<p><strong>ಶ್ರೀನಗರ:</strong>ಪಕ್ಷದ ಪರ ವರದಿ ಮಾಡಲು ಲಡಾಖ್ನ ಲೇಹ್ನಲ್ಲಿ ಪತ್ರಕರ್ತರಿಗೆ ಬಿಜೆಪಿ ಲಂಚ ನೀಡಿದ್ದ ಆರೋಪ ಪ್ರಾಥಮಿಕ ತನಿಖೆಯಿಂದ ದೃಢಪಟ್ಟಿದೆ.</p>.<p>ಲೋಕಸಭೆ ಚುನಾವಣೆಯ ಐದನೇ ಹಂತದಲ್ಲಿ ಲಡಾಖ್ ಕ್ಷೇತ್ರಕ್ಕೆ ಮತದಾನ ನಡೆದಿತ್ತು. ಆ ಸಂದರ್ಭ, ಬಿಜೆಪಿ ಲಂಚ ನೀಡಿತ್ತು ಎಂಬ ಆರೋಪ ಕೇಳಿಬಂದಿತ್ತು. ಈ ಕುರಿತು ತನಿಖೆ ನಡೆಸುವಂತೆ ಜಿಲ್ಲಾ ಚುನಾವಣಾಧಿಕಾರಿ ಅವನಿ ಲವಾಸ ಆದೇಶಿಸಿದ್ದರು.</p>.<p>‘ಲಂಚ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಎಫ್ಐಆರ್ ದಾಖಲಿಸಲು ಪೊಲೀಸರ ಮೂಲಕ ನ್ಯಾಯಾಲಯಕ್ಕೆ ಮಂಗಳವಾರ ಮನವಿ ಮಾಡಿದ್ದೇವೆ. ಈವರೆಗೆ ನ್ಯಾಯಾಲಯದಿಂದ ಯಾವುದೇ ಆದೇಶ ಬಂದಿಲ್ಲ’ ಎಂದುಅವನಿ ತಿಳಿಸಿದ್ದಾರೆ.</p>.<p>ಮೇ 2ರಂದು ನಡೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿಯ ಜಮ್ಮು ಮತ್ತು ಕಾಶ್ಮೀರ ಘಟಕದ ಅಧ್ಯಕ್ಷ ರವೀಂದರ್ ರೈನಾ ಸೇರಿದಂತೆ ಪಕ್ಷದ ಹಿರಿಯ ನಾಯಕರು ಪತ್ರಕರ್ತರಿಗೆ ಲಂಚ ನೀಡಿದ್ದಾರೆ ಎಂದು ಲೇಹ್ ಪ್ರೆಸ್ಕ್ಲಬ್ ಸಹ ಜಿಲ್ಲಾ ಚುನಾವಣಾಧಿಕಾರಿ ಅವನಿ ಅವರಿಗೆ ದೂರು ನೀಡಿತ್ತು.</p>.<p>ಜಮ್ಮು ಮತ್ತು ಕಾಶ್ಮೀರದ 2013ನೇ ಬ್ಯಾಚ್ನ ಐಎಎಸ್ ಅಧಿಕಾರಿಯಾಗಿರುವ ಅವನಿ ಅವರುಚುನಾವಣಾ ಆಯುಕ್ತ ಅಶೋಕ್ ಲವಾಸ ಅವರ ಮಗಳು.</p>.<p>ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿದ ನಾಲ್ಕು ಪ್ರಕರಣಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಮತ್ತು ಒಂದು ಪ್ರಕರಣದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾಗೆ ಕ್ಲೀನ್ಚಿಟ್ ನೀಡುವುದನ್ನು ಚುನಾವಣಾ ಆಯುಕ್ತ ಅಶೋಕ್ ಲವಾಸ ವಿರೋಧಿಸಿದ್ದರು ಎಂದು ಇತ್ತೀಚೆಗೆ ವರದಿಯಾಗಿತ್ತು.</p>.<p><strong>ಇದನ್ನೂ ಓದಿ:<a href="https://www.prajavani.net/stories/national/election-commissioner-lavasa-634470.html" target="_blank">ಪ್ರಧಾನಿ ಮೋದಿ, ಅಮಿತ್ ಶಾಗೆ ಕ್ಲೀನ್ಚಿಟ್ ವಿರೋಧಿಸಿದ್ದ ಚುನಾವಣಾ ಆಯುಕ್ತ ಲವಾಸ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಗರ:</strong>ಪಕ್ಷದ ಪರ ವರದಿ ಮಾಡಲು ಲಡಾಖ್ನ ಲೇಹ್ನಲ್ಲಿ ಪತ್ರಕರ್ತರಿಗೆ ಬಿಜೆಪಿ ಲಂಚ ನೀಡಿದ್ದ ಆರೋಪ ಪ್ರಾಥಮಿಕ ತನಿಖೆಯಿಂದ ದೃಢಪಟ್ಟಿದೆ.