<p class="title"><strong>ಲಂಡನ್: </strong>ಬ್ರಿಟನ್ನ ಕರಾವಳಿ ತೀರದ ಕಾರ್ನ್ವಾಲ್ ಪ್ರದೇಶದಲ್ಲಿ ಜೂನ್ 11 ಮತ್ತು 13ರಂದು ನಡೆಯಲಿರುವ ಜಿ 7 ದೇಶಗಳ ಶೃಂಗಸಭೆಯಲ್ಲಿ ಪಾಲ್ಗೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಆಹ್ವಾನ ನೀಡಲಾಗಿದೆ.</p>.<p class="title">ಬಹುಪಕ್ಷೀಯ ಶೃಂಗಸಭೆಯಲ್ಲಿ ಭಾಗವಹಿಸುವಂತೆ ದಕ್ಷಿಣ ಕೊರಿಯಾ, ಆಸ್ಟ್ರೇಲಿಯಾದ ಜೊತೆಗೆ ಭಾರತವನ್ನು ಕಳೆದ ವರ್ಷವೇ ಆಹ್ವಾನಿಸಲಾಗಿತ್ತು. ಈ ಸಂಬಂಧ, ಬ್ರಿಟನ್ನ ಪ್ರಧಾನಿ ಬೋರಿಸ್ ಜಾನ್ಸನ್ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ಫೋನ್ ಕರೆ ಮೂಲಕ ಆಹ್ವಾನ ನೀಡಿದ್ದರು. ಭಾನುವಾರ ಔಪಚಾರಿಕವಾಗಿ ಆಹ್ವಾನಿಸಲಾಗಿದೆ.</p>.<p class="title">ಗಣರಾಜ್ಯೋತ್ಸವ ಸಂದರ್ಭದಲ್ಲಿ ಜಾನ್ಸನ್ ಅವರ ಭಾರತ ಭೇಟಿ ನಿಗದಿಯಾಗಿತ್ತು. ಆದರೆ, ಕೊರೊನಾ ಬಿಕ್ಕಟ್ಟಿನಿಂದಾಗಿ ಅದನ್ನು ರದ್ದುಗೊಳಿಸಲಾಗಿದೆ. ಜಿ 7 ದೇಶಗಳ ಶೃಂಗಸಭೆಗೂ ಮೊದಲು ಭಾರತಕ್ಕೆ ಭೇಟಿ ನೀಡುವ ಯೋಜನೆಯನ್ನು ಜಾನ್ಸನ್ ಇದೇ ವೇಳೆ ಪುನರುಚ್ಚರಿಸಿದರು.</p>.<p class="title">ಈ ಬಾರಿಯ ಶೃಂಗಸಭೆಯಲ್ಲಿ ಕೊರೊನಾ ಸಂದಿಗ್ಧ ಪರಿಸ್ಥಿತಿಯ ಕುರಿತು ಹೆಚ್ಚಿನ ಚರ್ಚೆ ನಡೆಯುವ ಸಾಧ್ಯತೆಯಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಲಂಡನ್: </strong>ಬ್ರಿಟನ್ನ ಕರಾವಳಿ ತೀರದ ಕಾರ್ನ್ವಾಲ್ ಪ್ರದೇಶದಲ್ಲಿ ಜೂನ್ 11 ಮತ್ತು 13ರಂದು ನಡೆಯಲಿರುವ ಜಿ 7 ದೇಶಗಳ ಶೃಂಗಸಭೆಯಲ್ಲಿ ಪಾಲ್ಗೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಆಹ್ವಾನ ನೀಡಲಾಗಿದೆ.</p>.<p class="title">ಬಹುಪಕ್ಷೀಯ ಶೃಂಗಸಭೆಯಲ್ಲಿ ಭಾಗವಹಿಸುವಂತೆ ದಕ್ಷಿಣ ಕೊರಿಯಾ, ಆಸ್ಟ್ರೇಲಿಯಾದ ಜೊತೆಗೆ ಭಾರತವನ್ನು ಕಳೆದ ವರ್ಷವೇ ಆಹ್ವಾನಿಸಲಾಗಿತ್ತು. ಈ ಸಂಬಂಧ, ಬ್ರಿಟನ್ನ ಪ್ರಧಾನಿ ಬೋರಿಸ್ ಜಾನ್ಸನ್ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ಫೋನ್ ಕರೆ ಮೂಲಕ ಆಹ್ವಾನ ನೀಡಿದ್ದರು. ಭಾನುವಾರ ಔಪಚಾರಿಕವಾಗಿ ಆಹ್ವಾನಿಸಲಾಗಿದೆ.</p>.<p class="title">ಗಣರಾಜ್ಯೋತ್ಸವ ಸಂದರ್ಭದಲ್ಲಿ ಜಾನ್ಸನ್ ಅವರ ಭಾರತ ಭೇಟಿ ನಿಗದಿಯಾಗಿತ್ತು. ಆದರೆ, ಕೊರೊನಾ ಬಿಕ್ಕಟ್ಟಿನಿಂದಾಗಿ ಅದನ್ನು ರದ್ದುಗೊಳಿಸಲಾಗಿದೆ. ಜಿ 7 ದೇಶಗಳ ಶೃಂಗಸಭೆಗೂ ಮೊದಲು ಭಾರತಕ್ಕೆ ಭೇಟಿ ನೀಡುವ ಯೋಜನೆಯನ್ನು ಜಾನ್ಸನ್ ಇದೇ ವೇಳೆ ಪುನರುಚ್ಚರಿಸಿದರು.</p>.<p class="title">ಈ ಬಾರಿಯ ಶೃಂಗಸಭೆಯಲ್ಲಿ ಕೊರೊನಾ ಸಂದಿಗ್ಧ ಪರಿಸ್ಥಿತಿಯ ಕುರಿತು ಹೆಚ್ಚಿನ ಚರ್ಚೆ ನಡೆಯುವ ಸಾಧ್ಯತೆಯಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>