<p><strong>ಜೈಪುರ</strong>: ರಾಜಸ್ಥಾನದ ಅಲ್ವಾರ್ ನಗರದ ಮನೆಯೊಂದರ ಬಳಿ ಇಂದು (ಸೋಮವಾರ) ಬೆಳಿಗ್ಗೆ ಟೈಮರ್ ಅಳವಡಿಸಲಾದ ಬಾಂಬ್ ರೀತಿಯ ವಸ್ತು ಪತ್ತೆಯಾಗಿದ್ದು, ಆ ಪ್ರದೇಶದಲ್ಲಿ ಆತಂಕ ವಾತಾವರಣ ಸೃಷ್ಟಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಜೈಪುರದ ಭಯೋತ್ಪಾದನಾ ನಿಗ್ರಹ ದಳ ಮತ್ತು ಬಾಂಬ್ ನಿಷ್ಕ್ರಿಯ ದಳದ ತಂಡಗಳು ಈ ಅನುಮಾನಾಸ್ಪದ ವಸ್ತುವನ್ನು ಪರಿಶೀಲಿಸಲಿವೆ ಎಂದು ಅವರು ಹೇಳಿದ್ದಾರೆ.</p>.<p>ಅರಾವಳಿ ವಿಹಾರ್ ಪ್ರದೇಶದ ವಿವೇಕಾನಂದ ನಗರ ಸೆಕ್ಟರ್-4ರಲ್ಲಿ ಈ ಅನುಮಾನಾಸ್ಪದ ವಸ್ತು ಪತ್ತೆಯಾಗಿದೆ. ಮಾಹಿತಿ ಪಡೆದ ಪೊಲೀಸರು ಆ ಪ್ರದೇಶವನ್ನು ಸುತ್ತುವರಿದಿದ್ದಾರೆ. ಮುನ್ನೆಚ್ಚರಿಕಾ ಕ್ರಮವಾಗಿ ಅದನ್ನು ನಗರದಿಂದ ಸುಮಾರು ಆರೂವರೆ ಕಿಲೋಮೀಟರ್ ದೂರದಲ್ಲಿರುವ ಜೈಸಮಂದ್ ಅಣೆಕಟ್ಟೆ ಬಳಿಯ ಪ್ರದೇಶಕ್ಕೆ ಸ್ಥಳಾಂತರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. </p>.<p>ಅಣೆಕಟ್ಟೆಯ ಸುತ್ತಮುತ್ತಲಿನ ಪ್ರದೇಶವನ್ನು ಸೀಲ್ ಮಾಡಲಾಗಿದೆ. ಜತೆಗೆ ಸಾರ್ವಜನಿಕರ ಸಂಚಾರವನ್ನು ನಿರ್ಬಂಧಿಸಲಾಗಿದೆ ಎಂದೂ ಅವರು ಮಾಹಿತಿ ನೀಡಿದ್ದಾರೆ.</p>.ಬೆಂಗಳೂರು: ಕೇಂದ್ರೀಯ ವಿದ್ಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜೈಪುರ</strong>: ರಾಜಸ್ಥಾನದ ಅಲ್ವಾರ್ ನಗರದ ಮನೆಯೊಂದರ ಬಳಿ ಇಂದು (ಸೋಮವಾರ) ಬೆಳಿಗ್ಗೆ ಟೈಮರ್ ಅಳವಡಿಸಲಾದ ಬಾಂಬ್ ರೀತಿಯ ವಸ್ತು ಪತ್ತೆಯಾಗಿದ್ದು, ಆ ಪ್ರದೇಶದಲ್ಲಿ ಆತಂಕ ವಾತಾವರಣ ಸೃಷ್ಟಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಜೈಪುರದ ಭಯೋತ್ಪಾದನಾ ನಿಗ್ರಹ ದಳ ಮತ್ತು ಬಾಂಬ್ ನಿಷ್ಕ್ರಿಯ ದಳದ ತಂಡಗಳು ಈ ಅನುಮಾನಾಸ್ಪದ ವಸ್ತುವನ್ನು ಪರಿಶೀಲಿಸಲಿವೆ ಎಂದು ಅವರು ಹೇಳಿದ್ದಾರೆ.</p>.<p>ಅರಾವಳಿ ವಿಹಾರ್ ಪ್ರದೇಶದ ವಿವೇಕಾನಂದ ನಗರ ಸೆಕ್ಟರ್-4ರಲ್ಲಿ ಈ ಅನುಮಾನಾಸ್ಪದ ವಸ್ತು ಪತ್ತೆಯಾಗಿದೆ. ಮಾಹಿತಿ ಪಡೆದ ಪೊಲೀಸರು ಆ ಪ್ರದೇಶವನ್ನು ಸುತ್ತುವರಿದಿದ್ದಾರೆ. ಮುನ್ನೆಚ್ಚರಿಕಾ ಕ್ರಮವಾಗಿ ಅದನ್ನು ನಗರದಿಂದ ಸುಮಾರು ಆರೂವರೆ ಕಿಲೋಮೀಟರ್ ದೂರದಲ್ಲಿರುವ ಜೈಸಮಂದ್ ಅಣೆಕಟ್ಟೆ ಬಳಿಯ ಪ್ರದೇಶಕ್ಕೆ ಸ್ಥಳಾಂತರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. </p>.<p>ಅಣೆಕಟ್ಟೆಯ ಸುತ್ತಮುತ್ತಲಿನ ಪ್ರದೇಶವನ್ನು ಸೀಲ್ ಮಾಡಲಾಗಿದೆ. ಜತೆಗೆ ಸಾರ್ವಜನಿಕರ ಸಂಚಾರವನ್ನು ನಿರ್ಬಂಧಿಸಲಾಗಿದೆ ಎಂದೂ ಅವರು ಮಾಹಿತಿ ನೀಡಿದ್ದಾರೆ.</p>.ಬೆಂಗಳೂರು: ಕೇಂದ್ರೀಯ ವಿದ್ಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>