<p><strong>ಪಟ್ನಾ</strong>: ಬಿಹಾರ ಲೋಕಸೇವಾ ಆಯೋಗ (ಬಿಪಿಎಸ್ಸಿ) ಡಿಸೆಂಬರ್ 13ರಂದು ನಡೆಸಿದ್ದ ಪರೀಕ್ಷೆಯನ್ನು ರದ್ದುಪಡಿಸಲು ಒತ್ತಾಯಿಸಿ ಆಮರಣ ನಿರಶನ ನಡೆಸುತ್ತಿದ್ದ ‘ಜನ ಸೂರಜ್’ ಪಕ್ಷದ ಸ್ಥಾಪಕ ಪ್ರಶಾಂತ್ ಕಿಶೋರ್ ಅವರನ್ನು ಸೋಮವಾರ ಮುಂಜಾನೆ ಪೊಲೀಸರು ಬಂಧಿಸಿದ್ದಾರೆ.</p><p>ಪ್ರತಿಭಟನನಿರತ ಸ್ಥಳದಿಂದ ಪ್ರಶಾಂತ್ ಕಿಶೋರ್ ಮತ್ತು ಅವರ ಬೆಂಬಲಿಗರನ್ನು ಪೊಲೀಸರು ಹೊರ ಕಳಿಸಿದ್ದಾರೆ. ಕಿಶೋರ್ ಅವರನ್ನು ಪಟ್ನಾದ ಏಮ್ಸ್ಗೆ ವೈದ್ಯಕೀಯ ಪರೀಕ್ಷೆಗಾಗಿ ಕರೆದೊಯ್ದಿದ್ದಾರೆ ಎಂದು ಬೆಂಬಲಿಗರು ಹೇಳಿದ್ದಾರೆ.</p><p>ಪಟ್ನಾದ ಗಾಂಧಿ ಮೈದಾನದಲ್ಲಿ ಪ್ರಶಾಂತ್ ಕಿಶೋರ್ ಆಮರಣ ನಿರಶವನ್ನು ಕಳೆದ ಗುರುವಾರ (ಜ.2) ಆರಂಭಿಸಿದ್ದರು.</p>.<p><strong>ಏನಿದು ಬಿಪಿಎಸ್ಸಿ ಪರೀಕ್ಷೆ ಪ್ರಕರಣ?</strong></p><p>ಡಿಸೆಂಬರ್ 13ರಂದು ನಡೆದ 70ನೇ ಬಿಪಿಎಸ್ಸಿ ಕಂಬೈನ್ಡ್ ನೇಮಕಾತಿ ಪರೀಕ್ಷೆಯ (ಸಿಸಿಇ) ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂಬ ಆರೋಪ ಹಿನ್ನೆಲೆ, ಪರೀಕ್ಷೆ ರದ್ದುಗೊಳಿಸುವಂತೆ ಆಗ್ರಹಿಸಿ ನೂರಾರು ಅಭ್ಯರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ.</p><p>ಭಾನುವಾರ ಗಾಂಧಿ ಮೈದಾನದಿಂದ ಮುಖ್ಯಮಂತ್ರಿ ನಿವಾಸದ ಕಡೆಗೆ ಮೆರವಣಿಗೆ ಮಾಡುವಾಗ ಪ್ರತಿಭಟನಕಾರರು ಮತ್ತು ಪೊಲೀಸರ ನಡುವೆ ಘರ್ಷಣೆ ನಡೆದಿತ್ತು. ಈ ವೇಳೆ ಪೊಲೀಸರು ಪ್ರತಿಭಟನಕಾರರ ಮೇಲೆ ಲಾಠಿ ಚಾರ್ಜ್ ಮಾಡಿದ್ದರು.</p><p>ಏತನ್ಮಧ್ಯೆ, ಪ್ರತಿಭಟನನಿರತ ಅಭ್ಯರ್ಥಿಗಳಿಗೆ ಪ್ರಚೋದನೆ ನೀಡಿದ್ದಾರೆ ಎಂಬ ಆರೋಪದ ಮೇಲೆ ಪ್ರಶಾಂತ್ ಕಿಶೋರ್ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದರು.</p>.BPSC ಪರೀಕ್ಷೆ: ಆಮರಣಾಂತ ಉಪವಾಸ ಸತ್ಯಾಗ್ರಹ ಆರಂಭಿಸಿದ ಪ್ರಶಾಂತ್ ಕಿಶೋರ್.ಬಿಹಾರ | BPSC ಪರೀಕ್ಷೆ ರದ್ದುಗೊಳಿಸುವಂತೆ ಒತ್ತಾಯ: ಪ್ರತಿಭಟನಕಾರರ ಮೇಲೆ ಲಾಠಿ.ಪಟ್ನಾ: ಬಿಪಿಎಸ್ಸಿ ಆಕಾಂಕ್ಷಿಗಳಿಗೆ ಲಾಠಿ ಏಟು .