<p><strong>ಲಖನೌ</strong>: ‘ಭಾರತದ ಬ್ರಹ್ಮೋಸ್ ಕ್ಷಿಪಣಿ ಪಾಕಿಸ್ತಾನದ ಮೂಲೆಮೂಲೆಯನ್ನೂ ತಲುಪುವ ಸಾಮರ್ಥ್ಯ ಹೊಂದಿದೆ. ಅದರಿಂದ ತಪ್ಪಿಸಿಕೊಳ್ಳಲು ಅವರಿಗೆ ಸಾಧ್ಯವೇ ಇಲ್ಲ’ ಎಂದು ರಕ್ಷಣಾ ಸಚಿವ ರಾಜನಾಥ ಸಿಂಗ್ ಶನಿವಾರ ಹೇಳಿದರು.</p><p>‘ಭಾರತದ ಸೇನೆ ಈಚೆಗೆ ನಡೆಸಿದ ಸಿಂಧೂರ ಕಾರ್ಯಾಚರಣೆಯು ‘ಟ್ರೇಲರ್’ ಆಗಿತ್ತು. ಗೆಲುವು ಸಾಧಿಸುವುದು ಭಾರತಕ್ಕೆ ಅಭ್ಯಾಸವಾಗಿಬಿಟ್ಟಿದೆ ಎಂಬುದನ್ನು ಈ ಕಾರ್ಯಾಚರಣೆ ಸಾಬೀತುಪಡಿಸಿದೆ’ ಎನ್ನುವ ಮೂಲಕ ಅವರು ನೆರೆಯ ಪಾಕಿಸ್ತಾನಕ್ಕೆ ಕಠಿಣ ಎಚ್ಚರಿಕೆ ನೀಡಿದರು.</p><p>ರಾಜನಾಥ ಸಿಂಗ್ ಅವರು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರೊಂದಿಗೆ ಇಲ್ಲಿನ ಸರೋಜಿನಿ ನಗರದ ಬ್ರಹ್ಮೋಸ್ ಏರೋಸ್ಪೇಸ್ ಘಟಕದಲ್ಲಿ ತಯಾರಿಸಲಾದ ಬ್ರಹ್ಮೋಸ್ ಕ್ಷಿಪಣಿಗಳ ಮೊದಲ ಬ್ಯಾಚ್ಅನ್ನು ಉದ್ಘಾಟಿಸಿದರು.</p><p>‘ಪಾಕಿಸ್ತಾನದ ಇಂಚಿಂಚೂ ನೆಲವನ್ನೂ ತಲುಪುವ ಸಾಮರ್ಥ್ಯವನ್ನು ಬ್ರಹ್ಮೋಸ್ ಹೊಂದಿದೆ. ಪಾಕಿಸ್ತಾನ ಎಂಬ ದೇಶವನ್ನು ಸೃಷ್ಟಿಸಲು ಭಾರತಕ್ಕೆ ಸಾಧ್ಯವಾದರೆ, ಸಮಯ ಬಂದಾಗ ಆ ದೇಶವನ್ನು...’ ಎನ್ನುತ್ತಾ ಮಾತು ಅರ್ಧಕ್ಕೆ ನಿಲ್ಲಿಸಿದರು. ಆ ಬಳಿಕ ಮುಂದುವರಿಸಿ, ‘ಆ ಬಗ್ಗೆ ನಾನು ಹೆಚ್ಚು ಹೇಳಬೇಕಾಗಿಲ್ಲ. ನೀವೆಲ್ಲರೂ ಸಾಕಷ್ಟು ಬುದ್ಧಿವಂತರಿದ್ದೀರಿ’ ಎಂದು ಹೇಳಿದರು.</p><p>ಆಪರೇಷನ್ ಸಿಂಧೂರದ ಯಶಸ್ಸನ್ನು ಶ್ಲಾಘಿಸಿದ ಸಿಂಗ್, ‘ಈ ಕಾರ್ಯಾಚರಣೆಯು ಭಾರತೀಯರಲ್ಲಿ ಹೊಸ ವಿಶ್ವಾಸವನ್ನು ತುಂಬಿದೆ ಮತ್ತು ಬ್ರಹ್ಮೋಸ್ನ ಶಕ್ತಿಯನ್ನು ಜಗತ್ತಿನ ಮುಂದೆ ಸಾಬೀತುಪಡಿಸಿದೆ’ ಎಂದರು. </p><p>‘ಅದೇ ವಿಶ್ವಾಸವನ್ನು ಕಾಪಾಡಿಕೊಳ್ಳುವುದು ನಮ್ಮ ಸಾಮೂಹಿಕ ಜವಾಬ್ದಾರಿಯಾಗಿದೆ. ಇಡೀ ಜಗತ್ತು ಈಗ ಭಾರತದ ಸೇನೆಯ ಸಾಮರ್ಥ್ಯವನ್ನು ಗುರುತಿಸುತ್ತದೆ. ಭಾರತವು ತನ್ನ ಕನಸುಗಳನ್ನು ನನಸಾಗಿಸಬಹುದು ಎಂಬ ನಮ್ಮ ನಂಬಿಕೆಗೆ ಬ್ರಹ್ಮೋಸ್ ಬಲ ನೀಡಿದೆ’ ಎಂದು ಹೇಳಿದರು.