</p>.<p>ಲೋಕಸಭೆ ಚುನಾವಣೆಯ ಐದನೇ ಹಂತದಲ್ಲಿ ಲಡಾಖ್ ಕ್ಷೇತ್ರಕ್ಕೆ ಮತದಾನ ನಡೆದಿತ್ತು. ಆ ಸಂದರ್ಭ, ಬಿಜೆಪಿ ಲಂಚ ನೀಡಿತ್ತು ಎಂಬ ಆರೋಪ ಕೇಳಿಬಂದಿತ್ತು. ಈ ಕುರಿತು ತನಿಖೆ ನಡೆಸುವಂತೆ ಜಿಲ್ಲಾ ಚುನಾವಣಾಧಿಕಾರಿ ಅವನಿ ಲವಾಸ ಆದೇಶಿಸಿದ್ದರು.</p>.<p>‘ಲಂಚ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಎಫ್ಐಆರ್ ದಾಖಲಿಸಲು ಪೊಲೀಸರ ಮೂಲಕ ನ್ಯಾಯಾಲಯಕ್ಕೆ ಮಂಗಳವಾರ ಮನವಿ ಮಾಡಿದ್ದೇವೆ. ಈವರೆಗೆ ನ್ಯಾಯಾಲಯದಿಂದ ಯಾವುದೇ ಆದೇಶ ಬಂದಿಲ್ಲ’ ಎಂದುಅವನಿ ತಿಳಿಸಿದ್ದಾರೆ.</p>.<p>ಮೇ 2ರಂದು ನಡೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿಯ ಜಮ್ಮು ಮತ್ತು ಕಾಶ್ಮೀರ ಘಟಕದ ಅಧ್ಯಕ್ಷ ರವೀಂದರ್ ರೈನಾ ಸೇರಿದಂತೆ ಪಕ್ಷದ ಹಿರಿಯ ನಾಯಕರು ಪತ್ರಕರ್ತರಿಗೆ ಲಂಚ ನೀಡಿದ್ದಾರೆ ಎಂದು ಲೇಹ್ ಪ್ರೆಸ್ಕ್ಲಬ್ ಸಹ ಜಿಲ್ಲಾ ಚುನಾವಣಾಧಿಕಾರಿ ಅವನಿ ಅವರಿಗೆ ದೂರು ನೀಡಿತ್ತು.</p>.<p>ಜಮ್ಮು ಮತ್ತು ಕಾಶ್ಮೀರದ 2013ನೇ ಬ್ಯಾಚ್ನ ಐಎಎಸ್ ಅಧಿಕಾರಿಯಾಗಿರುವ ಅವನಿ ಅವರುಚುನಾವಣಾ ಆಯುಕ್ತ ಅಶೋಕ್ ಲವಾಸ ಅವರ ಮಗಳು.</p>.<p>ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿದ ನಾಲ್ಕು ಪ್ರಕರಣಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಮತ್ತು ಒಂದು ಪ್ರಕರಣದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾಗೆ ಕ್ಲೀನ್ಚಿಟ್ ನೀಡುವುದನ್ನು ಚುನಾವಣಾ ಆಯುಕ್ತ ಅಶೋಕ್ ಲವಾಸ ವಿರೋಧಿಸಿದ್ದರು ಎಂದು ಇತ್ತೀಚೆಗೆ ವರದಿಯಾಗಿತ್ತು.</p>.<p><strong>ಇದನ್ನೂ ಓದಿ:<a href="https://www.prajavani.net/stories/national/election-commissioner-lavasa-634470.html" target="_blank">ಪ್ರಧಾನಿ ಮೋದಿ, ಅಮಿತ್ ಶಾಗೆ ಕ್ಲೀನ್ಚಿಟ್ ವಿರೋಧಿಸಿದ್ದ ಚುನಾವಣಾ ಆಯುಕ್ತ ಲವಾಸ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>