲಕಿಯರಿಬ್ಬರ ಶವಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿವೆ.</p>.<p>‘ಭಗವತಿಪುರ ಗ್ರಾಮದಲ್ಲಿನ ಮಾವಿನ ಮರದಲ್ಲಿ ಬಾಲಕಿಯರ ಶವಗಳು ಪತ್ತೆಯಾಗಿದ್ದವು. 15ರಿಂದ 17 ವಯಸ್ಸಿನ ಬಾಲಕಿಯರು ಗೆಳತಿಯರಾಗಿದ್ದರು’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<p>‘ಸೋಮವಾರ ರಾತ್ರಿ ಸ್ಥಳೀಯ ದೇವಸ್ಥಾನವೊಂದರಲ್ಲಿ ನಡೆಯುತ್ತಿದ್ದ ಕೃಷ್ಣ ಜನ್ಮಾಷ್ಟಮಿ ಆಚರಣೆಗೆ ತೆರಳಿದ್ದ ಬಾಲಕಿಯರು ಮನೆಗೆ ವಾಪಾಸಾಗಿರಲಿಲ್ಲ. ಕುಟುಂಬಸ್ಥರು ಹುಡುಕಾಟ ನಡೆಸಿದರೂ ಅವರ ಸುಳಿವು ಪತ್ತೆಯಾಗಿರಲಿಲ್ಲ. ಮಂಗಳವಾರ ಗ್ರಾಮಸ್ಥರೊಬ್ಬರಿಗೆ ಅವರ ಶವಗಳು ಕಂಡುಬಂದಿವೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<p>‘ಮೇಲ್ನೋಟಕ್ಕೆ ಇದು ಆತ್ಮಹತ್ಯೆಯಂತೆ ಕಂಡುಬರುತ್ತಿದ್ದು, ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕ ಖಚಿತವಾಗಿ ತಿಳಿಸಲಾಗುವುದು’ ಎಂದು ಪೊಲೀಸ್ ಅಧಿಕಾರಿಗಳು ಹೆಳಿದ್ದಾರೆ.</p>.<p>‘ಶವಗಳ ಬಳಿ ಯುವಕನೊಬ್ಬನ ಮೊಬೈಲ್ ಮತ್ತು ಮೃತಪಟ್ಟಿರುವ ಒಬ್ಬ ಬಾಲಕಿಯ ಜೇಬಿನಲ್ಲಿ ಸಿಮ್ ಕಾರ್ಡ್ ಪತ್ತೆಯಾಗಿದೆ’ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p>‘ಬಾಲಕಿಯರನ್ನು ಕೊಲೆ ಮಾಡಿ, ಬಳಿಕ ಅವರ ಮೃತದೇಹಗಳನ್ನು ಮರಕ್ಕೆ ನೇತುಹಾಕಲಾಗಿದೆ’ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ</strong>: ಉತ್ತರಪ್ರದೇಶದ ಫರೂಖಬಾದ್ ಜಿಲ್ಲೆಯಲ್ಲಿ ದಲಿತ ಇಬ್ಬರು ಬಾಲಕಿಯರಿಬ್ಬರ ಶವಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿವೆ.</p>.<p>‘ಭಗವತಿಪುರ ಗ್ರಾಮದಲ್ಲಿನ ಮಾವಿನ ಮರದಲ್ಲಿ ಬಾಲಕಿಯರ ಶವಗಳು ಪತ್ತೆಯಾಗಿದ್ದವು. 15ರಿಂದ 17 ವಯಸ್ಸಿನ ಬಾಲಕಿಯರು ಗೆಳತಿಯರಾಗಿದ್ದರು’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<p>‘ಸೋಮವಾರ ರಾತ್ರಿ ಸ್ಥಳೀಯ ದೇವಸ್ಥಾನವೊಂದರಲ್ಲಿ ನಡೆಯುತ್ತಿದ್ದ ಕೃಷ್ಣ ಜನ್ಮಾಷ್ಟಮಿ ಆಚರಣೆಗೆ ತೆರಳಿದ್ದ ಬಾಲಕಿಯರು ಮನೆಗೆ ವಾಪಾಸಾಗಿರಲಿಲ್ಲ. ಕುಟುಂಬಸ್ಥರು ಹುಡುಕಾಟ ನಡೆಸಿದರೂ ಅವರ ಸುಳಿವು ಪತ್ತೆಯಾಗಿರಲಿಲ್ಲ. ಮಂಗಳವಾರ ಗ್ರಾಮಸ್ಥರೊಬ್ಬರಿಗೆ ಅವರ ಶವಗಳು ಕಂಡುಬಂದಿವೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<p>‘ಮೇಲ್ನೋಟಕ್ಕೆ ಇದು ಆತ್ಮಹತ್ಯೆಯಂತೆ ಕಂಡುಬರುತ್ತಿದ್ದು, ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕ ಖಚಿತವಾಗಿ ತಿಳಿಸಲಾಗುವುದು’ ಎಂದು ಪೊಲೀಸ್ ಅಧಿಕಾರಿಗಳು ಹೆಳಿದ್ದಾರೆ.</p>.<p>‘ಶವಗಳ ಬಳಿ ಯುವಕನೊಬ್ಬನ ಮೊಬೈಲ್ ಮತ್ತು ಮೃತಪಟ್ಟಿರುವ ಒಬ್ಬ ಬಾಲಕಿಯ ಜೇಬಿನಲ್ಲಿ ಸಿಮ್ ಕಾರ್ಡ್ ಪತ್ತೆಯಾಗಿದೆ’ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p>‘ಬಾಲಕಿಯರನ್ನು ಕೊಲೆ ಮಾಡಿ, ಬಳಿಕ ಅವರ ಮೃತದೇಹಗಳನ್ನು ಮರಕ್ಕೆ ನೇತುಹಾಕಲಾಗಿದೆ’ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>