ಹೈದರಾಬಾದ್: ‘ಅಂಗಡಿಯಿಂದ ಬೀಡಿ ತರಲು ತಡಮಾಡಿದ ಎಂದು ವ್ಯಕ್ತಿಯೊಬ್ಬ 10 ವರ್ಷದ ಮಗನಿಗೆ ಬೆಂಕಿ ಹಚ್ಚಿದ್ದು, ತೀವ್ರ ಗಾಯಗೊಂಡಿದ್ದ ಬಾಲಕ ಆಸ್ಪತ್ರೆಯಲ್ಲಿ ಅಸುನೀಗಿದ್ದಾನೆ’ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.
‘ಮಗ ಸರಿಯಾಗಿ ಓದುತ್ತಿಲ್ಲ ಎಂಬ ಕೋಪವೂ ಆ ವ್ಯಕ್ತಿಗಿತ್ತು. 17ರ ರಾತ್ರಿ ಮಗನ ಮೇಲೆ ಟರ್ಪೆಂಟೈನ್ ಎಣ್ಣೆ ಸುರಿದು ಬೆಂಕಿ ಹಚ್ಚಿದ್ದ. ಆಸ್ಪತ್ರೆಗೆ ಸೇರಿಸಿದ್ದ ಬಾಲಕ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆ’ ಎಂದು ಪೊಲೀಸರು ತಿಳಿಸಿದ್ದಾರೆ.
‘ವ್ಯಕ್ತಿಯು ಮದ್ಯ ವ್ಯಸನಿಯಾಗಿದ್ದ ಎಂಬುದು ತಿಳಿದುಬಂದಿದೆ. ಆತನನ್ನು ಬಂಧಿಸಿದ್ದು, ಸದ್ಯ ಜೈಲಿನಲ್ಲಿದ್ದಾನೆ’ ಎಂದೂ ಪೊಲೀಸರು ಹೇಳಿದ್ದಾರೆ.