<p><strong>ನವದೆಹಲಿ</strong>: ಆರೋಪಿಗೆ ಮಂಜೂರಾಗಿರುವ ಜಾಮೀನು ರದ್ದುಗೊಳಿಸುವುದಕ್ಕೆ ಷರತ್ತುಗಳ ಉಲ್ಲಂಘನೆಯು ಆಧಾರವಾಗಬಹುದು. ಆದರೆ, ಮುನ್ನೆಚ್ಚರಿಕೆ ಕ್ರಮವಾಗಿ ಆರೋಪಿಯನ್ನು ಬಂಧಿಸುವುದಕ್ಕೆ ಇದು ಆಧಾರ ಆಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.</p>.<p>ಯಾವುದೇ ಆರೋಪಿಯನ್ನು ಮುನ್ನೆಚ್ಚರಿಕೆ ಕ್ರಮವಾಗಿ ಬಂಧಿಸುವ ಕುರಿತ ಅವಕಾಶವು ಸರ್ಕಾರದ ಕೈಯಲ್ಲಿನ ಅಸಾಧಾರಣ ಅಧಿಕಾರ. ಈ ಅಧಿಕಾರವನ್ನು ಅಪರೂಪದ ಸಂದರ್ಭಗಳಲ್ಲಿ ಮಾತ್ರ ಬಳಸಬೇಕು ಎಂದು ಹೇಳಿದೆ.</p>.<p>ನ್ಯಾಯಮೂರ್ತಿಗಳಾದ ಸಂಜಯ್ ಕರೋಲ್ ಹಾಗೂ ಮನಮೋಹನ್ ಅವರಿದ್ದ ನ್ಯಾಯಪೀಠ, ಈ ಕುರಿತ ಅರ್ಜಿ ವಿಚಾರಣೆ ನಡೆಸಿತು.</p>.<p>ರಾಜೇಶ್ ಅವರನ್ನು, ಕೇರಳ ಸಮಾಜ ವಿರೋಧಿ ಚಟುವಟಿಕೆಗಳ ತಡೆ ಕಾಯ್ದೆ,2007ರ ಸೆಕ್ಷನ್3ರ ಅಡಿ ಮುನ್ನೆಚ್ಚರಿಕೆ ಕ್ರಮವಾಗಿ ಬಂಧಿಸಲಾಗಿತ್ತು. ಈ ಕ್ರಮವನ್ನು ಎತ್ತಿ ಹಿಡಿದು ಕೇರಳ ಹೈಕೋರ್ಟ್ ಕಳೆದ ವರ್ಷ ಸೆಪ್ಟೆಂಬರ್ 4ರಂದು ಆದೇಶಿಸಿತ್ತು. ಹೈಕೋರ್ಟ್ನ ಈ ಆದೇಶ ಪ್ರಶ್ನಿಸಿ ರಾಜೇಶ್ ಅವರ ಪತ್ನಿ ಧನ್ಯಾ ಎಂ. ಮೇಲ್ಮನವಿ ಸಲ್ಲಿಸಿದ್ದಾರೆ.</p>.<p>‘ಅಪರಾಧ ಕೃತ್ಯಗಳು ಸಂಭವಿಸಬಹುದು ಎಂಬ ನಿರೀಕ್ಷೆಯಿಂದ ಯಾವುದೇ ವ್ಯಕ್ತಿಯನ್ನು ಮುನ್ನೆಚ್ಚರಿಕೆ ಕ್ರಮವಾಗಿ ಬಂಧಿಸಿದಲ್ಲಿ ಅದು ಆತನ ಸ್ವಾತಂತ್ರ್ಯವನ್ನು ಮೊಟಕುಗೊಳಿಸಿದಂತಾಗುವುದು. ಕಾನೂನಿನಲ್ಲಿನ ಈ ಅವಕಾಶವನ್ನು ಸಾಮಾನ್ಯ ಸಂದರ್ಭಗಳಲ್ಲಿ ಬಳಕೆ ಮಾಡಬಾರದು’ ಎಂದು ಪೀಠವು, ಜೂನ್ 6ರಂದು ಪ್ರಕಟಿಸಿರುವ 12 ಪುಟಗಳ ತೀರ್ಪಿನಲ್ಲಿ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಆರೋಪಿಗೆ ಮಂಜೂರಾಗಿರುವ ಜಾಮೀನು ರದ್ದುಗೊಳಿಸುವುದಕ್ಕೆ ಷರತ್ತುಗಳ ಉಲ್ಲಂಘನೆಯು ಆಧಾರವಾಗಬಹುದು. ಆದರೆ, ಮುನ್ನೆಚ್ಚರಿಕೆ ಕ್ರಮವಾಗಿ ಆರೋಪಿಯನ್ನು ಬಂಧಿಸುವುದಕ್ಕೆ ಇದು ಆಧಾರ ಆಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.</p>.<p>ಯಾವುದೇ ಆರೋಪಿಯನ್ನು ಮುನ್ನೆಚ್ಚರಿಕೆ ಕ್ರಮವಾಗಿ ಬಂಧಿಸುವ ಕುರಿತ ಅವಕಾಶವು ಸರ್ಕಾರದ ಕೈಯಲ್ಲಿನ ಅಸಾಧಾರಣ ಅಧಿಕಾರ. ಈ ಅಧಿಕಾರವನ್ನು ಅಪರೂಪದ ಸಂದರ್ಭಗಳಲ್ಲಿ ಮಾತ್ರ ಬಳಸಬೇಕು ಎಂದು ಹೇಳಿದೆ.</p>.<p>ನ್ಯಾಯಮೂರ್ತಿಗಳಾದ ಸಂಜಯ್ ಕರೋಲ್ ಹಾಗೂ ಮನಮೋಹನ್ ಅವರಿದ್ದ ನ್ಯಾಯಪೀಠ, ಈ ಕುರಿತ ಅರ್ಜಿ ವಿಚಾರಣೆ ನಡೆಸಿತು.</p>.<p>ರಾಜೇಶ್ ಅವರನ್ನು, ಕೇರಳ ಸಮಾಜ ವಿರೋಧಿ ಚಟುವಟಿಕೆಗಳ ತಡೆ ಕಾಯ್ದೆ,2007ರ ಸೆಕ್ಷನ್3ರ ಅಡಿ ಮುನ್ನೆಚ್ಚರಿಕೆ ಕ್ರಮವಾಗಿ ಬಂಧಿಸಲಾಗಿತ್ತು. ಈ ಕ್ರಮವನ್ನು ಎತ್ತಿ ಹಿಡಿದು ಕೇರಳ ಹೈಕೋರ್ಟ್ ಕಳೆದ ವರ್ಷ ಸೆಪ್ಟೆಂಬರ್ 4ರಂದು ಆದೇಶಿಸಿತ್ತು. ಹೈಕೋರ್ಟ್ನ ಈ ಆದೇಶ ಪ್ರಶ್ನಿಸಿ ರಾಜೇಶ್ ಅವರ ಪತ್ನಿ ಧನ್ಯಾ ಎಂ. ಮೇಲ್ಮನವಿ ಸಲ್ಲಿಸಿದ್ದಾರೆ.</p>.<p>‘ಅಪರಾಧ ಕೃತ್ಯಗಳು ಸಂಭವಿಸಬಹುದು ಎಂಬ ನಿರೀಕ್ಷೆಯಿಂದ ಯಾವುದೇ ವ್ಯಕ್ತಿಯನ್ನು ಮುನ್ನೆಚ್ಚರಿಕೆ ಕ್ರಮವಾಗಿ ಬಂಧಿಸಿದಲ್ಲಿ ಅದು ಆತನ ಸ್ವಾತಂತ್ರ್ಯವನ್ನು ಮೊಟಕುಗೊಳಿಸಿದಂತಾಗುವುದು. ಕಾನೂನಿನಲ್ಲಿನ ಈ ಅವಕಾಶವನ್ನು ಸಾಮಾನ್ಯ ಸಂದರ್ಭಗಳಲ್ಲಿ ಬಳಕೆ ಮಾಡಬಾರದು’ ಎಂದು ಪೀಠವು, ಜೂನ್ 6ರಂದು ಪ್ರಕಟಿಸಿರುವ 12 ಪುಟಗಳ ತೀರ್ಪಿನಲ್ಲಿ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>