<p><strong>ಹಾಜಿಪುರ್:</strong> ಚುನಾವಣಾ ಕಾರ್ಯತಂತ್ರ ನಿಪುಣ ಪ್ರಶಾಂತ್ ಕಿಶೋರ್ (ಪಿಕೆ) ಅವರ 'ಜನ ಸುರಾಜ್ ಪಕ್ಷ' ಸೇರಿರುವುದಾಗಿ ಬಿಹಾರದ ಮಾಜಿ ಸಚಿವ ಬ್ರಿಷಿನ್ ಪಟೇಲ್ ಭಾನುವಾರ ತಿಳಿಸಿದ್ದಾರೆ.</p><p>'ಪಿಕೆ' ಅವರನ್ನು ಶನಿವಾರ ಭೇಟಿಯಾಗಿ, ಪಕ್ಷದ ಸದಸ್ಯತ್ವ ಪಡೆದಿದ್ದ ಪಟೇಲ್, ತಮ್ಮ ತವರು ಜಿಲ್ಲೆ ವೈಶಾಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ್ದಾರೆ.</p><p>ಈ ಹಿಂದೆ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಆಪ್ತರಾಗಿದ್ದ ಪಟೇಲ್, ವೈಶಾಲಿ ವಿಧಾನಸಭೆ ಕ್ಷೇತ್ರವನ್ನು ಹಲವು ಸಲ ಪ್ರತಿನಿಧಿಸಿದ್ದಾರೆ. ಒಂದು ಬಾರಿ ಸಿವಾನ್ನಿಂದ ಲೋಕಸಭೆ ಪ್ರವೇಶಿಸಿದ್ದರು.</p><p>ಸ್ವಾತಂತ್ರ್ಯ ಹೋರಾಟದ ಹಿನ್ನೆಲೆಯುಳ್ಳ ಕುಟುಂಬದವರಾಗಿರುವ ಅವರು, ರಾಜ್ಯದಲ್ಲಿ ನಿತೀಶ್ ಕುಮಾರ್ ಅವರ ನಂತರ ಕುರ್ಮಿ ಸಮುದಾಯದ ಪ್ರಬಲ ನಾಯಕರಲ್ಲಿ ಒಬ್ಬರೆನಿಸಿದ್ದಾರೆ.</p><p>2005ರಲ್ಲಿ ನಿತೀಶ್ ಕುಮಾರ್ ಮುಖ್ಯಮಂತ್ರಿಯಾದಾಗ, ಜೆಡಿ(ಯು) ಪಕ್ಷದಲ್ಲಿದ್ದ ಪಟೇಲ್ ಸಚಿವ ಸಂಪುಟದಲ್ಲಿ ಸ್ಥಾನ ಪಡೆದಿದ್ದರು.</p><p>2015ರಲ್ಲಿ ನಿತೀಶ್ ಜೊತೆಗಿನ ಸಂಬಂಧ ಕಡಿದುಕೊಂಡು, ಮಾಜಿ ಸಿಎಂ ಜೀತನ್ ರಾಮ್ ಮಾಂಝಿ ಅವರ ಹಿಂದುಸ್ಥಾನಿ ಅವಾಮ್ ಮೋರ್ಚಾ (ಎಚ್ಎಎಂ) ಸೇರಿದ್ದರು.</p><p>ಆದರೆ, 2020ರ ವಿಧಾನಸಭೆ ಚುನಾವಣೆ ಹೊತ್ತಲ್ಲಿ ನಿತೀಶ್ ಹಾಗೂ ಮಾಂಝಿ ಅವರ ಪಕ್ಷಗಳು ಮೈತ್ರಿ ಮಾಡಿಕೊಂಡಿದ್ದವು. ಹೀಗಾಗಿ ಎನ್ಡಿಎ ಮೈತ್ರಿಕೂಟ ತೊರೆದಿದ್ದ ಪಟೇಲ್, ಲಾಲು ಪ್ರಸಾದ್ ಅವರ ಆರ್ಜೆಡಿ ಸೇರಿದ್ದರು. ಇದೀಗ ಆರ್ಜೆಡಿಗೂ ಗುಡ್ಬೈ ಹೇಳಿದ್ದಾರೆ.</p><p>243 ಸದಸ್ಯ ಬಲದ ಬಿಹಾರ ವಿಧಾನಸಭೆಗೆ ಈ ವರ್ಷಾಂತ್ಯದಲ್ಲಿ ಚುನಾವಣೆ ನಡೆಯಲಿದೆ.</p>.ಆಂಧ್ರಪ್ರದೇಶ: ಅನಕಪಲ್ಲಿ ಜಿಲ್ಲೆಯ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ– ಎಂಟು ಜನರ ಸಾವು.‘ಈಗಲೇ ದೇಶ ಬಿಡಿ’: ವಿದೇಶಿಗರಿಗೆ ಟ್ರಂಪ್ ಆಡಳಿತದ ಹೊಸ ಎಚ್ಚರಿಕೆ ಹೀಗಿದೆ...ಸಿಂಗಪುರದಲ್ಲಿ ಅಗ್ನಿ ಅವಘಡ: ಮಗನ ಆರೋಗ್ಯ ಸ್ಥಿರವಾಗಿದೆ ಎಂದ ಪವನ್ ಕಲ್ಯಾಣ್.ಕರ್ನಾಟಕದ ಅತಿ ದೊಡ್ಡ ಸಮುದಾಯ ಮುಸ್ಲಿಂ ಎಂದು ಬಿಂಬಿಸಲು ಸಿದ್ದರಾಮಯ್ಯ ಯತ್ನ : BJP.