<p><strong>ಪಟ್ನಾ:</strong> ಗಂಗಾ ನದಿಯದಡದಲ್ಲಿ ಸೋಮವಾರ ಮೃತದೇಹಗಳ ರಾಶಿ ಪತ್ತೆಯಾಗಿರುವುದು ದುರುದುಷ್ಟಕರ ಎಂದಿರುವಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಘಟನೆ ಬಗ್ಗೆ ತನಿಖೆ ನಡೆಸುವಂತೆ ಬಿಹಾರ ಮತ್ತು ಉತ್ತರ ಪ್ರದೇಶ ರಾಜ್ಯಗಳಿಗೆ ಸೂಚನೆ ನೀಡಿದ್ದಾರೆ.</p>.<p>ಬಿಹಾರದ ಬಕ್ಸಾರ್ ಜಿಲ್ಲೆಯ ಚೌಸಾ ಗ್ರಾಮದ ಗಂಗಾ ಮಹಾದೇವ್ ಘಾಟ್ ಬಳಿ 12ಕ್ಕೂ ಹೆಚ್ಚು ಹೆಣಗಳು ತೇಲಿ ಬಂದು ದಡ ಸೇರಿದ್ದವು. ಈ ವೇಳೆ ನಾಯಿಗಳು ಶವಗಳನ್ನು ಕಿತ್ತು ತಿನ್ನುವ ಭಯಾನಕ ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದವು.</p>.<p><strong>ಓದಿ:</strong><a href="https://www.prajavani.net/india-news/bodies-of-suspected-covid-19-victims-found-floating-in-ganges-in-bihar-829522.html" itemprop="url">ಗಂಗಾ ನದಿಯಲ್ಲಿ ತೇಲುತ್ತಿರುವ ಮೃತದೇಹಗಳು: ಕೋವಿಡ್ ಸೋಂಕಿತರದ್ದೆಂಬ ಶಂಕೆ</a></p>.<p>ಗಂಗಾ ನದಿ ಹರಿಯುವ ಉತ್ತರ ಪ್ರದೇಶ,ಬಿಹಾರದಲ್ಲೂ ನದಿಯ ತೀರದಲ್ಲಿ ಶವಗಳು ಪತ್ತೆಯಾಗಿದ್ದವು. ಶವಗಳ ಮೇಲೆ ಸೀಲ್ ಮಾರ್ಕ್ ಇರುವುದು ಪತ್ತೆಯಾಗಿರುವುದರಿಂದ ಅವು ಕೋವಿಡ್ ಮೃತದೇಹಗಳು ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದರು.</p>.<p>ಈ ಘಟನೆ ಸಂಬಂಧ ಉಭಯ ರಾಜ್ಯಗಳು ತನಿಖೆ ನಡೆಸಬೇಕು ಎಂದು ಗಜೇಂದ್ರ ಸಿಂಗ್ ಶೇಖಾವತ್ ಸೂಚಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಟ್ನಾ:</strong> ಗಂಗಾ ನದಿಯದಡದಲ್ಲಿ ಸೋಮವಾರ ಮೃತದೇಹಗಳ ರಾಶಿ ಪತ್ತೆಯಾಗಿರುವುದು ದುರುದುಷ್ಟಕರ ಎಂದಿರುವಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಘಟನೆ ಬಗ್ಗೆ ತನಿಖೆ ನಡೆಸುವಂತೆ ಬಿಹಾರ ಮತ್ತು ಉತ್ತರ ಪ್ರದೇಶ ರಾಜ್ಯಗಳಿಗೆ ಸೂಚನೆ ನೀಡಿದ್ದಾರೆ.</p>.<p>ಬಿಹಾರದ ಬಕ್ಸಾರ್ ಜಿಲ್ಲೆಯ ಚೌಸಾ ಗ್ರಾಮದ ಗಂಗಾ ಮಹಾದೇವ್ ಘಾಟ್ ಬಳಿ 12ಕ್ಕೂ ಹೆಚ್ಚು ಹೆಣಗಳು ತೇಲಿ ಬಂದು ದಡ ಸೇರಿದ್ದವು. ಈ ವೇಳೆ ನಾಯಿಗಳು ಶವಗಳನ್ನು ಕಿತ್ತು ತಿನ್ನುವ ಭಯಾನಕ ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದವು.</p>.<p><strong>ಓದಿ:</strong><a href="https://www.prajavani.net/india-news/bodies-of-suspected-covid-19-victims-found-floating-in-ganges-in-bihar-829522.html" itemprop="url">ಗಂಗಾ ನದಿಯಲ್ಲಿ ತೇಲುತ್ತಿರುವ ಮೃತದೇಹಗಳು: ಕೋವಿಡ್ ಸೋಂಕಿತರದ್ದೆಂಬ ಶಂಕೆ</a></p>.<p>ಗಂಗಾ ನದಿ ಹರಿಯುವ ಉತ್ತರ ಪ್ರದೇಶ,ಬಿಹಾರದಲ್ಲೂ ನದಿಯ ತೀರದಲ್ಲಿ ಶವಗಳು ಪತ್ತೆಯಾಗಿದ್ದವು. ಶವಗಳ ಮೇಲೆ ಸೀಲ್ ಮಾರ್ಕ್ ಇರುವುದು ಪತ್ತೆಯಾಗಿರುವುದರಿಂದ ಅವು ಕೋವಿಡ್ ಮೃತದೇಹಗಳು ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದರು.</p>.<p>ಈ ಘಟನೆ ಸಂಬಂಧ ಉಭಯ ರಾಜ್ಯಗಳು ತನಿಖೆ ನಡೆಸಬೇಕು ಎಂದು ಗಜೇಂದ್ರ ಸಿಂಗ್ ಶೇಖಾವತ್ ಸೂಚಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>