<p><strong>ಚಂಡೀಗಢ:</strong> ಅರ್ಜುನ ಪ್ರಶಸ್ತಿ ವಿಜೇತೆ, ಮಾಜಿ ವಿಶ್ವ ಚಾಂಪಿಯನ್ ಬಾಕ್ಸರ್ ಸ್ವೀಟಿ ಬೂರಾ ಅವರು ತಮ್ಮ ಪತಿ, ಕಬ್ಬಡ್ಡಿಯಲ್ಲಿ ಏಷ್ಯಾಡ್ ಕಂಚಿನ ಪದಕ ವಿಜೇತ ದೀಪಕ್ ಹೂಡಾ ಮೇಲೆ ಹಲ್ಲೆಗೆ ಯತ್ನಿಸಿರುವ ಘಟನೆ ನಡೆದಿದೆ.</p><p>ಈ ಘಟನೆ ಮಾರ್ಚ್ 15ರಂದು ಹರಿಯಾಣದ ಹಿಸಾರ್ನ ಪೊಲೀಸ್ ಠಾಣೆಯೊಳಗೆ ನಡೆದಿದೆ ಎಂದು ವರದಿಯಾಗಿದೆ.</p>.<p>ಈ ಪ್ರಕರಣದ ಸಂಬಂಧ ಎರಡು ಕುಟುಂಬಗಳ ಸದಸ್ಯರು ಪೊಲೀಸ್ ಠಾಣೆಯಲ್ಲಿ ಮಾತನಾಡುತ್ತಿದ್ದರು. ಈ ವೇಳೆ ಮಾತಿಗೆ ಮಾತು ಬೆಳೆದು ಸ್ವೀಟಿ ಬೂರಾ ಹೂಡಾ ಕಡೆಗೆ ಧಾವಿಸಿ ಅವರ ಕುತ್ತಿಗೆ ಹಿಡಿದುಕೊಂಡು ಹಲ್ಲೆ ಮಾಡಲು ಯತ್ನಿಸಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿದೆ. ನಂತರ ಕುಟುಂಬ ಸದಸ್ಯರು ಮಧ್ಯ ಪ್ರವೇಶಿಸಿ ಸ್ವೀಟಿ ಬೂರಾ ಅವರನ್ನು ತಡೆದಿದ್ದಾರೆ.</p><p>ಈ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.</p><p>ಸ್ವೀಟಿ ಮತ್ತು ದೀಪಕ್ 2022ರಲ್ಲಿ ವಿವಾಹವಾಗಿದ್ದರು. ಇದೀಗ ದೀಪಕ್ ಮತ್ತು ಅವರ ಕುಟುಂಬ ಸದಸ್ಯರು ವರದಕ್ಷಿಣೆ ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿ ಹರಿಯಾಣದ ಹಿಸ್ಸಾರ್ನಲ್ಲಿ ಪ್ರಕರಣ ದಾಖಲಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಂಡೀಗಢ:</strong> ಅರ್ಜುನ ಪ್ರಶಸ್ತಿ ವಿಜೇತೆ, ಮಾಜಿ ವಿಶ್ವ ಚಾಂಪಿಯನ್ ಬಾಕ್ಸರ್ ಸ್ವೀಟಿ ಬೂರಾ ಅವರು ತಮ್ಮ ಪತಿ, ಕಬ್ಬಡ್ಡಿಯಲ್ಲಿ ಏಷ್ಯಾಡ್ ಕಂಚಿನ ಪದಕ ವಿಜೇತ ದೀಪಕ್ ಹೂಡಾ ಮೇಲೆ ಹಲ್ಲೆಗೆ ಯತ್ನಿಸಿರುವ ಘಟನೆ ನಡೆದಿದೆ.</p><p>ಈ ಘಟನೆ ಮಾರ್ಚ್ 15ರಂದು ಹರಿಯಾಣದ ಹಿಸಾರ್ನ ಪೊಲೀಸ್ ಠಾಣೆಯೊಳಗೆ ನಡೆದಿದೆ ಎಂದು ವರದಿಯಾಗಿದೆ.</p>.<p>ಈ ಪ್ರಕರಣದ ಸಂಬಂಧ ಎರಡು ಕುಟುಂಬಗಳ ಸದಸ್ಯರು ಪೊಲೀಸ್ ಠಾಣೆಯಲ್ಲಿ ಮಾತನಾಡುತ್ತಿದ್ದರು. ಈ ವೇಳೆ ಮಾತಿಗೆ ಮಾತು ಬೆಳೆದು ಸ್ವೀಟಿ ಬೂರಾ ಹೂಡಾ ಕಡೆಗೆ ಧಾವಿಸಿ ಅವರ ಕುತ್ತಿಗೆ ಹಿಡಿದುಕೊಂಡು ಹಲ್ಲೆ ಮಾಡಲು ಯತ್ನಿಸಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿದೆ. ನಂತರ ಕುಟುಂಬ ಸದಸ್ಯರು ಮಧ್ಯ ಪ್ರವೇಶಿಸಿ ಸ್ವೀಟಿ ಬೂರಾ ಅವರನ್ನು ತಡೆದಿದ್ದಾರೆ.</p><p>ಈ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.</p><p>ಸ್ವೀಟಿ ಮತ್ತು ದೀಪಕ್ 2022ರಲ್ಲಿ ವಿವಾಹವಾಗಿದ್ದರು. ಇದೀಗ ದೀಪಕ್ ಮತ್ತು ಅವರ ಕುಟುಂಬ ಸದಸ್ಯರು ವರದಕ್ಷಿಣೆ ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿ ಹರಿಯಾಣದ ಹಿಸ್ಸಾರ್ನಲ್ಲಿ ಪ್ರಕರಣ ದಾಖಲಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>