<p><strong>ಮುಂಬೈ</strong>: ಮನೋಜ್ ಜರಾಂಗೆ ನೇತೃತ್ವದ ಮರಾಠ ಮೀಸಲಾತಿ ಆಂದೋಲನದಿಂದಾಗಿ ಇಡೀ ಮುಂಬೈ ನಗರ ಸ್ತಬ್ಧಗೊಂಡಿದೆ ಎಂದು ಬಾಂಬೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.</p><p>ನಗರದ ಆಜಾದ್ ಮೈದಾನದಲ್ಲಿ ನಾಲ್ಕು ದಿನಗಳಿಂದ ಜರಾಂಗೆ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದಾರೆ. ಹೀಗಾಗಿ ಅವರ ಅಪಾರ ಬೆಂಬಲಿಗರು ನಗರದಲ್ಲಿ ಬೀಡು ಬಿಟ್ಟಿದ್ದಾರೆ.</p><p>ಜರಾಂಗೆ ಅವರ ಪ್ರತಿಭಟನೆಯು ಶಾಂತಿಯುತವಾಗಿಲ್ಲ ಮತ್ತು ಅವರ ಆಂದೋಲನ ಎಲ್ಲಾ ಷರತ್ತುಗಳನ್ನು ಉಲ್ಲಂಘಿಸಿದೆ ಎಂದೂ ಸಿಡಿಮಿಡಿಗೊಂಡಿದೆ.</p><p>ಮುಂಬೈನಲ್ಲಿ ಸಹಜ ಸ್ಥಿತಿ ಮರುಸ್ಥಾಪನೆಯಾಗಬೇಕು ಎಂದು ಹೈಕೋರ್ಟ್ ಹೇಳಿದ್ದು ಮಂಗಳವಾರ (ಸೆ.2) ಮಧ್ಯಾಹ್ನದೊಳಗೆ ಪರಿಸ್ಥಿತಿಯನ್ನು ಸರಿಪಡಿಸುವಂತೆ ಮತ್ತು ಎಲ್ಲಾ ಬೀದಿಗಳನ್ನು ತೆರವುಗೊಳಿಸುವಂತೆ ಜರಾಂಗೆ ಮತ್ತು ಅವರ ಬೆಂಬಲಿಗರಿಗೆ ಸೂಚನೆ ನೀಡಿದೆ.</p>.<p>ಜರಾಂಗೆ ಅವರು ಸೋಮವಾರ ನೀರು ಕುಡಿಯುವುದನ್ನೂ ನಿಲ್ಲಿಸಿದ್ದಾರೆ ಎಂದು ಅವರ ಬೆಂಬಲಿಗರು ಹೇಳಿದ್ದಾರೆ.</p><p>‘ಸಿಎಂ ಫಡಣವೀಸ್ ಉದ್ದೇಶಪೂರ್ವಕವಾಗಿ ಈ ವಿಷಯದಲ್ಲಿ ನಿರ್ಧಾರ ತೆಗೆದುಕೊಳ್ಳಲು ವಿಳಂಬ ಮಾಡುತ್ತಿದ್ದಾರೆ’ ಎಂದು ಜರಾಂಗೆ ಆರೋಪಿಸಿದರು.</p><p>ಮರಾಠಾ ಸಮುದಾಯಕ್ಕೆ ಇತರ ಹಿಂದುಳಿದ ವರ್ಗಗಳ (ಒಬಿಸಿ) ಅಡಿಯಲ್ಲಿ ಸರ್ಕಾರಿ ಉದ್ಯೋಗ ಮತ್ತು ಶಿಕ್ಷಣದಲ್ಲಿ ಶೇ 10ರಷ್ಟು ಮೀಸಲಾತಿ ನೀಡಬೇಕು ಎಂಬುದು ಅವರ ಆಗ್ರಹವಾಗಿದೆ.</p><p>ಮುಂಬೈನಲ್ಲಿ ಜನರಿಗೆ ತೊಂದರೆಯಾಗದಂತೆ ನಡೆದುಕೊಳ್ಳುವಂತೆ ಮರಾಠಾ ಹೋರಾಟಗಾರರಿಗೆ ಜರಾಂಗೆ ಸಲಹೆ ನೀಡಿದರು. ಅಲ್ಲದೇ ಆಗಸ್ಟ್ 29ರಿಂದ ಇಲ್ಲಿಯವರೆಗೆ ಪ್ರತಿಭಟನೆಯಲ್ಲಿ ಭಾಗವಹಿಸಿದ ಮೂವರು ಬೆಂಬಲಿಗರು ಮೃತಪಟ್ಟಿದ್ದಾರೆ.</p>.ನಮ್ಮ ಬೇಡಿಕೆ ಆಲಿಸದಿದ್ದರೆ 5 ಕೋಟಿ ಮರಾಠರು ಮುಂಬೈಗೆ: ಮನೋಜ್ ಜರಾಂಗೆ.