ಬಿಪಿಎಸ್ಸಿ ಆಕಾಂಕ್ಷಿಗಳಿಗೆ ಲಾಠಿ ಏಟು: ಎನ್ಡಿಎ ಸರ್ಕಾರದ ವಿರುದ್ಧ ರಾಹುಲ್ ಟೀಕೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಟ್ನಾ</strong>: ಬಿಹಾರ ಲೋಕಸೇವಾ ಆಯೋಗ (ಬಿಪಿಎಸ್ಸಿ) ಡಿಸೆಂಬರ್ 13ರಂದು ನಡೆಸಿದ್ದ ಪರೀಕ್ಷೆಯನ್ನು ರದ್ದುಪಡಿಸಲು ಒತ್ತಾಯಿಸಿ ಆಮರಣ ನಿರಶನ ನಡೆಸುತ್ತಿದ್ದ ‘ಜನ ಸೂರಜ್’ ಪಕ್ಷದ ಸ್ಥಾಪಕ ಪ್ರಶಾಂತ್ ಕಿಶೋರ್ ಅವರನ್ನು ಸೋಮವಾರ ಮುಂಜಾನೆ ಪೊಲೀಸರು ಬಂಧಿಸಿದ್ದಾರೆ.</p><p>ಪ್ರತಿಭಟನನಿರತ ಸ್ಥಳದಿಂದ ಪ್ರಶಾಂತ್ ಕಿಶೋರ್ ಮತ್ತು ಅವರ ಬೆಂಬಲಿಗರನ್ನು ಪೊಲೀಸರು ಹೊರ ಕಳಿಸಿದ್ದಾರೆ. ಕಿಶೋರ್ ಅವರನ್ನು ಪಟ್ನಾದ ಏಮ್ಸ್ಗೆ ವೈದ್ಯಕೀಯ ಪರೀಕ್ಷೆಗಾಗಿ ಕರೆದೊಯ್ದಿದ್ದಾರೆ ಎಂದು ಬೆಂಬಲಿಗರು ಹೇಳಿದ್ದಾರೆ.</p><p>ಪಟ್ನಾದ ಗಾಂಧಿ ಮೈದಾನದಲ್ಲಿ ಪ್ರಶಾಂತ್ ಕಿಶೋರ್ ಆಮರಣ ನಿರಶವನ್ನು ಕಳೆದ ಗುರುವಾರ (ಜ.2) ಆರಂಭಿಸಿದ್ದರು.</p>.<p><strong>ಏನಿದು ಬಿಪಿಎಸ್ಸಿ ಪರೀಕ್ಷೆ ಪ್ರಕರಣ?</strong></p><p>ಡಿಸೆಂಬರ್ 13ರಂದು ನಡೆದ 70ನೇ ಬಿಪಿಎಸ್ಸಿ ಕಂಬೈನ್ಡ್ ನೇಮಕಾತಿ ಪರೀಕ್ಷೆಯ (ಸಿಸಿಇ) ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂಬ ಆರೋಪ ಹಿನ್ನೆಲೆ, ಪರೀಕ್ಷೆ ರದ್ದುಗೊಳಿಸುವಂತೆ ಆಗ್ರಹಿಸಿ ನೂರಾರು ಅಭ್ಯರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ.</p><p>ಭಾನುವಾರ ಗಾಂಧಿ ಮೈದಾನದಿಂದ ಮುಖ್ಯಮಂತ್ರಿ ನಿವಾಸದ ಕಡೆಗೆ ಮೆರವಣಿಗೆ ಮಾಡುವಾಗ ಪ್ರತಿಭಟನಕಾರರು ಮತ್ತು ಪೊಲೀಸರ ನಡುವೆ ಘರ್ಷಣೆ ನಡೆದಿತ್ತು. ಈ ವೇಳೆ ಪೊಲೀಸರು ಪ್ರತಿಭಟನಕಾರರ ಮೇಲೆ ಲಾಠಿ ಚಾರ್ಜ್ ಮಾಡಿದ್ದರು.</p><p>ಏತನ್ಮಧ್ಯೆ, ಪ್ರತಿಭಟನನಿರತ ಅಭ್ಯರ್ಥಿಗಳಿಗೆ ಪ್ರಚೋದನೆ ನೀಡಿದ್ದಾರೆ ಎಂಬ ಆರೋಪದ ಮೇಲೆ ಪ್ರಶಾಂತ್ ಕಿಶೋರ್ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದರು.</p>.BPSC ಪರೀಕ್ಷೆ: ಆಮರಣಾಂತ ಉಪವಾಸ ಸತ್ಯಾಗ್ರಹ ಆರಂಭಿಸಿದ ಪ್ರಶಾಂತ್ ಕಿಶೋರ್.ಬಿಹಾರ | BPSC ಪರೀಕ್ಷೆ ರದ್ದುಗೊಳಿಸುವಂತೆ ಒತ್ತಾಯ: ಪ್ರತಿಭಟನಕಾರರ ಮೇಲೆ ಲಾಠಿ.ಪಟ್ನಾ: ಬಿಪಿಎಸ್ಸಿ ಆಕಾಂಕ್ಷಿಗಳಿಗೆ ಲಾಠಿ ಏಟು .ಬಿಪಿಎಸ್ಸಿ ಆಕಾಂಕ್ಷಿಗಳಿಗೆ ಲಾಠಿ ಏಟು: ಎನ್ಡಿಎ ಸರ್ಕಾರದ ವಿರುದ್ಧ ರಾಹುಲ್ ಟೀಕೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>