ಜನವರಿ 15ರಂದು ರೋಹಿಣಿಯಲ್ಲಿಯ ಖಾಸಗಿ ಆಸ್ಪತ್ರೆಗೆ ಕರೆದೊಯ್ದಾಗ ಅಲ್ಲೂ ಕೆಲ ಔಷಧಗಳನ್ನು ನೀಡಿದರು. ಆದರೆ, ಮಗನ ಆರೋಗ್ಯ ಸ್ಥಿತಿ ಮತ್ತಷ್ಟು ಹದಗೆಟ್ಟ ಕಾರಣ, ಪುನಃ ಆತನನ್ನು ಜ. 20ರಂದು ದೀಪ್ ಚಂದ್ ಬಂಧು ಆಸ್ಪತ್ರೆಗೆ ಕರೆದೊಯ್ದಿದ್ದಾಗಿ ಬಾಲಕನ ತಂದೆ ಹೇಳಿದ್ದಾರೆ. ತಮ್ಮ ಮಗನ ಪ್ರಕರಣದಲ್ಲಿ ವೈದ್ಯಕೀಯ ನಿರ್ಲಕ್ಷ್ಯ ನಡೆದಿದೆ ಎಂದೂ ಬಾಲಕನ ತಂದೆ ಆರೋಪಿಸಿದ್ದಾರೆ ಎಂದು ಹೇಳಿದ್ದಾರೆ.