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಜಿಪುರ್:</strong> ಚುನಾವಣಾ ಕಾರ್ಯತಂತ್ರ ನಿಪುಣ ಪ್ರಶಾಂತ್ ಕಿಶೋರ್ (ಪಿಕೆ) ಅವರ 'ಜನ ಸುರಾಜ್ ಪಕ್ಷ' ಸೇರಿರುವುದಾಗಿ ಬಿಹಾರದ ಮಾಜಿ ಸಚಿವ ಬ್ರಿಷಿನ್ ಪಟೇಲ್ ಭಾನುವಾರ ತಿಳಿಸಿದ್ದಾರೆ.</p><p>'ಪಿಕೆ' ಅವರನ್ನು ಶನಿವಾರ ಭೇಟಿಯಾಗಿ, ಪಕ್ಷದ ಸದಸ್ಯತ್ವ ಪಡೆದಿದ್ದ ಪಟೇಲ್, ತಮ್ಮ ತವರು ಜಿಲ್ಲೆ ವೈಶಾಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ್ದಾರೆ.</p><p>ಈ ಹಿಂದೆ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಆಪ್ತರಾಗಿದ್ದ ಪಟೇಲ್, ವೈಶಾಲಿ ವಿಧಾನಸಭೆ ಕ್ಷೇತ್ರವನ್ನು ಹಲವು ಸಲ ಪ್ರತಿನಿಧಿಸಿದ್ದಾರೆ. ಒಂದು ಬಾರಿ ಸಿವಾನ್ನಿಂದ ಲೋಕಸಭೆ ಪ್ರವೇಶಿಸಿದ್ದರು.</p><p>ಸ್ವಾತಂತ್ರ್ಯ ಹೋರಾಟದ ಹಿನ್ನೆಲೆಯುಳ್ಳ ಕುಟುಂಬದವರಾಗಿರುವ ಅವರು, ರಾಜ್ಯದಲ್ಲಿ ನಿತೀಶ್ ಕುಮಾರ್ ಅವರ ನಂತರ ಕುರ್ಮಿ ಸಮುದಾಯದ ಪ್ರಬಲ ನಾಯಕರಲ್ಲಿ ಒಬ್ಬರೆನಿಸಿದ್ದಾರೆ.</p><p>2005ರಲ್ಲಿ ನಿತೀಶ್ ಕುಮಾರ್ ಮುಖ್ಯಮಂತ್ರಿಯಾದಾಗ, ಜೆಡಿ(ಯು) ಪಕ್ಷದಲ್ಲಿದ್ದ ಪಟೇಲ್ ಸಚಿವ ಸಂಪುಟದಲ್ಲಿ ಸ್ಥಾನ ಪಡೆದಿದ್ದರು.</p><p>2015ರಲ್ಲಿ ನಿತೀಶ್ ಜೊತೆಗಿನ ಸಂಬಂಧ ಕಡಿದುಕೊಂಡು, ಮಾಜಿ ಸಿಎಂ ಜೀತನ್ ರಾಮ್ ಮಾಂಝಿ ಅವರ ಹಿಂದುಸ್ಥಾನಿ ಅವಾಮ್ ಮೋರ್ಚಾ (ಎಚ್ಎಎಂ) ಸೇರಿದ್ದರು.</p><p>ಆದರೆ, 2020ರ ವಿಧಾನಸಭೆ ಚುನಾವಣೆ ಹೊತ್ತಲ್ಲಿ ನಿತೀಶ್ ಹಾಗೂ ಮಾಂಝಿ ಅವರ ಪಕ್ಷಗಳು ಮೈತ್ರಿ ಮಾಡಿಕೊಂಡಿದ್ದವು. ಹೀಗಾಗಿ ಎನ್ಡಿಎ ಮೈತ್ರಿಕೂಟ ತೊರೆದಿದ್ದ ಪಟೇಲ್, ಲಾಲು ಪ್ರಸಾದ್ ಅವರ ಆರ್ಜೆಡಿ ಸೇರಿದ್ದರು. ಇದೀಗ ಆರ್ಜೆಡಿಗೂ ಗುಡ್ಬೈ ಹೇಳಿದ್ದಾರೆ.</p><p>243 ಸದಸ್ಯ ಬಲದ ಬಿಹಾರ ವಿಧಾನಸಭೆಗೆ ಈ ವರ್ಷಾಂತ್ಯದಲ್ಲಿ ಚುನಾವಣೆ ನಡೆಯಲಿದೆ.</p>.ಆಂಧ್ರಪ್ರದೇಶ: ಅನಕಪಲ್ಲಿ ಜಿಲ್ಲೆಯ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ– ಎಂಟು ಜನರ ಸಾವು.‘ಈಗಲೇ ದೇಶ ಬಿಡಿ’: ವಿದೇಶಿಗರಿಗೆ ಟ್ರಂಪ್ ಆಡಳಿತದ ಹೊಸ ಎಚ್ಚರಿಕೆ ಹೀಗಿದೆ...ಸಿಂಗಪುರದಲ್ಲಿ ಅಗ್ನಿ ಅವಘಡ: ಮಗನ ಆರೋಗ್ಯ ಸ್ಥಿರವಾಗಿದೆ ಎಂದ ಪವನ್ ಕಲ್ಯಾಣ್.ಕರ್ನಾಟಕದ ಅತಿ ದೊಡ್ಡ ಸಮುದಾಯ ಮುಸ್ಲಿಂ ಎಂದು ಬಿಂಬಿಸಲು ಸಿದ್ದರಾಮಯ್ಯ ಯತ್ನ : BJP.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>