<p><strong>ನವದೆಹಲಿ</strong>:ಲಖಿಂಪುರ ಖೇರಿಯಲ್ಲಿ ಭಾನುವಾರ ನಡೆದ ಘಟನೆಯಲ್ಲಿ ರೈತರ ಸಾವಿಗೆ ಕಾರಣದವರ ವಿರುದ್ಧ ಕೊಲೆ ಪ್ರಕರಣ ದಾಖಲಿಸುವಂತೆ ಬಿಜೆಪಿ ಸಂಸದ ವರುಣ್ ಗಾಂಧಿ ಆಗ್ರಹಿಸಿದ್ದಾರೆ.</p>.<p>ಈ ಕುರಿತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಪತ್ರ ಬರೆದಿರುವ ಅವರು, ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು. ನಿಗದಿತ ಅವಧಿಯಲ್ಲಿ ತನಿಖೆ ಪೂರ್ಣಗೊಳ್ಳಬೇಕು. ಮೃತ ರೈತರ ಕುಟುಂಬಗಳಿಗೆ ತಲಾ ₹1 ಕೋಟಿ ಪರಿಹಾರ ನೀಡಬೇಕೆಂದು ಒತ್ತಾಯಿಸಿದ್ದಾರೆ.</p>.<p>‘ಇದೊಂದು ಹೃದಯವಿದ್ರಾವಕ ಘಟನೆ‘ ಎಂದು ಬಣ್ಣಿಸಿರುವ ಅವರು, ಈ ಘಟನೆ ದೇಶದ ಜನರಲ್ಲಿ ನೋವುಂಟು ಮಾಡುವ ಜೊತೆಗೆ ಆಕ್ರೋಶಗೊಳ್ಳುವಂತೆ ಮಾಡಿದೆ ಎಂದು ಹೇಳಿದ್ದಾರೆ.</p>.<p>ರೈತರು ತಮ್ಮ ಸಮಸ್ಯೆಗಳನ್ನು ಪರಿಹರಿಸುವಂತೆ ಒತ್ತಾಯಿಸಿ ಪ್ರಜಾಪ್ರಭುತ್ವ ನೀಡಿರುವ ಹಕ್ಕುಗಳ ಅಡಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಹೋರಾಟದಲ್ಲಿ ಪಾಲ್ಗೊಂಡಿರುವವರೆಲ್ಲ ನಮ್ಮ ರೈತ ಸಹೋದರರು, ನಮ್ಮ ದೇಶದ ಪ್ರಜೆಗಳು‘ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.</p>.<p>‘ಪ್ರತಿಭಟನಾ ನಿರತ ರೈತರೊಂದಿಗೆ ಸಂಯಮ ಮತ್ತು ತಾಳ್ಮೆಯಿಂದ ವ್ಯವಹರಿಸಬೇಕು. ಎಂಥದ್ದೇ ಸಂದರ್ಭದಲ್ಲಾದರೂ ರೈತರೊಂದಿಗೆ ಸಂವೇದನೆಯಿಂದ ವರ್ತಿಸಬೇಕು. ಹಾಗೆಯೇ, ಗಾಂಧಿ ತತ್ವ ಮತ್ತು ಪ್ರಜಾಪ್ರಭುತ್ವದ ಮಾರ್ಗವನ್ನೇ ಅನುಸರಿಸಬೇಕು‘ ಎಂದು ವರುಣ್ ಗಾಂಧಿ ಹೇಳಿದ್ದಾರೆ.</p>.<p>ಈ ಘಟನೆಯ ಹಿಂದೆ ಯಾರ ಕೈವಾಡವಿದೆ ಎಂಬುದನ್ನು ಪತ್ತೆ ಮಾಡಬೇಕು. ಶಂಕಿತರನ್ನು ಗುರುತಿಸಿ ವಿಚಾರಣೆ ನಡೆಸಬೇಕು. ಆರೋಪಿಗಳ ವಿರುದ್ಧ ವಿರುದ್ಧ ಕೊಲೆ ಪ್ರಕರಣ ದಾಖಲಿಸಬೇಕು‘ ಎಂದು ಅವರು ಮನವಿ ಮಾಡಿದ್ದಾರೆ.</p>.<p>‘ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ಸಿಬಿಐ ಮೂಲಕ ಕಾಲಮಿತಿಯಲ್ಲಿ ಈ ಪ್ರಕರಣದ ತನಿಖೆ ನಡೆಸುವುದು ಹೆಚ್ಚು ಸೂಕ್ತ‘ ಎಂದು ವರುಣ್ ಗಾಂಧಿ ಹೇಳಿದ್ದಾರೆ.</p>.<p><strong>ಇವನ್ನೂ ಓದಿ<br />*</strong><a href="https://cms.prajavani.net/india-news/lakhimpur-kheri-uttar-pradesh-farmers-killed-union-ministers-ajay-mishra-son-ashish-mishra-872453.html" itemprop="url">ಉತ್ತರ ಪ್ರದೇಶದಲ್ಲಿ ರೈತರ ಮೇಲೆ ಹರಿದ ವಾಹನ: 