</p><p>ಪಹಲ್ಗಾಮ್ ದಾಳಿಗೆ ಪ್ರತಿಯಾಗಿ ಪಾಕಿಸ್ತಾನದ ಭಯೋತ್ಪಾದಕ ಮೂಲಸೌಕರ್ಯಗಳನ್ನು ಗುರಿಯಾಗಿಸಿ ಭಾರತದ ಸೇನೆ ಸಿಂಧೂರ ಕಾರ್ಯಾಚರಣೆ ನಡೆಸಿತ್ತು. ಪಾಕಿಸ್ತಾನದ ಗುರಿಗಳನ್ನು ಧ್ವಂಸಗೊಳಿಸಲು ಸ್ವದೇಶಿ ನಿರ್ಮಿತ ಬ್ರಹ್ಮೋಸ್ ಸೂಪರ್ಸಾನಿಕ್ ಕ್ಷಿಪಣಿಗಳನ್ನು ಬಳಸಲಾಗಿತ್ತು.</p><p>‘ಬ್ರಹ್ಮೋಸ್ ಕ್ಷಿಪಣಿಗಳ ಯಶಸ್ವಿ ತಯಾರಿಕೆಯು ಒಂದು ಕಾಲದಲ್ಲಿ ಕನಸು ಎಂದು ಭಾವಿಸಿದ್ದು ಈಗ ನನಸಾಗಿದೆ ಎಂಬುದನ್ನು ತೋರಿಸುತ್ತದೆ. ಈ ಯೋಜನೆಯು ತಾಳ್ಮೆ, ಕಠಿಣ ಪರಿಶ್ರಮ ಮತ್ತು ಬದ್ಧತೆಯನ್ನು ಪ್ರತಿನಿಧಿಸುತ್ತದೆ’ ಎಂದು ಹೇಳಿದರು.</p><p>ಮುಖ್ಯಮಂತ್ರಿ ಆದಿತ್ಯನಾಥ ಅವರು, ‘ಇದು ಉತ್ತರ ಪ್ರದೇಶಕ್ಕೆ ಹೆಮ್ಮೆಯ ಕ್ಷಣವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಮೇಕ್ ಇನ್ ಇಂಡಿಯಾ ಪರಿಕಲ್ಪನೆಯು ಈ ಸಾಧನೆಯ ಹಿಂದಿದೆ’ ಎಂದರು.</p><p> <strong>ಪ್ರಮುಖ ಅಂಶಗಳು</strong></p><p> * ಮೊದಲ ಬ್ಯಾಚ್ನ ಬ್ರಹ್ಮೋಸ್ ಕ್ಷಿಪಣಿಗಳಿಗೆ ಹಸಿರು ನಿಶಾನೆ ತೋರಿದ ರಕ್ಷಣಾ ಸಚಿವ </p><p>* ಬ್ರಹ್ಮೋಸ್ ಏರೋಸ್ಪೇಸ್ನ ಅತ್ಯಾಧುನಿಕ ಘಟಕದಲ್ಲಿ ತಯಾರಾದ ಕ್ಷಿಪಣಿ</p><p> * ಉತ್ತರ ಪ್ರದೇಶದ ಸರೋಜಿನಿ ನಗರದಲ್ಲಿ ಇದೇ ವರ್ಷ ಮೇ 11ರಂದು ಕಾರ್ಯಾರಂಭ ಮಾಡಿರುವ ಘಟಕ</p> .<div><blockquote> ಬ್ರಹ್ಮೋಸ್ ಕೇವಲ ಕ್ಷಿಪಣಿಯಲ್ಲ. ಇದು ಭಾರತದ ಹೆಚ್ಚುತ್ತಿರುವ ಶಕ್ತಿಯ ಸಂಕೇತ. ಭೂಸೇನೆ ನೌಕಾಪಡೆ ಮತ್ತು ವಾಯುಪಡೆಯ ಪ್ರಮುಖ ಆಧಾರಸ್ತಂಭವಾಗಿದೆ </blockquote><span class="attribution">ರಾಜನಾಥ ಸಿಂಗ್ ರಕ್ಷಣಾ ಸಚಿವ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ</strong>: ‘ಭಾರತದ ಬ್ರಹ್ಮೋಸ್ ಕ್ಷಿಪಣಿ ಪಾಕಿಸ್ತಾನದ ಮೂಲೆಮೂಲೆಯನ್ನೂ ತಲುಪುವ ಸಾಮರ್ಥ್ಯ ಹೊಂದಿದೆ. ಅದರಿಂದ ತಪ್ಪಿಸಿಕೊಳ್ಳಲು ಅವರಿಗೆ ಸಾಧ್ಯವೇ ಇಲ್ಲ’ ಎಂದು ರಕ್ಷಣಾ ಸಚಿವ ರಾಜನಾಥ ಸಿಂಗ್ ಶನಿವಾರ ಹೇಳಿದರು.</p><p>‘ಭಾರತದ ಸೇನೆ ಈಚೆಗೆ ನಡೆಸಿದ ಸಿಂಧೂರ ಕಾರ್ಯಾಚರಣೆಯು ‘ಟ್ರೇಲರ್’ ಆಗಿತ್ತು. ಗೆಲುವು ಸಾಧಿಸುವುದು ಭಾರತಕ್ಕೆ ಅಭ್ಯಾಸವಾಗಿಬಿಟ್ಟಿದೆ ಎಂಬುದನ್ನು ಈ ಕಾರ್ಯಾಚರಣೆ ಸಾಬೀತುಪಡಿಸಿದೆ’ ಎನ್ನುವ ಮೂಲಕ ಅವರು ನೆರೆಯ ಪಾಕಿಸ್ತಾನಕ್ಕೆ ಕಠಿಣ ಎಚ್ಚರಿಕೆ ನೀಡಿದರು.</p><p>ರಾಜನಾಥ ಸಿಂಗ್ ಅವರು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರೊಂದಿಗೆ ಇಲ್ಲಿನ ಸರೋಜಿನಿ ನಗರದ ಬ್ರಹ್ಮೋಸ್ ಏರೋಸ್ಪೇಸ್ ಘಟಕದಲ್ಲಿ ತಯಾರಿಸಲಾದ ಬ್ರಹ್ಮೋಸ್ ಕ್ಷಿಪಣಿಗಳ ಮೊದಲ ಬ್ಯಾಚ್ಅನ್ನು ಉದ್ಘಾಟಿಸಿದರು.</p><p>‘ಪಾಕಿಸ್ತಾನದ ಇಂಚಿಂಚೂ ನೆಲವನ್ನೂ ತಲುಪುವ ಸಾಮರ್ಥ್ಯವನ್ನು ಬ್ರಹ್ಮೋಸ್ ಹೊಂದಿದೆ. ಪಾಕಿಸ್ತಾನ ಎಂಬ ದೇಶವನ್ನು ಸೃಷ್ಟಿಸಲು ಭಾರತಕ್ಕೆ ಸಾಧ್ಯವಾದರೆ, ಸಮಯ ಬಂದಾಗ ಆ ದೇಶವನ್ನು...’ ಎನ್ನುತ್ತಾ ಮಾತು ಅರ್ಧಕ್ಕೆ ನಿಲ್ಲಿಸಿದರು. ಆ ಬಳಿಕ ಮುಂದುವರಿಸಿ, ‘ಆ ಬಗ್ಗೆ ನಾನು ಹೆಚ್ಚು ಹೇಳಬೇಕಾಗಿಲ್ಲ. ನೀವೆಲ್ಲರೂ ಸಾಕಷ್ಟು ಬುದ್ಧಿವಂತರಿದ್ದೀರಿ’ ಎಂದು ಹೇಳಿದರು.</p><p>ಆಪರೇಷನ್ ಸಿಂಧೂರದ ಯಶಸ್ಸನ್ನು ಶ್ಲಾಘಿಸಿದ ಸಿಂಗ್, ‘ಈ ಕಾರ್ಯಾಚರಣೆಯು ಭಾರತೀಯರಲ್ಲಿ ಹೊಸ ವಿಶ್ವಾಸವನ್ನು ತುಂಬಿದೆ ಮತ್ತು ಬ್ರಹ್ಮೋಸ್ನ ಶಕ್ತಿಯನ್ನು ಜಗತ್ತಿನ ಮುಂದೆ ಸಾಬೀತುಪಡಿಸಿದೆ’ ಎಂದರು. </p><p>‘ಅದೇ ವಿಶ್ವಾಸವನ್ನು ಕಾಪಾಡಿಕೊಳ್ಳುವುದು ನಮ್ಮ ಸಾಮೂಹಿಕ ಜವಾಬ್ದಾರಿಯಾಗಿದೆ. ಇಡೀ ಜಗತ್ತು ಈಗ ಭಾರತದ ಸೇನೆಯ ಸಾಮರ್ಥ್ಯವನ್ನು ಗುರುತಿಸುತ್ತದೆ. ಭಾರತವು ತನ್ನ ಕನಸುಗಳನ್ನು ನನಸಾಗಿಸಬಹುದು ಎಂಬ ನಮ್ಮ ನಂಬಿಕೆಗೆ ಬ್ರಹ್ಮೋಸ್ ಬಲ ನೀಡಿದೆ’ ಎಂದು ಹೇಳಿದರು.