<p><strong>ನವದೆಹಲಿ/ರಾಂಚಿ</strong>: ಉತ್ತರ ಜಾರ್ಖಂಡ್ನ ಬೊಕಾರೊ ವಲಯದಲ್ಲಿ ನಕ್ಸಲ್ ಚಟುವಟಿಕೆಗಳನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.</p>.<p>ಜಾರ್ಖಂಡ್ನ ಹಜಾರಿಬಾಗ್ ಜಿಲ್ಲೆಯಲ್ಲಿ ಸೋಮವಾರ ಬೆಳಿಗ್ಗೆ ಭದ್ರತಾ ಪಡೆಗಳೊಂದಿಗಿನ ಗುಂಡಿನ ಚಕಮಕಿಯಲ್ಲಿ ಮೂವರು ನಕ್ಸಲರು ಮೃತಪಟ್ಟಿದ್ದಾರೆ.</p>.<p>ನಕ್ಸಲ್ ಕಮಾಂಡರ್ ಸಹದೇವ್ ಸೊರೇನ್ ಅಲಿಯಾಸ್ ಪರ್ವೇಶ್, ರಘುನಾಥ್ ಹೆಂಬ್ರಾಮ್ ಅಲಿಯಾಸ್ ಚಂಚಲ್ ಹಾಗೂ ಬಿರ್ಸೆನ್ ಗಂಜು ಅಲಿಯಾಸ್ ರಾಮ್ಖೇಲ್ವಾನ್ನನ್ನು ಭದ್ರತಾ ಪಡೆಗಳು ಗುಂಡಿಕ್ಕಿ ಕೊಲ್ಲುವ ಮೂಲಕ ಈ ವಲಯದಲ್ಲಿ ನಕ್ಸಲ್ ಚಟುವಟಿಕೆಗಳನ್ನು ಅನ್ನು ಸಂಪೂರ್ಣವಾಗಿ ನಿರ್ಮೂಲನೆಗೊಳಿಸಿವೆ ಎಂದು ಶಾ ‘ಎಕ್ಸ್’ನಲ್ಲಿ ಉಲ್ಲೇಖಿಸಿದ್ದಾರೆ.</p>.<p>ಸಹದೇವನ ಸುಳಿವು ನೀಡಿದವರಿಗೆ ₹1ಕೋಟಿ ಬಹುಮಾನ ಘೋಷಿಸಲಾಗಿತ್ತು. ಈತ ನಿಷೇಧಿತ ಸಿಪಿಐ (ಮಾವೋವಾದಿ) ಕೇಂದ್ರ ಸಮಿತಿ ಸದಸ್ಯನಾಗಿದ್ದ. ಶೀಘ್ರದಲ್ಲೇ ದೇಶ ನಕ್ಸಲ್ ಸಮಸ್ಯೆಯಿಂದ ಮುಕ್ತವಾಗಲಿದೆ ಎಂದಿದ್ದಾರೆ.</p>.<p>‘ಈ ಪ್ರದೇಶದ ಸಮಿತಿ ಸದಸ್ಯನಾಗಿದ್ದ ರಘುನಾಥನ ಸುಳಿವು ನೀಡಿದವರಿಗೆ ₹25 ಲಕ್ಷ ಹಾಗೂ ವಲಯ ಸಮಿತಿ ಸದಸ್ಯನಾಗಿದ್ದ ಗಂಜುನ ಸುಳಿವು ನೀಡಿದವರಿಗೆ ₹10 ಲಕ್ಷ ಬಹುಮಾನ ಘೋಷಿಸಲಾಗಿತ್ತು’ ಎಂದು ಜಾರ್ಖಂಡ್ ಪೊಲೀಸ್ ಐಜಿ (ಕಾರ್ಯಾಚರಣೆ) ಹಾಗೂ ವಕ್ತಾರ ಮೈಕಲ್ ರಾಜ್ ಎಸ್., ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ. </p>.<p>ಜಾರ್ಖಂಡ್ನ ಪಲಮು ಜಿಲ್ಲೆಯಲ್ಲಿ ಭಾನುವಾರ ನಡೆದ ನಕ್ಸಲ್ ನಿಗ್ರಹ ಕಾರ್ಯಾಚರಣೆಯಲ್ಲಿ ಮಾವೋವಾದಿಗಳ ನಿಷೇಧಿತ ಸಂಘಟನೆಯಾದ ತೃತೀಯ ಸಮ್ಮೇಳನ ಪ್ರಸ್ತುತಿ ಸಮಿತಿಯ (ಟಿಎಸ್ಪಿಸಿ) ಉಪ ವಲಯ ಕಮಾಂಡರ್ ಮುಖದೇವ್ ಯಾದವ್ (40) ಅಲಿಯಾಸ್ ತೂಫಾನ್ನನ್ನು ಹತ್ಯೆ ಮಾಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ/ರಾಂಚಿ</strong>: ಉತ್ತರ ಜಾರ್ಖಂಡ್ನ ಬೊಕಾರೊ ವಲಯದಲ್ಲಿ ನಕ್ಸಲ್ ಚಟುವಟಿಕೆಗಳನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.