<p><strong>ಮುಂಬೈ</strong>: ಭಾರತೀಯ ನೌಕಾಪಡೆಯ ಪ್ರಮುಖ ವಾಯುನೆಲೆಗಳ ಪೈಕಿ ಒಂದಾಗಿರುವ ‘ಐಎನ್ಎಸ್ ಶಿಕ್ರ’ದ ಸಮೀಪ ಎತ್ತರದ ಕಟ್ಟಡ ನಿರ್ಮಾಣವಾಗುತ್ತಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನೌಕಾಪಡೆಯನ್ನು ಬಾಂಬೆ ಹೈಕೋರ್ಟ್ ಶುಕ್ರವಾರ ತರಾಟೆ ತೆಗೆದುಕೊಂಡಿದೆ. </p>.<p>ನೌಕಾಪಡೆಯ ಗಮನಕ್ಕೂ ಬಾರದಂತೆ ವಾಯುನೆಲೆ ಸಮೀಪದಲ್ಲೇ 19 ಅಂತಸ್ತಿನ ಕಟ್ಟಡ ತಲೆ ಎತ್ತಿದ್ದು ಹೇಗೆ ಎಂದು ಪ್ರಶ್ನಿಸಿರುವ ನ್ಯಾಯಪೀಠವು, ಇದಕ್ಕೆ ನೌಕಾಪಡೆಯ ಗುಪ್ತಚರ ವೈಫಲ್ಯವೇ ಕಾರಣ ಎಂದೂ ಚಾಟಿ ಬೀಸಿದೆ.</p>.<p>‘ಶಿಕ್ರ’ ಬಳಿ ಎತ್ತರದ ಕಟ್ಟಡ ನಿರ್ಮಾಣವಾದರೆ ಗಂಭೀರ ಭದ್ರತಾ ಆತಂಕ ಎದುರಾಗುತ್ತದೆ. ಹೀಗಾಗಿ ಕಟ್ಟಡ ನಿರ್ಮಾಣಕ್ಕೆ ತಡೆ ನೀಡಬೇಕೆಂದು ಕೋರಿ ‘ಐಎನ್ಎಸ್ ಶಿಕ್ರ’ದ ಕಮಾಂಡಿಂಗ್ ಅಧಿಕಾರಿಯೊಬ್ಬರು ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು. </p>.<p>ನ್ಯಾಯಮೂರ್ತಿ ರವೀಂದ್ರ ಗುಹೆ ಹಾಗೂ ನ್ಯಾಯಮೂರ್ತಿ ಅಭಯ್ ಮಂತ್ರಿ ಅವರಿದ್ದ ಪೀಠವು ಈ ಅರ್ಜಿಯ ವಿಚಾರಣೆ ನಡೆಸಿದೆ. 2024ರಿಂದಲೇ ಕಟ್ಟಡದ ನಿರ್ಮಾಣ ಆರಂಭವಾಗಿದ್ದು, ಈಗಾಗಲೇ 19 ಅಂತಸ್ತು (70 ಮೀಟರ್) ನಿರ್ಮಿಸಲಾಗಿದೆ. ಇಷ್ಟೆಲ್ಲಾ ಬೆಳವಣಿಗೆ ಆದ ಬಳಿಕ ನೌಕಾಪಡೆ ಎಚ್ಚೆತ್ತಿದೆ ಎಂಬುದನ್ನು ಗಮನಿಸಿದ ನ್ಯಾಯಪೀಠ, ಅಸಮಾಧಾನ ವ್ಯಕ್ತಪಡಿಸಿದೆ.</p>.<p>ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರು ನಗರಕ್ಕೆ ಭೇಟಿ ನೀಡಿದ್ದಾಗ ಭದ್ರತಾ ಕಾರಣಕ್ಕಾಗಿ ಕಟ್ಟಡದ ನಿರ್ಮಾಣ ಕಾಮಗಾರಿಗಳಿಗೆ ತಾತ್ಕಾಲಿಕ ತಡೆ ನೀಡಲಾಗಿತ್ತು. ಆ ಆದೇಶವನ್ನು ಮುಂದುವರಿಸಲು ಸಾಧ್ಯವಿಲ್ಲ ಎಂದು ಹೇಳಿರುವ ಪೀಠ, ಮುಂದಿನ ವಿಚಾರಣೆಯನ್ನು ಮಾರ್ಚ್ 30ಕ್ಕೆ ನಿಗದಿಪಡಿಸಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: ಭಾರತೀಯ ನೌಕಾಪಡೆಯ ಪ್ರಮುಖ ವಾಯುನೆಲೆಗಳ ಪೈಕಿ ಒಂದಾಗಿರುವ ‘ಐಎನ್ಎಸ್ ಶಿಕ್ರ’ದ ಸಮೀಪ ಎತ್ತರದ ಕಟ್ಟಡ ನಿರ್ಮಾಣವಾಗುತ್ತಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನೌಕಾಪಡೆಯನ್ನು ಬಾಂಬೆ ಹೈಕೋರ್ಟ್ ಶುಕ್ರವಾರ ತರಾಟೆ ತೆಗೆದುಕೊಂಡಿದೆ. </p>.<p>ನೌಕಾಪಡೆಯ ಗಮನಕ್ಕೂ ಬಾರದಂತೆ ವಾಯುನೆಲೆ ಸಮೀಪದಲ್ಲೇ 19 ಅಂತಸ್ತಿನ ಕಟ್ಟಡ ತಲೆ ಎತ್ತಿದ್ದು ಹೇಗೆ ಎಂದು ಪ್ರಶ್ನಿಸಿರುವ ನ್ಯಾಯಪೀಠವು, ಇದಕ್ಕೆ ನೌಕಾಪಡೆಯ ಗುಪ್ತಚರ ವೈಫಲ್ಯವೇ ಕಾರಣ ಎಂದೂ ಚಾಟಿ ಬೀಸಿದೆ.</p>.<p>‘ಶಿಕ್ರ’ ಬಳಿ ಎತ್ತರದ ಕಟ್ಟಡ ನಿರ್ಮಾಣವಾದರೆ ಗಂಭೀರ ಭದ್ರತಾ ಆತಂಕ ಎದುರಾಗುತ್ತದೆ. ಹೀಗಾಗಿ ಕಟ್ಟಡ ನಿರ್ಮಾಣಕ್ಕೆ ತಡೆ ನೀಡಬೇಕೆಂದು ಕೋರಿ ‘ಐಎನ್ಎಸ್ ಶಿಕ್ರ’ದ ಕಮಾಂಡಿಂಗ್ ಅಧಿಕಾರಿಯೊಬ್ಬರು ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು. </p>.<p>ನ್ಯಾಯಮೂರ್ತಿ ರವೀಂದ್ರ ಗುಹೆ ಹಾಗೂ ನ್ಯಾಯಮೂರ್ತಿ ಅಭಯ್ ಮಂತ್ರಿ ಅವರಿದ್ದ ಪೀಠವು ಈ ಅರ್ಜಿಯ ವಿಚಾರಣೆ ನಡೆಸಿದೆ. 2024ರಿಂದಲೇ ಕಟ್ಟಡದ ನಿರ್ಮಾಣ ಆರಂಭವಾಗಿದ್ದು, ಈಗಾಗಲೇ 19 ಅಂತಸ್ತು (70 ಮೀಟರ್) ನಿರ್ಮಿಸಲಾಗಿದೆ. ಇಷ್ಟೆಲ್ಲಾ ಬೆಳವಣಿಗೆ ಆದ ಬಳಿಕ ನೌಕಾಪಡೆ ಎಚ್ಚೆತ್ತಿದೆ ಎಂಬುದನ್ನು ಗಮನಿಸಿದ ನ್ಯಾಯಪೀಠ, ಅಸಮಾಧಾನ ವ್ಯಕ್ತಪಡಿಸಿದೆ.</p>.<p>ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರು ನಗರಕ್ಕೆ ಭೇಟಿ ನೀಡಿದ್ದಾಗ ಭದ್ರತಾ ಕಾರಣಕ್ಕಾಗಿ ಕಟ್ಟಡದ ನಿರ್ಮಾಣ ಕಾಮಗಾರಿಗಳಿಗೆ ತಾತ್ಕಾಲಿಕ ತಡೆ ನೀಡಲಾಗಿತ್ತು. ಆ ಆದೇಶವನ್ನು ಮುಂದುವರಿಸಲು ಸಾಧ್ಯವಿಲ್ಲ ಎಂದು ಹೇಳಿರುವ ಪೀಠ, ಮುಂದಿನ ವಿಚಾರಣೆಯನ್ನು ಮಾರ್ಚ್ 30ಕ್ಕೆ ನಿಗದಿಪಡಿಸಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>