8 ಬಲಿ </a><br /><strong>*</strong><a href="https://cms.prajavani.net/india-news/up-govt-asks-lucknow-airport-not-to-allow-arrival-of-chhattisgarh-cm-punjab-dy-cm-872476.html" itemprop="url">ಛತ್ತೀಸ್ಗಡ ಸಿಎಂ, ಪಂಜಾಬ್ ಉಪಮುಖ್ಯಮಂತ್ರಿ ಭೇಟಿ ತಡೆಗೆ ಉ. ಪ್ರದೇಶ ಸರ್ಕಾರ ಮನವಿ </a><br /><strong>*</strong><a href="https://cms.prajavani.net/india-news/lakhimpur-violence-priyanka-detained-case-filed-against-ministers-son-and-fourteen-others-872474.html" itemprop="url">ಲಖಿಂಪುರ ಹಿಂಸಾಚಾರ: ಕೇಂದ್ರ ಸಚಿವರ ಪುತ್ರ, ಇತರ 14 ಮಂದಿ ವಿರುದ್ಧ ಪ್ರಕರಣ? </a><br /><strong>*</strong><a href="https://cms.prajavani.net/india-news/priyanka-leaves-for-lakhimpur-kheri-says-police-tried-to-stop-her-872463.html" itemprop="url">ಲಖಿಂಪುರ–ಖೇರಿಗೆ ಪ್ರಿಯಾಂಕಾ ಗಾಂಧಿ ವಾದ್ರಾ ಭೇಟಿ, ಪೊಲೀಸರ ವಿರುದ್ಧ ಆರೋಪ</a><strong></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>:ಲಖಿಂಪುರ ಖೇರಿಯಲ್ಲಿ ಭಾನುವಾರ ನಡೆದ ಘಟನೆಯಲ್ಲಿ ರೈತರ ಸಾವಿಗೆ ಕಾರಣದವರ ವಿರುದ್ಧ ಕೊಲೆ ಪ್ರಕರಣ ದಾಖಲಿಸುವಂತೆ ಬಿಜೆಪಿ ಸಂಸದ ವರುಣ್ ಗಾಂಧಿ ಆಗ್ರಹಿಸಿದ್ದಾರೆ.</p>.<p>ಈ ಕುರಿತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಪತ್ರ ಬರೆದಿರುವ ಅವರು, ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು. ನಿಗದಿತ ಅವಧಿಯಲ್ಲಿ ತನಿಖೆ ಪೂರ್ಣಗೊಳ್ಳಬೇಕು. ಮೃತ ರೈತರ ಕುಟುಂಬಗಳಿಗೆ ತಲಾ ₹1 ಕೋಟಿ ಪರಿಹಾರ ನೀಡಬೇಕೆಂದು ಒತ್ತಾಯಿಸಿದ್ದಾರೆ.</p>.<p>‘ಇದೊಂದು ಹೃದಯವಿದ್ರಾವಕ ಘಟನೆ‘ ಎಂದು ಬಣ್ಣಿಸಿರುವ ಅವರು, ಈ ಘಟನೆ ದೇಶದ ಜನರಲ್ಲಿ ನೋವುಂಟು ಮಾಡುವ ಜೊತೆಗೆ ಆಕ್ರೋಶಗೊಳ್ಳುವಂತೆ ಮಾಡಿದೆ ಎಂದು ಹೇಳಿದ್ದಾರೆ.</p>.<p>ರೈತರು ತಮ್ಮ ಸಮಸ್ಯೆಗಳನ್ನು ಪರಿಹರಿಸುವಂತೆ ಒತ್ತಾಯಿಸಿ ಪ್ರಜಾಪ್ರಭುತ್ವ ನೀಡಿರುವ ಹಕ್ಕುಗಳ ಅಡಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಹೋರಾಟದಲ್ಲಿ ಪಾಲ್ಗೊಂಡಿರುವವರೆಲ್ಲ ನಮ್ಮ ರೈತ ಸಹೋದರರು, ನಮ್ಮ ದೇಶದ ಪ್ರಜೆಗಳು‘ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.</p>.