ತೆಲಂಗಾಣದಲ್ಲಿನ ಪ್ರಮುಖ ವಿರೋಧ ಪಕ್ಷ ಬಿಆರ್ಎಸ್, ಕಳೆದ ವಿಧಾನಸಭಾ ಚುನಾವಣೆಯಲ್ಲಿನ ಸೋಲಿನ ಬಳಿಕ ಅಸ್ತಿತ್ವ ಉಳಿಸಿಕೊಳ್ಳಲು ಹೆಣಗಾಡುತ್ತಿರುವಂತೆ ತೋರುತ್ತಿದೆ. ಬಿಆರ್ಎಸ್ನ ಅನೇಕ ನಾಯಕರು ಲೋಕಸಭೆ ಚುನಾವಣೆಗೆ ಮುನ್ನ ಪಕ್ಷ ತೊರೆದು ಆಡಳಿತಾರೂಢ ಕಾಂಗ್ರೆಸ್ ಅಥವಾ ಬಿಜೆಪಿ ಸೇರಲಾರಂಭಿಸಿದ್ದಾರೆ.
ಬಿಆರ್ಎಸ್ನ ಸಂಸದರು ಈಗಾಗಲೇ ಪಕ್ಷ ತೊರೆದಿರುವುದರಿಂದ, ಬಿಆರ್ಎಸ್ನ ಶಾಸಕರು ತಾವು ಸಹ ಕಾಂಗ್ರೆಸ್ ಅಥವಾ ಬಿಜೆಪಿ ಸೇರಬೇಕೆ ಎನ್ನುವ ನಿರ್ಧಾರದ ಆಯ್ಕೆಗೆ ಲೋಕಸಭೆ ಚುನಾವಣೆ ಮುಗಿಯುವುದನ್ನು ಎದುರು ನೋಡುತ್ತಿದ್ದಾರೆ. ಚುನಾವಣಾ ಫಲಿತಾಂಶ ಹಾಗೂ ಸ್ಥಳೀಯ ವಿಷಯಗಳ ಸಮೀಕರಣಗಳನ್ನು ಆಧರಿಸಿ ಮುಂದಿನ ಹೆಜ್ಜೆ ಇರಿಸುವ ಚಿಂತನೆಯಲ್ಲಿದ್ದಾರೆ.
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಆರ್ಎಸ್ ಟಿಕೆಟ್ನಿಂದ ಸ್ಪರ್ಧಿಸಲು ಹೆಚ್ಚಿನವರು ಉತ್ಸುಕರಾಗಿಲ್ಲ ಎಂಬುದು ಗಮನಾರ್ಹ. ಒಬ್ಬ ಹಾಲಿ ಸಂಸದ ಮತ್ತು ಇನ್ನೊಬ್ಬರು ನಾಯಕರು ಎರಡು ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸುವ ಪಕ್ಷದ ಪ್ರಸ್ತಾಪವನ್ನು ಕೆಲ ದಿನಗಳ ಹಿಂದೆ ತಿರಸ್ಕರಿಸಿದ್ದಾರೆ.