<p><strong>ಮುಂಬೈ:</strong> 26/11 ಮುಂಬೈ ಭಯೋತ್ಪಾದಕ ದಾಳಿ ಪ್ರಕರಣದಲ್ಲಿ ಖುಲಾಸೆಗೊಂಡಿರುವ ಫಾಹೀಂ ಅನ್ಸಾರಿಗೆ ಪೊಲೀಸ್ ಪರಿಶೀಲನಾ ಪ್ರಮಾಣಪತ್ರ (ಪಿಸಿಸಿ) ನೀಡದಿರಲು ರಾಷ್ಟ್ರೀಯ ಭದ್ರತೆ ಮತ್ತು ಸಾರ್ವಜನಿಕರ ಹಿತಾಸಕ್ತಿ ಕಾರಣ ಎಂದು ಬಾಂಬೆ ಹೈಕೋರ್ಟ್ ತಿಳಿಸಿದೆ. </p>.<p>ಜೀವನೋಪಾಯಕ್ಕಾಗಿ ತಾನು ಆಟೊ ಚಾಲನೆ ಮಾಡಲು ಬಯಸಿದ್ದು, ಇದಕ್ಕೆ ಅಗತ್ಯವಾಗಿರುವ ಪೊಲೀಸ್<br>ಪಿಸಿಸಿ ನೀಡಲು ಆಡಳಿತವು ತಿರಸ್ಕರಿಸಿದ್ದು, ಅದನ್ನು ನೀಡುವಂತೆ ಕೋರಿ ಅನ್ಸಾರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಬುಧವಾರ ತಿರಸ್ಕರಿಸಿತ್ತು. </p>.<p>ಇದೀಗ ಹೈಕೋರ್ಟ್ನ ಆದೇಶ ಪ್ರತಿ ಲಭ್ಯವಾಗಿದ್ದು, ಅರ್ಜಿ ತಿರಸ್ಕಾರಕ್ಕೆ ಕಾರಣಗಳೂ ತಿಳಿದುಬಂದಿವೆ. </p>.<p>‘ಸಾಕ್ಷ್ಯಾಧಾರ ಕೊರತೆಗಳಿಂದ ಅನ್ಸಾರಿ ಖುಲಾಸೆಯಾಗಿದ್ದಾರೆ. ಆದರೂ ಅದೇ ಮಾದರಿಯ ಚಟುವಟಿಕೆಗಳಲ್ಲಿ ಅವರು ತೊಡಗಿಕೊಂಡಿದ್ದಾರೆ ಎಂಬುದನ್ನು ತಳ್ಳಿಹಾಕಲಾಗದು ಎಂದು ಗುಪ್ತಚರ ಸಂಸ್ಥೆಗಳು ನೀಡಿರುವ ವರದಿಯನ್ನು ನ್ಯಾಯಾಲಯ ಪರಿಗಣಿಸಿದೆ. ಹೀಗಾಗಿ ಸರ್ಕಾರ ತೆಗೆದುಕೊಂಡಿರುವ ನಿರ್ಣಯವನ್ನು ತಪ್ಪು ಎನ್ನಲು ಸಾಧ್ಯವಿಲ್ಲ’ ಎಂದೂ ನ್ಯಾಯಪೀಠ ತಿಳಿಸಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> 26/11 ಮುಂಬೈ ಭಯೋತ್ಪಾದಕ ದಾಳಿ ಪ್ರಕರಣದಲ್ಲಿ ಖುಲಾಸೆಗೊಂಡಿರುವ ಫಾಹೀಂ ಅನ್ಸಾರಿಗೆ ಪೊಲೀಸ್ ಪರಿಶೀಲನಾ ಪ್ರಮಾಣಪತ್ರ (ಪಿಸಿಸಿ) ನೀಡದಿರಲು ರಾಷ್ಟ್ರೀಯ ಭದ್ರತೆ ಮತ್ತು ಸಾರ್ವಜನಿಕರ ಹಿತಾಸಕ್ತಿ ಕಾರಣ ಎಂದು ಬಾಂಬೆ ಹೈಕೋರ್ಟ್ ತಿಳಿಸಿದೆ. </p>.<p>ಜೀವನೋಪಾಯಕ್ಕಾಗಿ ತಾನು ಆಟೊ ಚಾಲನೆ ಮಾಡಲು ಬಯಸಿದ್ದು, ಇದಕ್ಕೆ ಅಗತ್ಯವಾಗಿರುವ ಪೊಲೀಸ್<br>ಪಿಸಿಸಿ ನೀಡಲು ಆಡಳಿತವು ತಿರಸ್ಕರಿಸಿದ್ದು, ಅದನ್ನು ನೀಡುವಂತೆ ಕೋರಿ ಅನ್ಸಾರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಬುಧವಾರ ತಿರಸ್ಕರಿಸಿತ್ತು. </p>.<p>ಇದೀಗ ಹೈಕೋರ್ಟ್ನ ಆದೇಶ ಪ್ರತಿ ಲಭ್ಯವಾಗಿದ್ದು, ಅರ್ಜಿ ತಿರಸ್ಕಾರಕ್ಕೆ ಕಾರಣಗಳೂ ತಿಳಿದುಬಂದಿವೆ. </p>.<p>‘ಸಾಕ್ಷ್ಯಾಧಾರ ಕೊರತೆಗಳಿಂದ ಅನ್ಸಾರಿ ಖುಲಾಸೆಯಾಗಿದ್ದಾರೆ. ಆದರೂ ಅದೇ ಮಾದರಿಯ ಚಟುವಟಿಕೆಗಳಲ್ಲಿ ಅವರು ತೊಡಗಿಕೊಂಡಿದ್ದಾರೆ ಎಂಬುದನ್ನು ತಳ್ಳಿಹಾಕಲಾಗದು ಎಂದು ಗುಪ್ತಚರ ಸಂಸ್ಥೆಗಳು ನೀಡಿರುವ ವರದಿಯನ್ನು ನ್ಯಾಯಾಲಯ ಪರಿಗಣಿಸಿದೆ. ಹೀಗಾಗಿ ಸರ್ಕಾರ ತೆಗೆದುಕೊಂಡಿರುವ ನಿರ್ಣಯವನ್ನು ತಪ್ಪು ಎನ್ನಲು ಸಾಧ್ಯವಿಲ್ಲ’ ಎಂದೂ ನ್ಯಾಯಪೀಠ ತಿಳಿಸಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>