<p><strong>ಮುಂಬೈ:</strong> ಆಗಸ್ಟ್ 27ರಿಂದ ಆಚರಿಸಲಾಗುವ 10 ದಿನಗಳ ಗಣೇಶ ಉತ್ಸವದಲ್ಲಿ ಪ್ರತಿಷ್ಠಾಪಿಸುವ ಆರು ಅಡಿ ಎತ್ತರದವರೆಗಿನ ಎಲ್ಲಾ ಮಾದರಿಯ ಗಣೇಶ ಮೂರ್ತಿಗಳನ್ನು ಕೃತಕ ತೊಟ್ಟಿಗಳಲ್ಲೇ ವಿಸರ್ಜಿಸಬೇಕು ಎಂದು ಬಾಂಬೆ ಹೈಕೋರ್ಟ್ ಗುರುವಾರ ಆದೇಶಿಸಿದೆ.</p><p>ಪ್ಲಾಸ್ಟರ್ ಆಫ್ ಪ್ಯಾರೀಸ್ (ಪಿಒಪಿ) ವಿಗ್ರಹಗಳಿಗೆ ಸಂಬಂಧಿಸಿದಂತೆ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯ (ಸಿಪಿಸಿಬಿ) ಪರಿಷ್ಕೃತ ಮಾರ್ಗಸೂಚಿಗಳನ್ನು ಜಾರಿಗೆ ತರುವಂತೆ ಕೋರಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ಸಂದರ್ಭದಲ್ಲಿ ನ್ಯಾಯಮೂರ್ತಿ ಅಲೋಕ್ ಆರಾಧೆ ಮತ್ತು ಸಂದೀಪ್ ಮಾರ್ನೆ ನೇತೃತ್ವದ ನ್ಯಾಯಪೀಠವು ಈ ತೀರ್ಪು ನೀಡಿದೆ.</p><p>‘ಮೂರ್ತಿಗಳ ವಿಸರ್ಜನೆಯಿಂದ ಪರಿಸರದ ಮೇಲೆ ಆಗುವಂತಹ ದುಷ್ಪರಿಣಾಮಗಳನ್ನು ತಡೆಗಟ್ಟುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಆದ್ದರಿಂದ 6 ಅಡಿ ಎತ್ತರದವರೆಗಿನ ಎಲ್ಲಾ ವಿಗ್ರಹಗಳನ್ನು ಕೃತಕ ನೀರಿನ ತೊಟ್ಟಿಗಳಲ್ಲಿ ಕಡ್ಡಾಯವಾಗಿ ವಿಸರ್ಜಿಸಬೇಕು’ ಎಂದೂ ನ್ಯಾಯಪೀಠ ಹೇಳಿದೆ.</p><p>ಪಿಒಪಿ ಗಣೇಶ ಮೂರ್ತಿಗಳು ಸೇರಿದಂತೆ ವಿವಿಧ ದೇವತೆಗಳ ಮೂರ್ತಿಗಳನ್ನು ವಿಸರ್ಜಿಸುವ ಅಗತ್ಯವಿರುವ ಹಬ್ಬಗಳಿಗೂ ಅನ್ವಯವಾಗುವಂತೆ ಈ ಆದೇಶವು ಮುಂದಿನ ವರ್ಷದ (2026) ಮಾರ್ಚ್ವರೆಗೆ ಜಾರಿಯಲ್ಲಿರುತ್ತದೆ ಎಂದು ಕೋರ್ಟ್ ತಿಳಿಸಿದೆ. </p><p>ಸ್ಥಳೀಯ ಸಂಸ್ಥೆಗಳು ಆರು ಅಡಿ ಎತ್ತರದವರೆಗಿನ ಗಣೇಶ ಮೂರ್ತಿಗಳನ್ನು ಕೃತಕ ನೀರಿನ ತೊಟ್ಟಿಗಳಲ್ಲಿ ವಿಸರ್ಜಿಸುವುದನ್ನು ಖಚಿತಪಡಿಸಿಕೊಳ್ಳಬೇಕು. ಜತೆಗೆ, ಗಣೇಶ ಮೂರ್ತಿಗಳನ್ನು ವಿಸರ್ಜಿಸುವ ಬಗ್ಗೆ ತನ್ನ ನೀತಿಯ ಅನುಷ್ಠಾನವನ್ನು ಖಚಿತಪಡಿಸಿಕೊಳ್ಳುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ತಾಕೀತು ಮಾಡಿದೆ. </p><p>ಗಣೇಶ ಮೂರ್ತಿಗಳನ್ನು ತಯಾರಿಸಲು ಬಳಸುವ ಪಿಒಪಿ ವಸ್ತುಗಳನ್ನು ಮರುಬಳಕೆ ಮಾಡುವ ಕ್ರಮಗಳನ್ನು ಸೂಚಿಸಲು ತಜ್ಞರ ಸಮಿತಿಯನ್ನು ರಚಿಸುವಂತೆ ಹೈಕೋರ್ಟ್ ಸರ್ಕಾರ ನಿರ್ದೇಶನ ನೀಡಿದೆ. ಜತೆಗೆ, ಪರಿಸರ ಸ್ನೇಹಿ ರೀತಿಯಲ್ಲಿ ವಿಗ್ರಹಗಳನ್ನು ವಿಸರ್ಜಿಸಲು ಸಾಧ್ಯವಾಗುವಂತೆ ಕ್ರಮಗಳನ್ನು ತೆಗೆದುಕೊಳ್ಳುವಂತೆಯೂ ಕೋರ್ಟ್ ಆದೇಶಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ಆಗಸ್ಟ್ 27ರಿಂದ ಆಚರಿಸಲಾಗುವ 10 ದಿನಗಳ ಗಣೇಶ ಉತ್ಸವದಲ್ಲಿ ಪ್ರತಿಷ್ಠಾಪಿಸುವ ಆರು ಅಡಿ ಎತ್ತರದವರೆಗಿನ ಎಲ್ಲಾ ಮಾದರಿಯ ಗಣೇಶ ಮೂರ್ತಿಗಳನ್ನು ಕೃತಕ ತೊಟ್ಟಿಗಳಲ್ಲೇ ವಿಸರ್ಜಿಸಬೇಕು ಎಂದು ಬಾಂಬೆ ಹೈಕೋರ್ಟ್ ಗುರುವಾರ ಆದೇಶಿಸಿದೆ.