<p class="title"><strong>ನವದೆಹಲಿ</strong>: ಶಂಕಿತ ಕೋವಿಡ್ ರೋಗಿಗಳು ಮೃತಪಟ್ಟರೆ, ಅವರ ಶವಗಳನ್ನು ಸಂಬಂಧಿಕರಿಗೆ ತಕ್ಷಣವೇ ಹಸ್ತಾಂತರಿಸಬೇಕು. ತಪಾಸಣಾ ವರದಿ ಬರುವವರೆಗೆ ಕಾಯುವ ಅಗತ್ಯ ಇಲ್ಲ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ತಿಳಿಸಿದೆ.</p>.<p class="title">ಆದರೆ ಅಂತ್ಯಕ್ರಿಯೆಯು ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳ ಪ್ರಕಾರವೇ ನಡೆಯಬೇಕು ಎಂದು ಎಲ್ಲ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರ ಬರೆದು ಸೂಚನೆ ನೀಡಿದೆ.</p>.<p class="title">ಕೋವಿಡ್ ಪರೀಕ್ಷಾ ವರದಿಗಳು ತಡವಾಗಿ ಬರುತ್ತಿದ್ದು, ಮೃತದೇಹಗಳನ್ನು ಸಂಬಂಧಿಕರಿಗೆ ನೀಡಲು ಆಸ್ಪತ್ರೆಗಳು ವಿಳಂಬ ಮಾಡುತ್ತಿವೆ ಎಂಬ ವರದಿಗಳನ್ನು ಆಧರಿಸಿ ಸಚಿವಾಲಯ ಈ ಆದೇಶ ಹೊರಡಿಸಿದೆ.</p>.<p class="title">‘ಮೃತದೇಹಗಳ ವಿಲೇವಾರಿ ಕುರಿತಂತೆ ಸಚಿವಾಲಯದ ವೆಬ್ಸೈಟ್ನಲ್ಲಿರುವ ಮಾರ್ಗಸೂಚಿಗಳನ್ನು ಪಾಲಿಸಬೇಕು. ಅಂತ್ಯಕ್ರಿಯೆ ನಡೆಸುವವರು ಪಿಪಿಇ ಕಿಟ್ ಧರಿಸಿರಬೇಕು. ಅಂತ್ಯಕ್ರಿಯೆ ನಡೆದ ಬಳಿಕ ತಪಾಸಣಾ ವರದಿಯಲ್ಲಿ ಕೋವಿಡ್ ಇರುವುದು ದೃಢಪಟ್ಟಲ್ಲಿ, ರೋಗಿಯ ಸಂಪರ್ಕಿತರ ಪಟ್ಟಿ ತಯಾರಿಸುವ ಹಾಗೂ ಅವರನ್ನು ಪತ್ತೆಹಚ್ಚುವ ಕೆಲಸವನ್ನು ತಕ್ಷಣ ಆರಂಭಿಸಬೇಕು ’ ಎಂದು ಸಚಿವಾಲಯ ತಿಳಿಸಿದೆ.</p>.<p class="title">ಭಾರತದಲ್ಲಿ ಕೋವಿಡ್ನಿಂದ ಈವರೆಗೆ 17,834 ಮಂದಿ ಮೃತಪಟ್ಟಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ</strong>: ಶಂಕಿತ ಕೋವಿಡ್ ರೋಗಿಗಳು ಮೃತಪಟ್ಟರೆ, ಅವರ ಶವಗಳನ್ನು ಸಂಬಂಧಿಕರಿಗೆ ತಕ್ಷಣವೇ ಹಸ್ತಾಂತರಿಸಬೇಕು. ತಪಾಸಣಾ ವರದಿ ಬರುವವರೆಗೆ ಕಾಯುವ ಅಗತ್ಯ ಇಲ್ಲ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ತಿಳಿಸಿದೆ.</p>.<p class="title">ಆದರೆ ಅಂತ್ಯಕ್ರಿಯೆಯು ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳ ಪ್ರಕಾರವೇ ನಡೆಯಬೇಕು ಎಂದು ಎಲ್ಲ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರ ಬರೆದು ಸೂಚನೆ ನೀಡಿದೆ.</p>.<p class="title">ಕೋವಿಡ್ ಪರೀಕ್ಷಾ ವರದಿಗಳು ತಡವಾಗಿ ಬರುತ್ತಿದ್ದು, ಮೃತದೇಹಗಳನ್ನು ಸಂಬಂಧಿಕರಿಗೆ ನೀಡಲು ಆಸ್ಪತ್ರೆಗಳು ವಿಳಂಬ ಮಾಡುತ್ತಿವೆ ಎಂಬ ವರದಿಗಳನ್ನು ಆಧರಿಸಿ ಸಚಿವಾಲಯ ಈ ಆದೇಶ ಹೊರಡಿಸಿದೆ.</p>.<p class="title">‘ಮೃತದೇಹಗಳ ವಿಲೇವಾರಿ ಕುರಿತಂತೆ ಸಚಿವಾಲಯದ ವೆಬ್ಸೈಟ್ನಲ್ಲಿರುವ ಮಾರ್ಗಸೂಚಿಗಳನ್ನು ಪಾಲಿಸಬೇಕು. ಅಂತ್ಯಕ್ರಿಯೆ ನಡೆಸುವವರು ಪಿಪಿಇ ಕಿಟ್ ಧರಿಸಿರಬೇಕು. ಅಂತ್ಯಕ್ರಿಯೆ ನಡೆದ ಬಳಿಕ ತಪಾಸಣಾ ವರದಿಯಲ್ಲಿ ಕೋವಿಡ್ ಇರುವುದು ದೃಢಪಟ್ಟಲ್ಲಿ, ರೋಗಿಯ ಸಂಪರ್ಕಿತರ ಪಟ್ಟಿ ತಯಾರಿಸುವ ಹಾಗೂ ಅವರನ್ನು ಪತ್ತೆಹಚ್ಚುವ ಕೆಲಸವನ್ನು ತಕ್ಷಣ ಆರಂಭಿಸಬೇಕು ’ ಎಂದು ಸಚಿವಾಲಯ ತಿಳಿಸಿದೆ.</p>.<p class="title">ಭಾರತದಲ್ಲಿ ಕೋವಿಡ್ನಿಂದ ಈವರೆಗೆ 17,834 ಮಂದಿ ಮೃತಪಟ್ಟಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>