</p>.<p>ಜಾರ್ಖಂಡ್ನ ಹಜಾರಿಬಾಗ್ ಜಿಲ್ಲೆಯಲ್ಲಿ ಸೋಮವಾರ ಬೆಳಿಗ್ಗೆ ಭದ್ರತಾ ಪಡೆಗಳೊಂದಿಗಿನ ಗುಂಡಿನ ಚಕಮಕಿಯಲ್ಲಿ ಮೂವರು ನಕ್ಸಲರು ಮೃತಪಟ್ಟಿದ್ದಾರೆ.</p>.<p>ನಕ್ಸಲ್ ಕಮಾಂಡರ್ ಸಹದೇವ್ ಸೊರೇನ್ ಅಲಿಯಾಸ್ ಪರ್ವೇಶ್, ರಘುನಾಥ್ ಹೆಂಬ್ರಾಮ್ ಅಲಿಯಾಸ್ ಚಂಚಲ್ ಹಾಗೂ ಬಿರ್ಸೆನ್ ಗಂಜು ಅಲಿಯಾಸ್ ರಾಮ್ಖೇಲ್ವಾನ್ನನ್ನು ಭದ್ರತಾ ಪಡೆಗಳು ಗುಂಡಿಕ್ಕಿ ಕೊಲ್ಲುವ ಮೂಲಕ ಈ ವಲಯದಲ್ಲಿ ನಕ್ಸಲ್ ಚಟುವಟಿಕೆಗಳನ್ನು ಅನ್ನು ಸಂಪೂರ್ಣವಾಗಿ ನಿರ್ಮೂಲನೆಗೊಳಿಸಿವೆ ಎಂದು ಶಾ ‘ಎಕ್ಸ್’ನಲ್ಲಿ ಉಲ್ಲೇಖಿಸಿದ್ದಾರೆ.</p>.<p>ಸಹದೇವನ ಸುಳಿವು ನೀಡಿದವರಿಗೆ ₹1ಕೋಟಿ ಬಹುಮಾನ ಘೋಷಿಸಲಾಗಿತ್ತು. ಈತ ನಿಷೇಧಿತ ಸಿಪಿಐ (ಮಾವೋವಾದಿ) ಕೇಂದ್ರ ಸಮಿತಿ ಸದಸ್ಯನಾಗಿದ್ದ. ಶೀಘ್ರದಲ್ಲೇ ದೇಶ ನಕ್ಸಲ್ ಸಮಸ್ಯೆಯಿಂದ ಮುಕ್ತವಾಗಲಿದೆ ಎಂದಿದ್ದಾರೆ.</p>.<p>‘ಈ ಪ್ರದೇಶದ ಸಮಿತಿ ಸದಸ್ಯನಾಗಿದ್ದ ರಘುನಾಥನ ಸುಳಿವು ನೀಡಿದವರಿಗೆ ₹25 ಲಕ್ಷ ಹಾಗೂ ವಲಯ ಸಮಿತಿ ಸದಸ್ಯನಾಗಿದ್ದ ಗಂಜುನ ಸುಳಿವು ನೀಡಿದವರಿಗೆ ₹10 ಲಕ್ಷ ಬಹುಮಾನ ಘೋಷಿಸಲಾಗಿತ್ತು’ ಎಂದು ಜಾರ್ಖಂಡ್ ಪೊಲೀಸ್ ಐಜಿ (ಕಾರ್ಯಾಚರಣೆ) ಹಾಗೂ ವಕ್ತಾರ ಮೈಕಲ್ ರಾಜ್ ಎಸ್., ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ. </p>.<p>ಜಾರ್ಖಂಡ್ನ ಪಲಮು ಜಿಲ್ಲೆಯಲ್ಲಿ ಭಾನುವಾರ ನಡೆದ ನಕ್ಸಲ್ ನಿಗ್ರಹ ಕಾರ್ಯಾಚರಣೆಯಲ್ಲಿ ಮಾವೋವಾದಿಗಳ ನಿಷೇಧಿತ ಸಂಘಟನೆಯಾದ ತೃತೀಯ ಸಮ್ಮೇಳನ ಪ್ರಸ್ತುತಿ ಸಮಿತಿಯ (ಟಿಎಸ್ಪಿಸಿ) ಉಪ ವಲಯ ಕಮಾಂಡರ್ ಮುಖದೇವ್ ಯಾದವ್ (40) ಅಲಿಯಾಸ್ ತೂಫಾನ್ನನ್ನು ಹತ್ಯೆ ಮಾಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>