<p><strong>ಕೋಲ್ಕತ್ತ:</strong> ಬಿಜೆಪಿಯ ಮಾಜಿ ಸಂಸದ ಅರ್ಜುನ್ ಸಿಂಗ್ ಅವರ ಬಾಟಾಪಾರಾದ ನಿವಾಸದ ಹೊರಗಡೆ ದುಷ್ಕರ್ಮಿಗಳು ಬಾಂಬ್ ಎಸೆದು, ಗುಂಡಿನ ದಾಳಿ ನಡೆಸಿದ್ದಾರೆ.</p> <p>‘ಬುಧವಾರ ರಾತ್ರಿ ವೇಳೆ ಈ ದಾಳಿ ನಡೆದಿದ್ದು, ಯುವಕನೊಬ್ಬ ಗಾಯಗೊಂಡಿದ್ದಾರೆ’ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.</p> <p>ಸ್ಥಳದಲ್ಲಿದ್ದ ಸಿಂಗ್ ಹಾಗೂ ಆಪ್ತರು ತಕ್ಷಣವೇ ಬೆನ್ನುಹತ್ತಿದ್ದು, ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.</p> <p>‘ಐದರಿಂದ ಏಳು ಸುತ್ತು ಗುಂಡಿನ ದಾಳಿ ನಡೆಸಲಾಗಿದೆ. ತೃಣಮೂಲ ಕಾಂಗ್ರೆಸ್ನ ಕೌನ್ಸಿನರ್ ಸುನಿತಾ ಸಿಂಗ್ ಅವರ ಮಗನೇ ಈ ದಾಳಿಯ ಹಿಂದಿದ್ದಾರೆ’ ಎಂದು ಅರ್ಜುನ್ ಸಿಂಗ್ ಆರೋಪಿಸಿದ್ದಾರೆ.</p> <p>‘ಮೆಘನಾ ಸೆಣಬಿನ ಕಾರ್ಖಾನೆ ಪ್ರದೇಶದಲ್ಲಿ ಎರಡು ಗುಂಪುಗಳ ನಡುವೆ ಸಂಘರ್ಷ ನಡೆದು ಹಿಂಸಾಚಾರಕ್ಕೆ ತಿರುಗಿತ್ತು’ ಎಂದು ಪೊಲೀಸರು ತಿಳಿಸಿದ್ದಾರೆ.</p> <p>‘ಸಿಂಗ್ ಹಾಗೂ ಅವರ ಬೆಂಬಲಿಗರೇ ಹಿಂಸಾಚಾರಕ್ಕೆ ಪ್ರೇರಣೆ ನೀಡಿದರು’ ಎಂದು ಟಿಎಂಸಿ ಜಗದ್ದಾಲ್ ಕ್ಷೇತ್ರದ ಶಾಸಕ ಸೋಮನಾಥ್ ಶ್ಯಾಮ್ ಆರೋಪಿಸಿದರು. </p> <p>ಸ್ಥಳದಲ್ಲಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ. ಗಾಯಗೊಂಡ ಯುವಕನನ್ನು ಕೋಲ್ಕತ್ತದ ಆಸ್ಪತ್ರೆಗೆ ದಾಖಲಿಸಲಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ:</strong> ಬಿಜೆಪಿಯ ಮಾಜಿ ಸಂಸದ ಅರ್ಜುನ್ ಸಿಂಗ್ ಅವರ ಬಾಟಾಪಾರಾದ ನಿವಾಸದ ಹೊರಗಡೆ ದುಷ್ಕರ್ಮಿಗಳು ಬಾಂಬ್ ಎಸೆದು, ಗುಂಡಿನ ದಾಳಿ ನಡೆಸಿದ್ದಾರೆ.</p> <p>‘ಬುಧವಾರ ರಾತ್ರಿ ವೇಳೆ ಈ ದಾಳಿ ನಡೆದಿದ್ದು, ಯುವಕನೊಬ್ಬ ಗಾಯಗೊಂಡಿದ್ದಾರೆ’ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.</p> <p>ಸ್ಥಳದಲ್ಲಿದ್ದ ಸಿಂಗ್ ಹಾಗೂ ಆಪ್ತರು ತಕ್ಷಣವೇ ಬೆನ್ನುಹತ್ತಿದ್ದು, ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.</p> <p>‘ಐದರಿಂದ ಏಳು ಸುತ್ತು ಗುಂಡಿನ ದಾಳಿ ನಡೆಸಲಾಗಿದೆ. ತೃಣಮೂಲ ಕಾಂಗ್ರೆಸ್ನ ಕೌನ್ಸಿನರ್ ಸುನಿತಾ ಸಿಂಗ್ ಅವರ ಮಗನೇ ಈ ದಾಳಿಯ ಹಿಂದಿದ್ದಾರೆ’ ಎಂದು ಅರ್ಜುನ್ ಸಿಂಗ್ ಆರೋಪಿಸಿದ್ದಾರೆ.</p> <p>‘ಮೆಘನಾ ಸೆಣಬಿನ ಕಾರ್ಖಾನೆ ಪ್ರದೇಶದಲ್ಲಿ ಎರಡು ಗುಂಪುಗಳ ನಡುವೆ ಸಂಘರ್ಷ ನಡೆದು ಹಿಂಸಾಚಾರಕ್ಕೆ ತಿರುಗಿತ್ತು’ ಎಂದು ಪೊಲೀಸರು ತಿಳಿಸಿದ್ದಾರೆ.</p> <p>‘ಸಿಂಗ್ ಹಾಗೂ ಅವರ ಬೆಂಬಲಿಗರೇ ಹಿಂಸಾಚಾರಕ್ಕೆ ಪ್ರೇರಣೆ ನೀಡಿದರು’ ಎಂದು ಟಿಎಂಸಿ ಜಗದ್ದಾಲ್ ಕ್ಷೇತ್ರದ ಶಾಸಕ ಸೋಮನಾಥ್ ಶ್ಯಾಮ್ ಆರೋಪಿಸಿದರು. </p> <p>ಸ್ಥಳದಲ್ಲಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ. ಗಾಯಗೊಂಡ ಯುವಕನನ್ನು ಕೋಲ್ಕತ್ತದ ಆಸ್ಪತ್ರೆಗೆ ದಾಖಲಿಸಲಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>