ಮರಾಠರನ್ನು ಅವಮಾನಿಸಬೇಡಿ; ತಾಳ್ಮೆ ಪರೀಕ್ಷಿಸಬೇಡಿ: CMಗೆ ಜರಾಂಗೆ ಎಚ್ಚರಿಕೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: ಮನೋಜ್ ಜರಾಂಗೆ ನೇತೃತ್ವದ ಮರಾಠ ಮೀಸಲಾತಿ ಆಂದೋಲನದಿಂದಾಗಿ ಇಡೀ ಮುಂಬೈ ನಗರ ಸ್ತಬ್ಧಗೊಂಡಿದೆ ಎಂದು ಬಾಂಬೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.</p><p>ನಗರದ ಆಜಾದ್ ಮೈದಾನದಲ್ಲಿ ನಾಲ್ಕು ದಿನಗಳಿಂದ ಜರಾಂಗೆ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದಾರೆ. ಹೀಗಾಗಿ ಅವರ ಅಪಾರ ಬೆಂಬಲಿಗರು ನಗರದಲ್ಲಿ ಬೀಡು ಬಿಟ್ಟಿದ್ದಾರೆ.</p><p>ಜರಾಂಗೆ ಅವರ ಪ್ರತಿಭಟನೆಯು ಶಾಂತಿಯುತವಾಗಿಲ್ಲ ಮತ್ತು ಅವರ ಆಂದೋಲನ ಎಲ್ಲಾ ಷರತ್ತುಗಳನ್ನು ಉಲ್ಲಂಘಿಸಿದೆ ಎಂದೂ ಸಿಡಿಮಿಡಿಗೊಂಡಿದೆ.</p><p>ಮುಂಬೈನಲ್ಲಿ ಸಹಜ ಸ್ಥಿತಿ ಮರುಸ್ಥಾಪನೆಯಾಗಬೇಕು ಎಂದು ಹೈಕೋರ್ಟ್ ಹೇಳಿದ್ದು ಮಂಗಳವಾರ (ಸೆ.2) ಮಧ್ಯಾಹ್ನದೊಳಗೆ ಪರಿಸ್ಥಿತಿಯನ್ನು ಸರಿಪಡಿಸುವಂತೆ ಮತ್ತು ಎಲ್ಲಾ ಬೀದಿಗಳನ್ನು ತೆರವುಗೊಳಿಸುವಂತೆ ಜರಾಂಗೆ ಮತ್ತು ಅವರ ಬೆಂಬಲಿಗರಿಗೆ ಸೂಚನೆ ನೀಡಿದೆ.</p>.<p>ಜರಾಂಗೆ ಅವರು ಸೋಮವಾರ ನೀರು ಕುಡಿಯುವುದನ್ನೂ ನಿಲ್ಲಿಸಿದ್ದಾರೆ ಎಂದು ಅವರ ಬೆಂಬಲಿಗರು ಹೇಳಿದ್ದಾರೆ.</p><p>‘ಸಿಎಂ ಫಡಣವೀಸ್ ಉದ್ದೇಶಪೂರ್ವಕವಾಗಿ ಈ ವಿಷಯದಲ್ಲಿ ನಿರ್ಧಾರ ತೆಗೆದುಕೊಳ್ಳಲು ವಿಳಂಬ ಮಾಡುತ್ತಿದ್ದಾರೆ’ ಎಂದು ಜರಾಂಗೆ ಆರೋಪಿಸಿದರು.</p><p>ಮರಾಠಾ ಸಮುದಾಯಕ್ಕೆ ಇತರ ಹಿಂದುಳಿದ ವರ್ಗಗಳ (ಒಬಿಸಿ) ಅಡಿಯಲ್ಲಿ ಸರ್ಕಾರಿ ಉದ್ಯೋಗ ಮತ್ತು ಶಿಕ್ಷಣದಲ್ಲಿ ಶೇ 10ರಷ್ಟು ಮೀಸಲಾತಿ ನೀಡಬೇಕು ಎಂಬುದು ಅವರ ಆಗ್ರಹವಾಗಿದೆ.</p><p>ಮುಂಬೈನಲ್ಲಿ ಜನರಿಗೆ ತೊಂದರೆಯಾಗದಂತೆ ನಡೆದುಕೊಳ್ಳುವಂತೆ ಮರಾಠಾ ಹೋರಾಟಗಾರರಿಗೆ ಜರಾಂಗೆ ಸಲಹೆ ನೀಡಿದರು. ಅಲ್ಲದೇ ಆಗಸ್ಟ್ 29ರಿಂದ ಇಲ್ಲಿಯವರೆಗೆ ಪ್ರತಿಭಟನೆಯಲ್ಲಿ ಭಾಗವಹಿಸಿದ ಮೂವರು ಬೆಂಬಲಿಗರು ಮೃತಪಟ್ಟಿದ್ದಾರೆ.</p>.ನಮ್ಮ ಬೇಡಿಕೆ ಆಲಿಸದಿದ್ದರೆ 5 ಕೋಟಿ ಮರಾಠರು ಮುಂಬೈಗೆ: ಮನೋಜ್ ಜರಾಂಗೆ.ಮರಾಠರನ್ನು ಅವಮಾನಿಸಬೇಡಿ; ತಾಳ್ಮೆ ಪರೀಕ್ಷಿಸಬೇಡಿ: CMಗೆ ಜರಾಂಗೆ ಎಚ್ಚರಿಕೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>