<p><strong>ತಿರುವನಂತಪುರ:</strong> ಇಂಧನ ಖಾಲಿಯಾದ ಕಾರಣಕ್ಕೆ ಬ್ರಿಟನ್ ನೌಕಾಪಡೆಯ ಎಫ್-35 ಯುದ್ಧ ವಿಮಾನವು ಶನಿವಾರ ತಡರಾತ್ರಿ ಕೇರಳದ ತಿರುವನಂತಪುರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. </p><p>5ನೇ ತಲೆಮಾರಿನ ಸ್ಟೆಲ್ತ್ ಫೈಟರ್ ಬ್ರಿಟನ್ನ HMS ಪ್ರಿನ್ಸ್ ಆಫ್ ವೇಲ್ಸ್ ಕ್ಯಾರಿಯರ್ ಸ್ಟ್ರೈಕ್ ಗ್ರೂಪ್ನ ಭಾಗವಾಗಿದೆ. ಈ ಯುದ್ಧ ವಿಮಾನವು ಪ್ರಸ್ತುತ ಇಂಡೋ-ಪೆಸಿಫಿಕ್ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿದೆ. ಇತ್ತೀಚೆಗೆ ಭಾರತೀಯ ನೌಕಾಪಡೆಯೊಂದಿಗೆ ಜಂಟಿ ಸಮರಾಭ್ಯಾಸ ನಡೆಸಿತ್ತು ಎಂದು ಎನ್ಡಿಟಿವಿ ವರದಿ ಮಾಡಿದೆ.</p><p>ಸುಗಮ ಮತ್ತು ಸುರಕ್ಷಿತ ಭೂಸ್ಪರ್ಶವನ್ನು ಖಚಿತಪಡಿಸಿಕೊಳ್ಳಲು ವಿಮಾನ ನಿಲ್ದಾಣದ ಅಧಿಕಾರಿಗಳು ತುರ್ತು ಪರಿಸ್ಥಿತಿ ಘೋಷಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.</p><p>ವಿಮಾನದಲ್ಲಿ ಇಂಧನ ಕಡಿಮೆಯಾಗಿರುವ ಬಗ್ಗೆ ಪೈಲಟ್ ಗಮನಕ್ಕೆ ತಂದಿದ್ದರು. ಕೂಡಲೇ ವಿಮಾನದ ಸುರಕ್ಷಿತ ಲ್ಯಾಡಿಂಗ್ಗೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. </p><p>ಕೇಂದ್ರ ಸರ್ಕಾರದ ಅನುಮೋದನೆ ಪಡೆದ ನಂತರ ಇಂಧನ ತುಂಬಿಸಲಾಗುವುದು ಎಂದು ತಿರುವನಂತಪುರ ವಿಮಾನ ನಿಲ್ದಾಣದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ:</strong> ಇಂಧನ ಖಾಲಿಯಾದ ಕಾರಣಕ್ಕೆ ಬ್ರಿಟನ್ ನೌಕಾಪಡೆಯ ಎಫ್-35 ಯುದ್ಧ ವಿಮಾನವು ಶನಿವಾರ ತಡರಾತ್ರಿ ಕೇರಳದ ತಿರುವನಂತಪುರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. </p><p>5ನೇ ತಲೆಮಾರಿನ ಸ್ಟೆಲ್ತ್ ಫೈಟರ್ ಬ್ರಿಟನ್ನ HMS ಪ್ರಿನ್ಸ್ ಆಫ್ ವೇಲ್ಸ್ ಕ್ಯಾರಿಯರ್ ಸ್ಟ್ರೈಕ್ ಗ್ರೂಪ್ನ ಭಾಗವಾಗಿದೆ. ಈ ಯುದ್ಧ ವಿಮಾನವು ಪ್ರಸ್ತುತ ಇಂಡೋ-ಪೆಸಿಫಿಕ್ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿದೆ. ಇತ್ತೀಚೆಗೆ ಭಾರತೀಯ ನೌಕಾಪಡೆಯೊಂದಿಗೆ ಜಂಟಿ ಸಮರಾಭ್ಯಾಸ ನಡೆಸಿತ್ತು ಎಂದು ಎನ್ಡಿಟಿವಿ ವರದಿ ಮಾಡಿದೆ.</p><p>ಸುಗಮ ಮತ್ತು ಸುರಕ್ಷಿತ ಭೂಸ್ಪರ್ಶವನ್ನು ಖಚಿತಪಡಿಸಿಕೊಳ್ಳಲು ವಿಮಾನ ನಿಲ್ದಾಣದ ಅಧಿಕಾರಿಗಳು ತುರ್ತು ಪರಿಸ್ಥಿತಿ ಘೋಷಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.</p><p>ವಿಮಾನದಲ್ಲಿ ಇಂಧನ ಕಡಿಮೆಯಾಗಿರುವ ಬಗ್ಗೆ ಪೈಲಟ್ ಗಮನಕ್ಕೆ ತಂದಿದ್ದರು. ಕೂಡಲೇ ವಿಮಾನದ ಸುರಕ್ಷಿತ ಲ್ಯಾಡಿಂಗ್ಗೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. </p><p>ಕೇಂದ್ರ ಸರ್ಕಾರದ ಅನುಮೋದನೆ ಪಡೆದ ನಂತರ ಇಂಧನ ತುಂಬಿಸಲಾಗುವುದು ಎಂದು ತಿರುವನಂತಪುರ ವಿಮಾನ ನಿಲ್ದಾಣದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>