<p><strong>ನವದೆಹಲಿ</strong>: ಅಹಮದಾಬಾದ್ ವಿಮಾನ ದುರಂತಕ್ಕೆ ಸಂಬಂಧಪಟ್ಟಂತೆ ಪ್ರಾಥಮಿಕ ವರದಿ ಬಿಡುಗಡೆಯಾದ ಬೆನ್ನಲ್ಲೇ ತನಿಖೆಗೆ ಸಂಪೂರ್ಣ ಸಹಕಾರ ನೀಡುವುದಾಗಿ ವಿಮಾನ ತಯಾರಕ ಕಂಪನಿ ಬೋಯಿಂಗ್ ತಿಳಿಸಿದೆ.</p><p>ವಿಮಾನ ಅಘಘಾತಗಳ ತನಿಖಾ ಸಂಸ್ಥೆಯು(ಎಎಐಬಿ) ಶುಕ್ರವಾರ ತಡರಾತ್ರಿ ಪ್ರಾಥಮಿಕ ವರದಿಯನ್ನು ಬಿಡುಗಡೆ ಮಾಡಿದೆ. ವರದಿಯಲ್ಲಿ ಬೋಯಿಂಗ್ 787-8 ವಿಮಾನ ನಿರ್ವಾಹಕರ ಮೇಲೆ ಸದ್ಯಕ್ಕೆ ಯಾವುದೇ ಕ್ರಮ ಕೈಗೊಳ್ಳಬಾರದು ಎಂದು ಶಿಫಾರಸು ಮಾಡಿದೆ.</p><p>ವರದಿ ಬಿಡುಗಡೆಯಾಗುತ್ತಿದ್ದಂತೆ ಎಕ್ಸ್ನಲ್ಲಿ ಪ್ರತಿಕ್ರಿಯಿಸಿರುವ ಬೋಯಿಂಗ್ ಮುಖ್ಯಸ್ಥ ಕೆಲ್ಲಿ ಆರ್ಟ್ಬರ್ಗ್, ತನಿಖೆಗೆ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದ್ದಾರೆ.</p>.<p>‘ವಿಮಾನ ದುರಂತದಲ್ಲಿ ಪ್ರೀತಿ ಪಾತ್ರರನ್ನು ಕಳೆದುಕೊಂಡ ಕುಟುಂಬದವರೊಂದಿಗೆ ನಾವಿದ್ದೇವೆ. ಏರ್ ಇಂಡಿಯಾ ಮುಖ್ಯಸ್ಥ ಎನ್. ಚಂದ್ರಶೇಖರನ್ ಅವರೊಂದಿಗೆ ಮಾತನಾಡಿದ್ದು ಸಂಪೂರ್ಣ ಬೆಂಬಲ ನೀಡುವುದಾಗಿ ತಿಳಿಸಿದ್ದೇವೆ. ಭಾರತದ ವಿಮಾನ ಅಪಘಾತ ತನಿಖಾ ಸಂಸ್ಥೆ ನೇತೃತ್ವದಲ್ಲಿ ನಡೆಯುತ್ತಿರುವ ತನಿಖೆಗೂ ಸಂಪೂರ್ಣ ಸಹಕಾರ ನೀಡುತ್ತೇವೆ’ ಎಂದಿದ್ದಾರೆ.</p><p>ಜೂನ್ 12ರಂದು ಅಹಮದಾಬಾದ್ನಿಂದ ಲಂಡನ್ಗೆ ಹೊರಟಿದ್ದ ಏರ್ ಇಂಡಿಯಾದ ಬೋಯಿಂಗ್ ಡ್ರೀಮ್ಲೈನರ್ 787-8 ವಿಮಾನವು ಟೆಕಾಫ್ ಆದ ಕೆಲವೇ ಕ್ಷಣಗಳಲ್ಲಿ ಪತನಗೊಂಡಿತ್ತು. ವಿಮಾನದಲ್ಲಿದ್ದ 241 ಮಂದಿ ಸೇರಿ 260 ಜನ ಮೃತಪಟ್ಟಿದ್ದರು.</p>.