</p><p>ಪಹಲ್ಗಾಮ್ ದಾಳಿಗೆ ಪ್ರತಿಯಾಗಿ ಪಾಕಿಸ್ತಾನದ ಭಯೋತ್ಪಾದಕ ಮೂಲಸೌಕರ್ಯಗಳನ್ನು ಗುರಿಯಾಗಿಸಿ ಭಾರತದ ಸೇನೆ ಸಿಂಧೂರ ಕಾರ್ಯಾಚರಣೆ ನಡೆಸಿತ್ತು. ಪಾಕಿಸ್ತಾನದ ಗುರಿಗಳನ್ನು ಧ್ವಂಸಗೊಳಿಸಲು ಸ್ವದೇಶಿ ನಿರ್ಮಿತ ಬ್ರಹ್ಮೋಸ್ ಸೂಪರ್ಸಾನಿಕ್ ಕ್ಷಿಪಣಿಗಳನ್ನು ಬಳಸಲಾಗಿತ್ತು.</p><p>‘ಬ್ರಹ್ಮೋಸ್ ಕ್ಷಿಪಣಿಗಳ ಯಶಸ್ವಿ ತಯಾರಿಕೆಯು ಒಂದು ಕಾಲದಲ್ಲಿ ಕನಸು ಎಂದು ಭಾವಿಸಿದ್ದು ಈಗ ನನಸಾಗಿದೆ ಎಂಬುದನ್ನು ತೋರಿಸುತ್ತದೆ. ಈ ಯೋಜನೆಯು ತಾಳ್ಮೆ, ಕಠಿಣ ಪರಿಶ್ರಮ ಮತ್ತು ಬದ್ಧತೆಯನ್ನು ಪ್ರತಿನಿಧಿಸುತ್ತದೆ’ ಎಂದು ಹೇಳಿದರು.</p><p>ಮುಖ್ಯಮಂತ್ರಿ ಆದಿತ್ಯನಾಥ ಅವರು, ‘ಇದು ಉತ್ತರ ಪ್ರದೇಶಕ್ಕೆ ಹೆಮ್ಮೆಯ ಕ್ಷಣವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಮೇಕ್ ಇನ್ ಇಂಡಿಯಾ ಪರಿಕಲ್ಪನೆಯು ಈ ಸಾಧನೆಯ ಹಿಂದಿದೆ’ ಎಂದರು.</p><p> <strong>ಪ್ರಮುಖ ಅಂಶಗಳು</strong></p><p> * ಮೊದಲ ಬ್ಯಾಚ್ನ ಬ್ರಹ್ಮೋಸ್ ಕ್ಷಿಪಣಿಗಳಿಗೆ ಹಸಿರು ನಿಶಾನೆ ತೋರಿದ ರಕ್ಷಣಾ ಸಚಿವ </p><p>* ಬ್ರಹ್ಮೋಸ್ ಏರೋಸ್ಪೇಸ್ನ ಅತ್ಯಾಧುನಿಕ ಘಟಕದಲ್ಲಿ ತಯಾರಾದ ಕ್ಷಿಪಣಿ</p><p> * ಉತ್ತರ ಪ್ರದೇಶದ ಸರೋಜಿನಿ ನಗರದಲ್ಲಿ ಇದೇ ವರ್ಷ ಮೇ 11ರಂದು ಕಾರ್ಯಾರಂಭ ಮಾಡಿರುವ ಘಟಕ</p> .<div><blockquote> ಬ್ರಹ್ಮೋಸ್ ಕೇವಲ ಕ್ಷಿಪಣಿಯಲ್ಲ. ಇದು ಭಾರತದ ಹೆಚ್ಚುತ್ತಿರುವ ಶಕ್ತಿಯ ಸಂಕೇತ. ಭೂಸೇನೆ ನೌಕಾಪಡೆ ಮತ್ತು ವಾಯುಪಡೆಯ ಪ್ರಮುಖ ಆಧಾರಸ್ತಂಭವಾಗಿದೆ </blockquote><span class="attribution">ರಾಜನಾಥ ಸಿಂಗ್ ರಕ್ಷಣಾ ಸಚಿವ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>