<p>‘ಪ್ರತಿಭಟನಾ ನಿರತ ರೈತರೊಂದಿಗೆ ಸಂಯಮ ಮತ್ತು ತಾಳ್ಮೆಯಿಂದ ವ್ಯವಹರಿಸಬೇಕು. ಎಂಥದ್ದೇ ಸಂದರ್ಭದಲ್ಲಾದರೂ ರೈತರೊಂದಿಗೆ ಸಂವೇದನೆಯಿಂದ ವರ್ತಿಸಬೇಕು. ಹಾಗೆಯೇ, ಗಾಂಧಿ ತತ್ವ ಮತ್ತು ಪ್ರಜಾಪ್ರಭುತ್ವದ ಮಾರ್ಗವನ್ನೇ ಅನುಸರಿಸಬೇಕು‘ ಎಂದು ವರುಣ್ ಗಾಂಧಿ ಹೇಳಿದ್ದಾರೆ.</p>.<p>ಈ ಘಟನೆಯ ಹಿಂದೆ ಯಾರ ಕೈವಾಡವಿದೆ ಎಂಬುದನ್ನು ಪತ್ತೆ ಮಾಡಬೇಕು. ಶಂಕಿತರನ್ನು ಗುರುತಿಸಿ ವಿಚಾರಣೆ ನಡೆಸಬೇಕು. ಆರೋಪಿಗಳ ವಿರುದ್ಧ ವಿರುದ್ಧ ಕೊಲೆ ಪ್ರಕರಣ ದಾಖಲಿಸಬೇಕು‘ ಎಂದು ಅವರು ಮನವಿ ಮಾಡಿದ್ದಾರೆ.</p>.<p>‘ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ಸಿಬಿಐ ಮೂಲಕ ಕಾಲಮಿತಿಯಲ್ಲಿ ಈ ಪ್ರಕರಣದ ತನಿಖೆ ನಡೆಸುವುದು ಹೆಚ್ಚು ಸೂಕ್ತ‘ ಎಂದು ವರುಣ್ ಗಾಂಧಿ ಹೇಳಿದ್ದಾರೆ.</p>.<p><strong>ಇವನ್ನೂ ಓದಿ<br />*</strong><a href="https://cms.prajavani.net/india-news/lakhimpur-kheri-uttar-pradesh-farmers-killed-union-ministers-ajay-mishra-son-ashish-mishra-872453.html" itemprop="url">ಉತ್ತರ ಪ್ರದೇಶದಲ್ಲಿ ರೈತರ ಮೇಲೆ ಹರಿದ ವಾಹನ: 8 ಬಲಿ </a><br /><strong>*</strong><a href="https://cms.prajavani.net/india-news/up-govt-asks-lucknow-airport-not-to-allow-arrival-of-chhattisgarh-cm-punjab-dy-cm-872476.html" itemprop="url">ಛತ್ತೀಸ್ಗಡ ಸಿಎಂ, ಪಂಜಾಬ್ ಉಪಮುಖ್ಯಮಂತ್ರಿ ಭೇಟಿ ತಡೆಗೆ ಉ. ಪ್ರದೇಶ ಸರ್ಕಾರ ಮನವಿ </a><br /><strong>*</strong><a href="https://cms.prajavani.net/india-news/lakhimpur-violence-priyanka-detained-case-filed-against-ministers-son-and-fourteen-others-872474.html" itemprop="url">ಲಖಿಂಪುರ ಹಿಂಸಾಚಾರ: ಕೇಂದ್ರ ಸಚಿವರ ಪುತ್ರ, ಇತರ 14 ಮಂದಿ ವಿರುದ್ಧ ಪ್ರಕರಣ? </a><br /><strong>*</strong><a href="https://cms.prajavani.net/india-news/priyanka-leaves-for-lakhimpur-kheri-says-police-tried-to-stop-her-872463.html" itemprop="url">ಲಖಿಂಪುರ–ಖೇರಿಗೆ ಪ್ರಿಯಾಂಕಾ ಗಾಂಧಿ ವಾದ್ರಾ ಭೇಟಿ, ಪೊಲೀಸರ ವಿರುದ್ಧ ಆರೋಪ</a><strong></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>