<p><strong>ನಾಗ್ಪುರ</strong>: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರ ನಾಗ್ಪುರದ ನಿವಾಸಕ್ಕೆ ಬಾಂಬ್ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಪೊಲೀಸರು ಭಾನುವಾರ ಬಂಧಿಸಿದ್ದಾರೆ.</p><p>ಬಂಧಿತನನ್ನು ನಾಗ್ಪುರ ನಗರದ ತುಳಸಿ ಬಾಗ್ ರಸ್ತೆಯ ನಿವಾಸಿ ಉಮೇಶ್ ವಿಷ್ಣು ರಾವತ್ ಎಂದು ಗುರುತಿಸಲಾಗಿದೆ. </p>.ಆಂಧ್ರಪ್ರದೇಶ | ಗ್ರಾನೈಟ್ ಕ್ವಾರಿಯಲ್ಲಿ ಬಂಡೆ ಕುಸಿತ; ಆರು ಮಂದಿ ಸಾವು.ಯೋಗಿ, ಭಾಗವತ್, ರವಿಶಂಕರ್ ಹೆಸರು ಹೇಳುವಂತೆ ಚಿತ್ರಹಿಂಸೆ: ರಮೇಶ್ ಉಪಾಧ್ಯಾಯ. <p>ನಗರ ಪೊಲೀಸ್ ಠಾಣೆಯ ತುರ್ತು ಸಹಾಯವಾಣಿ ಸಂಖ್ಯೆ 112ಕ್ಕೆ ರಾವತ್ ಬೆಳಿಗ್ಗೆ ಕರೆ ಮಾಡಿ, ಗಡ್ಕರಿ ಅವರ ನಾಗ್ಪುರದ ನಿವಾಸದಲ್ಲಿ ಬಾಂಬ್ ಇರುವುದಾಗಿ ಬೆದರಿಕೆ ಹಾಕಿದ್ದ. ಪೊಲೀಸರು ತನಿಖೆ ನಡೆಸಿದಾಗ ಇದು ಹುಸಿ ಬೆದರಿಕೆ ಎಂಬುದು ತಿಳಿದುಬಂದಿದೆ. </p><p>ಕರೆ ಬಂದಿದ್ದ ಸಂಖ್ಯೆಯನ್ನು ಪರಿಶೀಲಿಸಿದಾಗ ರಾವತ್ ವಿಳಾಸ ಪತ್ತೆಹಚ್ಚಿದ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಈ ರೀತಿಯ ಕೃತ್ಯ ಎಸಗಲು ಕಾರಣವೇನು? ಉದ್ದೇಶವೇನು? ಈ ಹಿಂದೆಯೂ ಇಂಥ ಕೃತ್ಯಗಳಲ್ಲಿ ರಾವತ್ ಭಾಗಿಯಾಗಿದ್ದನೆ ಎಂದು ತನಿಖೆ ನಡೆಸುತ್ತಿರುವುದಾಗಿ ಹೇಳಿದ್ದಾರೆ. </p><p>ಈ ಸಂಬಂಧ ಆರೋಪಿಯ ವಿರುದ್ದ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. </p>.ಒಡಿಶಾ-ಜಾರ್ಖಂಡ್ ಗಡಿಯಲ್ಲಿ ಐಇಡಿ ಸ್ಫೋಟ: ರೈಲ್ವೆ ಸಿಬ್ಬಂದಿ ಸ್ಥಳದಲ್ಲೇ ಸಾವು.ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ: 307 ರಸ್ತೆಗಳು ಬಂದ್, ‘ಆರೆಂಜ್ ಅಲರ್ಟ್’ ಘೋಷಣೆ.ರಾಷ್ಟ್ರಪತಿ ದ್ರೌಪದಿ ಮುರ್ಮುರನ್ನು ಭೇಟಿ ಮಾಡಿದ ಪ್ರಧಾನಿ ಮೋದಿ.