<p><strong>ಜೈಪುರ</strong>: ಭೂ ಪರಿವರ್ತನೆ ಪ್ರಕರಣಕ್ಕೆ ಸಂಬಂಧಿಸಿ ಹಣದ ಬೇಡಿಕೆಯಿಟ್ಟ ದೂದೂ ಜಿಲ್ಲೆಯ ಜಿಲ್ಲಾಧಿಕಾರಿ ಮತ್ತು ಗ್ರಾಮ ಮಟ್ಟದ ಕಂದಾಯ ಅಧಿಕಾರಿಯ ನಿವಾಸಗಳ ಮೇಲೆ ರಾಜಸ್ಥಾನ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ದಾಳಿ ನಡೆಸಿದೆ.</p>.<p>‘ಭೂ ಪರಿವರ್ತನೆ ಪ್ರಕರಣಕ್ಕೆ ಸಂಬಂಧಿಸಿ ಕ್ರಮ ಕೈಗೊಳ್ಳದೆ ಇರಲು ಜಿಲ್ಲಾಧಿಕಾರಿ ಹನುಮಾನ್ ಮಲ್ ಢಾಕ ಮತ್ತು ಅಧಿಕಾರಿ ಪಟ್ವಾರಿ ಹಂಸರಾಜ್ ₹25 ಲಕ್ಷ ಬೇಡಿಕೆ ಇಟ್ಟಿದ್ದರು’ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.</p>.<p>‘ಈ ಬಗ್ಗೆ ದೂರು ದಾಖಲಾದ ಹಿನ್ನೆಲೆ ಶುಕ್ರವಾರ ಬೆಳಿಗ್ಗೆ ದಾಳಿ ನಡೆಸಿ ತಡರಾತ್ರಿಯವರೆಗೆ ಶೋಧಕಾರ್ಯ ನಡೆಸಲಾಯಿತು’ ಎಂದು ಮಾಹಿತಿ ನೀಡಿದ್ದಾರೆ.</p>.<p>‘ದೂರುದಾರನು, ತನ್ನ ಬಳಿ ₹25 ಲಕ್ಷ ಹಣವಿಲ್ಲವೆಂದು ಹೇಳಿದಾಗ, ₹15 ಲಕ್ಷ ಕೊಡುವಂತೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಎಸಿಬಿಯಲ್ಲಿ ದೂರು ದಾಖಲಾದ ಬಳಿಕ ದೂರುದಾರರಿಗೆ ರೆಕಾರ್ಡರ್ ಅಳವಡಿಸಿ ಜಿಲ್ಲಾಧಿಕಾರಿಯ ಮನೆಗೆ ಕಳುಹಿಸಲಾಗಿತ್ತು. ಈ ವೇಳೆ ಅವರು ₹7.5 ಲಕ್ಷ ಹಣ ಕೇಳಿರುವುದು ಖಚಿತವಾಗಿದೆ’ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜೈಪುರ</strong>: ಭೂ ಪರಿವರ್ತನೆ ಪ್ರಕರಣಕ್ಕೆ ಸಂಬಂಧಿಸಿ ಹಣದ ಬೇಡಿಕೆಯಿಟ್ಟ ದೂದೂ ಜಿಲ್ಲೆಯ ಜಿಲ್ಲಾಧಿಕಾರಿ ಮತ್ತು ಗ್ರಾಮ ಮಟ್ಟದ ಕಂದಾಯ ಅಧಿಕಾರಿಯ ನಿವಾಸಗಳ ಮೇಲೆ ರಾಜಸ್ಥಾನ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ದಾಳಿ ನಡೆಸಿದೆ.</p>.<p>‘ಭೂ ಪರಿವರ್ತನೆ ಪ್ರಕರಣಕ್ಕೆ ಸಂಬಂಧಿಸಿ ಕ್ರಮ ಕೈಗೊಳ್ಳದೆ ಇರಲು ಜಿಲ್ಲಾಧಿಕಾರಿ ಹನುಮಾನ್ ಮಲ್ ಢಾಕ ಮತ್ತು ಅಧಿಕಾರಿ ಪಟ್ವಾರಿ ಹಂಸರಾಜ್ ₹25 ಲಕ್ಷ ಬೇಡಿಕೆ ಇಟ್ಟಿದ್ದರು’ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.</p>.<p>‘ಈ ಬಗ್ಗೆ ದೂರು ದಾಖಲಾದ ಹಿನ್ನೆಲೆ ಶುಕ್ರವಾರ ಬೆಳಿಗ್ಗೆ ದಾಳಿ ನಡೆಸಿ ತಡರಾತ್ರಿಯವರೆಗೆ ಶೋಧಕಾರ್ಯ ನಡೆಸಲಾಯಿತು’ ಎಂದು ಮಾಹಿತಿ ನೀಡಿದ್ದಾರೆ.</p>.<p>‘ದೂರುದಾರನು, ತನ್ನ ಬಳಿ ₹25 ಲಕ್ಷ ಹಣವಿಲ್ಲವೆಂದು ಹೇಳಿದಾಗ, ₹15 ಲಕ್ಷ ಕೊಡುವಂತೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಎಸಿಬಿಯಲ್ಲಿ ದೂರು ದಾಖಲಾದ ಬಳಿಕ ದೂರುದಾರರಿಗೆ ರೆಕಾರ್ಡರ್ ಅಳವಡಿಸಿ ಜಿಲ್ಲಾಧಿಕಾರಿಯ ಮನೆಗೆ ಕಳುಹಿಸಲಾಗಿತ್ತು. ಈ ವೇಳೆ ಅವರು ₹7.5 ಲಕ್ಷ ಹಣ ಕೇಳಿರುವುದು ಖಚಿತವಾಗಿದೆ’ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>