ಅಹಮದಾಬಾದ್ ವಿಮಾನ ಅಪಘಾತ | ಇಂಧನ ಪೂರೈಕೆ ಸ್ಥಗಿತವೇ ದುರಂತಕ್ಕೆ ಕಾರಣ: ವರದಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಅಹಮದಾಬಾದ್ ವಿಮಾನ ದುರಂತಕ್ಕೆ ಸಂಬಂಧಪಟ್ಟಂತೆ ಪ್ರಾಥಮಿಕ ವರದಿ ಬಿಡುಗಡೆಯಾದ ಬೆನ್ನಲ್ಲೇ ತನಿಖೆಗೆ ಸಂಪೂರ್ಣ ಸಹಕಾರ ನೀಡುವುದಾಗಿ ವಿಮಾನ ತಯಾರಕ ಕಂಪನಿ ಬೋಯಿಂಗ್ ತಿಳಿಸಿದೆ.</p><p>ವಿಮಾನ ಅಘಘಾತಗಳ ತನಿಖಾ ಸಂಸ್ಥೆಯು(ಎಎಐಬಿ) ಶುಕ್ರವಾರ ತಡರಾತ್ರಿ ಪ್ರಾಥಮಿಕ ವರದಿಯನ್ನು ಬಿಡುಗಡೆ ಮಾಡಿದೆ. ವರದಿಯಲ್ಲಿ ಬೋಯಿಂಗ್ 787-8 ವಿಮಾನ ನಿರ್ವಾಹಕರ ಮೇಲೆ ಸದ್ಯಕ್ಕೆ ಯಾವುದೇ ಕ್ರಮ ಕೈಗೊಳ್ಳಬಾರದು ಎಂದು ಶಿಫಾರಸು ಮಾಡಿದೆ.</p><p>ವರದಿ ಬಿಡುಗಡೆಯಾಗುತ್ತಿದ್ದಂತೆ ಎಕ್ಸ್ನಲ್ಲಿ ಪ್ರತಿಕ್ರಿಯಿಸಿರುವ ಬೋಯಿಂಗ್ ಮುಖ್ಯಸ್ಥ ಕೆಲ್ಲಿ ಆರ್ಟ್ಬರ್ಗ್, ತನಿಖೆಗೆ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದ್ದಾರೆ.</p>.<p>‘ವಿಮಾನ ದುರಂತದಲ್ಲಿ ಪ್ರೀತಿ ಪಾತ್ರರನ್ನು ಕಳೆದುಕೊಂಡ ಕುಟುಂಬದವರೊಂದಿಗೆ ನಾವಿದ್ದೇವೆ. ಏರ್ ಇಂಡಿಯಾ ಮುಖ್ಯಸ್ಥ ಎನ್. ಚಂದ್ರಶೇಖರನ್ ಅವರೊಂದಿಗೆ ಮಾತನಾಡಿದ್ದು ಸಂಪೂರ್ಣ ಬೆಂಬಲ ನೀಡುವುದಾಗಿ ತಿಳಿಸಿದ್ದೇವೆ. ಭಾರತದ ವಿಮಾನ ಅಪಘಾತ ತನಿಖಾ ಸಂಸ್ಥೆ ನೇತೃತ್ವದಲ್ಲಿ ನಡೆಯುತ್ತಿರುವ ತನಿಖೆಗೂ ಸಂಪೂರ್ಣ ಸಹಕಾರ ನೀಡುತ್ತೇವೆ’ ಎಂದಿದ್ದಾರೆ.</p><p>ಜೂನ್ 12ರಂದು ಅಹಮದಾಬಾದ್ನಿಂದ ಲಂಡನ್ಗೆ ಹೊರಟಿದ್ದ ಏರ್ ಇಂಡಿಯಾದ ಬೋಯಿಂಗ್ ಡ್ರೀಮ್ಲೈನರ್ 787-8 ವಿಮಾನವು ಟೆಕಾಫ್ ಆದ ಕೆಲವೇ ಕ್ಷಣಗಳಲ್ಲಿ ಪತನಗೊಂಡಿತ್ತು. ವಿಮಾನದಲ್ಲಿದ್ದ 241 ಮಂದಿ ಸೇರಿ 260 ಜನ ಮೃತಪಟ್ಟಿದ್ದರು.</p>.ಅಹಮದಾಬಾದ್ ವಿಮಾನ ಅಪಘಾತ | ಇಂಧನ ಪೂರೈಕೆ ಸ್ಥಗಿತವೇ ದುರಂತಕ್ಕೆ ಕಾರಣ: ವರದಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>