<p><strong>ಮುಂಬೈ</strong> : ಇಲ್ಲಿನ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್ಬಿಐ) ಕಚೇರಿ ಸೇರಿದಂತೆ ಒಟ್ಟು 11 ಸ್ಥಳಗಳಲ್ಲಿ ಬಾಂಬ್ ಇಡಲಾಗಿದೆ ಎಂಬ ಬೆದರಿಕೆಯಿರುವ ಇ–ಮೇಲ್, ಮಂಗಳವಾರ ಮುಂಬೈನ ಕೆಲವೆಡೆ ಆತಂಕಕ್ಕೆ ಕಾರಣವಾಯಿತು. ಆದರೆ ಪೊಲೀಸರು ನಡೆಸಿದ ಶೋಧದಲ್ಲಿ ಯಾವುದೇ ಶಂಕಾಸ್ಪದ ವಸ್ತು ಪತ್ತೆಯಾಗಲಿಲ್ಲ.</p>.<p>ಆರ್ಬಿಐ ಗವರ್ನರ್ ಅವರ ಇ–ಮೇಲ್ ಐ.ಡಿಗೆ ಬೆಳಿಗ್ಗೆ 10.50ಕ್ಕೆ ‘khilafat.india@gmail.com’ ಎಂಬ ಐ.ಡಿಯಿಂದ ಬೆದರಿಕೆ ಇ–ಮೇಲ್ ಬಂದಿದೆ. ಆರ್ಬಿಐ ನ್ಯೂ ಸೆಂಟ್ರಲ್ ಕಚೇರಿ, ಚರ್ಚ್ಗೇಟ್ ಬಳಿಯ ಎಚ್ಡಿಎಫ್ಸಿ ಹೌಸ್ ಮತ್ತು ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್ನ ಐಸಿಐಸಿಐ ಬ್ಯಾಂಕ್ ಟವರ್ನಲ್ಲಿ ಮಧ್ಯಾಹ್ನ 1.30ಕ್ಕೆ ಬಾಂಬ್ ಸ್ಫೋಟಿಸಲಾಗುವುದು ಎಂಬ ಬೆದರಿಕೆ ಹಾಕಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಆರ್ಬಿಐ ಗವರ್ನರ್ ಶಕ್ತಿಕಾಂತ ದಾಸ್ ಅವರು ರಾಜೀನಾಮೆ ನೀಡಬೇಕು ಎಂದೂ ಇ–ಮೇಲ್ನಲ್ಲಿ ಆಗ್ರಹಿಸಲಾಗಿತ್ತು.</p>.<p>‘ಇ–ಮೇಲ್ನಲ್ಲಿ ಹೆಸರಿಸಿರುವ ಎಲ್ಲ 11 ತಾಣಗಳಲ್ಲೂ ಪೊಲೀಸರು ಶೋಧ ಕಾರ್ಯ ನಡೆಸಿದರು. ಬಾಂಬ್ ಅಥವಾ ಯಾವುದೇ ಶಂಕಾಸ್ಪದ ವಸ್ತುಗಳು ಪತ್ತೆಯಾಗಿಲ್ಲ’ ಎಂದು ಅಧಿಕಾರಿಗಳು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong> : ಇಲ್ಲಿನ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್ಬಿಐ) ಕಚೇರಿ ಸೇರಿದಂತೆ ಒಟ್ಟು 11 ಸ್ಥಳಗಳಲ್ಲಿ ಬಾಂಬ್ ಇಡಲಾಗಿದೆ ಎಂಬ ಬೆದರಿಕೆಯಿರುವ ಇ–ಮೇಲ್, ಮಂಗಳವಾರ ಮುಂಬೈನ ಕೆಲವೆಡೆ ಆತಂಕಕ್ಕೆ ಕಾರಣವಾಯಿತು. ಆದರೆ ಪೊಲೀಸರು ನಡೆಸಿದ ಶೋಧದಲ್ಲಿ ಯಾವುದೇ ಶಂಕಾಸ್ಪದ ವಸ್ತು ಪತ್ತೆಯಾಗಲಿಲ್ಲ.</p>.<p>ಆರ್ಬಿಐ ಗವರ್ನರ್ ಅವರ ಇ–ಮೇಲ್ ಐ.ಡಿಗೆ ಬೆಳಿಗ್ಗೆ 10.50ಕ್ಕೆ ‘khilafat.india@gmail.com’ ಎಂಬ ಐ.ಡಿಯಿಂದ ಬೆದರಿಕೆ ಇ–ಮೇಲ್ ಬಂದಿದೆ. ಆರ್ಬಿಐ ನ್ಯೂ ಸೆಂಟ್ರಲ್ ಕಚೇರಿ, ಚರ್ಚ್ಗೇಟ್ ಬಳಿಯ ಎಚ್ಡಿಎಫ್ಸಿ ಹೌಸ್ ಮತ್ತು ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್ನ ಐಸಿಐಸಿಐ ಬ್ಯಾಂಕ್ ಟವರ್ನಲ್ಲಿ ಮಧ್ಯಾಹ್ನ 1.30ಕ್ಕೆ ಬಾಂಬ್ ಸ್ಫೋಟಿಸಲಾಗುವುದು ಎಂಬ ಬೆದರಿಕೆ ಹಾಕಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಆರ್ಬಿಐ ಗವರ್ನರ್ ಶಕ್ತಿಕಾಂತ ದಾಸ್ ಅವರು ರಾಜೀನಾಮೆ ನೀಡಬೇಕು ಎಂದೂ ಇ–ಮೇಲ್ನಲ್ಲಿ ಆಗ್ರಹಿಸಲಾಗಿತ್ತು.</p>.<p>‘ಇ–ಮೇಲ್ನಲ್ಲಿ ಹೆಸರಿಸಿರುವ ಎಲ್ಲ 11 ತಾಣಗಳಲ್ಲೂ ಪೊಲೀಸರು ಶೋಧ ಕಾರ್ಯ ನಡೆಸಿದರು. ಬಾಂಬ್ ಅಥವಾ ಯಾವುದೇ ಶಂಕಾಸ್ಪದ ವಸ್ತುಗಳು ಪತ್ತೆಯಾಗಿಲ್ಲ’ ಎಂದು ಅಧಿಕಾರಿಗಳು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>