ಸೇನಾಧಿಕಾರಿಯಿಂದ ದಾಳಿ: ಸ್ಪೈಸ್ಜೆಟ್ ಸಿಬ್ಬಂದಿಗೆ ದವಡೆ, ಬೆನ್ನುಮೂಳೆ ಮುರಿತ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಾಗ್ಪುರ</strong>: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರ ನಾಗ್ಪುರದ ನಿವಾಸಕ್ಕೆ ಬಾಂಬ್ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಪೊಲೀಸರು ಭಾನುವಾರ ಬಂಧಿಸಿದ್ದಾರೆ.</p><p>ಬಂಧಿತನನ್ನು ನಾಗ್ಪುರ ನಗರದ ತುಳಸಿ ಬಾಗ್ ರಸ್ತೆಯ ನಿವಾಸಿ ಉಮೇಶ್ ವಿಷ್ಣು ರಾವತ್ ಎಂದು ಗುರುತಿಸಲಾಗಿದೆ. </p>.ಆಂಧ್ರಪ್ರದೇಶ | ಗ್ರಾನೈಟ್ ಕ್ವಾರಿಯಲ್ಲಿ ಬಂಡೆ ಕುಸಿತ; ಆರು ಮಂದಿ ಸಾವು.ಯೋಗಿ, ಭಾಗವತ್, ರವಿಶಂಕರ್ ಹೆಸರು ಹೇಳುವಂತೆ ಚಿತ್ರಹಿಂಸೆ: ರಮೇಶ್ ಉಪಾಧ್ಯಾಯ. <p>ನಗರ ಪೊಲೀಸ್ ಠಾಣೆಯ ತುರ್ತು ಸಹಾಯವಾಣಿ ಸಂಖ್ಯೆ 112ಕ್ಕೆ ರಾವತ್ ಬೆಳಿಗ್ಗೆ ಕರೆ ಮಾಡಿ, ಗಡ್ಕರಿ ಅವರ ನಾಗ್ಪುರದ ನಿವಾಸದಲ್ಲಿ ಬಾಂಬ್ ಇರುವುದಾಗಿ ಬೆದರಿಕೆ ಹಾಕಿದ್ದ. ಪೊಲೀಸರು ತನಿಖೆ ನಡೆಸಿದಾಗ ಇದು ಹುಸಿ ಬೆದರಿಕೆ ಎಂಬುದು ತಿಳಿದುಬಂದಿದೆ. </p><p>ಕರೆ ಬಂದಿದ್ದ ಸಂಖ್ಯೆಯನ್ನು ಪರಿಶೀಲಿಸಿದಾಗ ರಾವತ್ ವಿಳಾಸ ಪತ್ತೆಹಚ್ಚಿದ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಈ ರೀತಿಯ ಕೃತ್ಯ ಎಸಗಲು ಕಾರಣವೇನು? ಉದ್ದೇಶವೇನು? ಈ ಹಿಂದೆಯೂ ಇಂಥ ಕೃತ್ಯಗಳಲ್ಲಿ ರಾವತ್ ಭಾಗಿಯಾಗಿದ್ದನೆ ಎಂದು ತನಿಖೆ ನಡೆಸುತ್ತಿರುವುದಾಗಿ ಹೇಳಿದ್ದಾರೆ. </p><p>ಈ ಸಂಬಂಧ ಆರೋಪಿಯ ವಿರುದ್ದ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. </p>.ಒಡಿಶಾ-ಜಾರ್ಖಂಡ್ ಗಡಿಯಲ್ಲಿ ಐಇಡಿ ಸ್ಫೋಟ: ರೈಲ್ವೆ ಸಿಬ್ಬಂದಿ ಸ್ಥಳದಲ್ಲೇ ಸಾವು.ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ: 307 ರಸ್ತೆಗಳು ಬಂದ್, ‘ಆರೆಂಜ್ ಅಲರ್ಟ್’ ಘೋಷಣೆ.ರಾಷ್ಟ್ರಪತಿ ದ್ರೌಪದಿ ಮುರ್ಮುರನ್ನು ಭೇಟಿ ಮಾಡಿದ ಪ್ರಧಾನಿ ಮೋದಿ.ಸೇನಾಧಿಕಾರಿಯಿಂದ ದಾಳಿ: ಸ್ಪೈಸ್ಜೆಟ್ ಸಿಬ್ಬಂದಿಗೆ ದವಡೆ, ಬೆನ್ನುಮೂಳೆ ಮುರಿತ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>