</p><p>ಪ್ಲಾಸ್ಟರ್ ಆಫ್ ಪ್ಯಾರೀಸ್ (ಪಿಒಪಿ) ವಿಗ್ರಹಗಳಿಗೆ ಸಂಬಂಧಿಸಿದಂತೆ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯ (ಸಿಪಿಸಿಬಿ) ಪರಿಷ್ಕೃತ ಮಾರ್ಗಸೂಚಿಗಳನ್ನು ಜಾರಿಗೆ ತರುವಂತೆ ಕೋರಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ಸಂದರ್ಭದಲ್ಲಿ ನ್ಯಾಯಮೂರ್ತಿ ಅಲೋಕ್ ಆರಾಧೆ ಮತ್ತು ಸಂದೀಪ್ ಮಾರ್ನೆ ನೇತೃತ್ವದ ನ್ಯಾಯಪೀಠವು ಈ ತೀರ್ಪು ನೀಡಿದೆ.</p><p>‘ಮೂರ್ತಿಗಳ ವಿಸರ್ಜನೆಯಿಂದ ಪರಿಸರದ ಮೇಲೆ ಆಗುವಂತಹ ದುಷ್ಪರಿಣಾಮಗಳನ್ನು ತಡೆಗಟ್ಟುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಆದ್ದರಿಂದ 6 ಅಡಿ ಎತ್ತರದವರೆಗಿನ ಎಲ್ಲಾ ವಿಗ್ರಹಗಳನ್ನು ಕೃತಕ ನೀರಿನ ತೊಟ್ಟಿಗಳಲ್ಲಿ ಕಡ್ಡಾಯವಾಗಿ ವಿಸರ್ಜಿಸಬೇಕು’ ಎಂದೂ ನ್ಯಾಯಪೀಠ ಹೇಳಿದೆ.</p><p>ಪಿಒಪಿ ಗಣೇಶ ಮೂರ್ತಿಗಳು ಸೇರಿದಂತೆ ವಿವಿಧ ದೇವತೆಗಳ ಮೂರ್ತಿಗಳನ್ನು ವಿಸರ್ಜಿಸುವ ಅಗತ್ಯವಿರುವ ಹಬ್ಬಗಳಿಗೂ ಅನ್ವಯವಾಗುವಂತೆ ಈ ಆದೇಶವು ಮುಂದಿನ ವರ್ಷದ (2026) ಮಾರ್ಚ್ವರೆಗೆ ಜಾರಿಯಲ್ಲಿರುತ್ತದೆ ಎಂದು ಕೋರ್ಟ್ ತಿಳಿಸಿದೆ. </p><p>ಸ್ಥಳೀಯ ಸಂಸ್ಥೆಗಳು ಆರು ಅಡಿ ಎತ್ತರದವರೆಗಿನ ಗಣೇಶ ಮೂರ್ತಿಗಳನ್ನು ಕೃತಕ ನೀರಿನ ತೊಟ್ಟಿಗಳಲ್ಲಿ ವಿಸರ್ಜಿಸುವುದನ್ನು ಖಚಿತಪಡಿಸಿಕೊಳ್ಳಬೇಕು. ಜತೆಗೆ, ಗಣೇಶ ಮೂರ್ತಿಗಳನ್ನು ವಿಸರ್ಜಿಸುವ ಬಗ್ಗೆ ತನ್ನ ನೀತಿಯ ಅನುಷ್ಠಾನವನ್ನು ಖಚಿತಪಡಿಸಿಕೊಳ್ಳುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ತಾಕೀತು ಮಾಡಿದೆ. </p><p>ಗಣೇಶ ಮೂರ್ತಿಗಳನ್ನು ತಯಾರಿಸಲು ಬಳಸುವ ಪಿಒಪಿ ವಸ್ತುಗಳನ್ನು ಮರುಬಳಕೆ ಮಾಡುವ ಕ್ರಮಗಳನ್ನು ಸೂಚಿಸಲು ತಜ್ಞರ ಸಮಿತಿಯನ್ನು ರಚಿಸುವಂತೆ ಹೈಕೋರ್ಟ್ ಸರ್ಕಾರ ನಿರ್ದೇಶನ ನೀಡಿದೆ. ಜತೆಗೆ, ಪರಿಸರ ಸ್ನೇಹಿ ರೀತಿಯಲ್ಲಿ ವಿಗ್ರಹಗಳನ್ನು ವಿಸರ್ಜಿಸಲು ಸಾಧ್ಯವಾಗುವಂತೆ ಕ್ರಮಗಳನ್ನು ತೆಗೆದುಕೊಳ್ಳುವಂತೆಯೂ ಕೋರ್ಟ್ ಆದೇಶಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>