<p><strong>ಹೈದರಾಬಾದ್</strong>: ಜುಬಿಲಿ ಹಿಲ್ಸ್ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಸೋಲಿಸಲು ಬಿಜೆಪಿ ಮತ್ತು ಬಿಆರ್ಎಸ್ ಪಕ್ಷಗಳು ಒಂದಾಗಿವೆ ಎಂದು ತೆಲಂಗಾಣ ಮುಖ್ಯಮಂತ್ರಿ ರೇವಂತ ರೆಡ್ಡಿ ಬುಧವಾರ ಆರೋಪಿಸಿದ್ದಾರೆ.</p><p>ಕಾಂಗ್ರೆಸ್ ಅಭ್ಯರ್ಥಿ ನವೀನ್ ರೆಡ್ಡಿ ಪರ ಯುಸೂಫ್ಗಢದಲ್ಲಿ ನಡೆದ ಸಾರ್ವಜನಿಕ ಸಮಾವೇಶದಲ್ಲಿ ಮಾತನಾಡಿರುವ ಮುಖ್ಯಮಂತ್ರಿ, ಕೇಂದ್ರ ಸಚಿವ ಜಿ. ಕಿಶನ್ ರೆಡ್ಡಿ ಹಾಗೂ ಬಿಆರ್ಎಸ್ ಕಾರ್ಯಾಧ್ಯಕ್ಷ ಕೆ.ಟಿ. ರಾಮ ರಾವ್ (ಕೆಟಿಆರ್) ಅವರು ಒಂದೇ ನಾಣ್ಯದ ಎರಡು ಮುಖಗಳೆಂದು ಟೀಕಿಸಿದ್ದಾರೆ.</p><p>ರಾಜ್ಯದಲ್ಲಿ ಈ ಹಿಂದೆ ಬಿಆರ್ಎಸ್ ಅಧಿಕಾರದಲ್ಲಿದ್ದಾಗ ಪರಸ್ಪರ ಆರೋಪ ಪ್ರತ್ಯಾರೋಪದಲ್ಲಿ ತೊಡಗಿದ್ದ ಪಕ್ಷಗಳು (ಬಿಆರ್ಎಸ್, ಬಿಜೆಪಿ) ಇದೀಗ, ಕಾಂಗ್ರೆಸ್ ಅನ್ನು ಸೋಲಿಸಲು ಒಂದಾಗಿವೆ ಎಂದು ವ್ಯಂಗ್ಯವಾಡಿದ್ದಾರೆ.</p><p>ಬಿಆರ್ಎಸ್ ಸರ್ಕಾರದ ಅವಧಿಯಲ್ಲಿ ನಿರ್ಮಾಣಗೊಂಡ ಕಾಳೇಶ್ವರಂ ಯೋಜನೆಯನ್ನು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ವಿರೋಧಿಸಿದ್ದರು. ಯೋಜನೆಯು ಆಗಿನ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ (ಕೆಸಿಆರ್) ಅವರ ಪಾಲಿಗೆ ಎಟಿಎಂ ಇದ್ದಂತೆ ಎಂದು ಬಣ್ಣಿಸಿದ್ದರು. ಆ ಯೋಜನೆಯಲ್ಲಿ ನಡೆದಿದೆ ಎನ್ನಲಾದ ಹಗರಣಗಳ ಬಗ್ಗೆ ಸಿಬಿಐ ತನಿಖೆ ನಡೆಸಬೇಕು ಎಂದು ಕಿಶನ್ ರೆಡ್ಡಿ ಆಗ್ರಹಿಸಿದ್ದರು. ಕೆಸಿಆರ್ ಹಾಗೂ ಅವರ ಸಂಬಂಧಿ, ನೀರಾವರಿ ಸಚಿವ ಟಿ. ಹರೀಶ್ ರಾವ್ ಅವರನ್ನು ಬಂಧಿಸಬೇಕು ಎಂದು ಒತ್ತಾಯಿಸಿದ್ದರು ಎಂದು ನೆನಪಿಸಿದ್ದಾರೆ.</p><p>ಕಾಳೇಶ್ವರಂ ಯೋಜನೆಯ ಹಗರಣಗಳಿಗೆ ಸಂಬಂಧಿಸಿದಂತೆ ನಮ್ಮ ಸರ್ಕಾರ ಮೂರು ತಿಂಗಳ ಹಿಂದೆಯೇ ಸಿಬಿಐಗೆ ದೂರು ನೀಡಿದೆ. ಆದಾಗ್ಯೂ, ತನಿಖಾ ಸಂಸ್ಥೆ ಇನ್ನೂ ಎಫ್ಐಆರ್ ದಾಖಲಿಸಿಕೊಂಡಿಲ್ಲವೇಕೆ ಎಂದು ಪ್ರಶ್ನಿಸಿದ್ದಾರೆ.</p><p>'ಫಾರ್ಮುಲಾ ಇ ರೇಸ್' ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಟಿಆರ್ ಅವರನ್ನು ಬಂಧಿಸಲು ಎಸಿಬಿ ಸಲ್ಲಿಸಿರುವ ಮನವಿ ಕಳೆದೆರಡು ತಿಂಗಳಿನಿಂದ ರಾಜ್ಯಪಾಲರ ಬಳಿ ಬಾಕಿ ಉಳಿದಿದೆ ಎಂದು ಉಲ್ಲೇಖಿಸಿರುವ ಸಿಎಂ, 'ಇದರ ಹಿಂದಿನ ರಹಸ್ಯವೇನು ಎಂದು ನೀವು ಆಲೋಚಿಸುವಿರಿ' ಎಂದಿದ್ದಾರೆ.</p><p>ಬಿಆರ್ಎಸ್ ಮತ್ತು ಬಿಜೆಪಿ ಶೀಘ್ರದಲ್ಲೇ ವಿಲೀನಗೊಳ್ಳಲಿದೆ ಎಂದೂ ಹೇಳಿದ್ದಾರೆ.</p>.ಚುನಾವಣಾ ಆಯೋಗ, BJP ಸೃಷ್ಟಿಸಿರುವ ಭಯದಿಂದ ಪಶ್ಚಿಮ ಬಂಗಾಳದಲ್ಲಿ ಆತ್ಮಹತ್ಯೆ: TMC.ತೆಲಂಗಾಣ: ಮೊಹಮ್ಮದ್ ಅಜರುದ್ದೀನ್ಗೆ ಎರಡು ಖಾತೆ.<p>ಮಾಜಿ ಕ್ರಿಕೆಟಿಗ ಮೊಹಮ್ಮದ್ ಅಜರುದ್ದೀನ್ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದ ಕಿಶನ್ ರೆಡ್ಡಿ ವಿರುದ್ಧವೂ ರೇವಂತ ರೆಡ್ಡಿ ಗುಡುಗಿದ್ದಾರೆ.</p><p>ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದವರನ್ನು ಸಚಿವರನ್ನಾಗಿಸಿದರೆ, ಕಿಶನ್ ರೆಡ್ಡಿ ಅವರಿಗೇನು ಸಮಸ್ಯೆ ಎಂದು ಕೇಳಿದ್ದಾರೆ.</p><p>'ಕಾಂಗ್ರೆಸ್ ಸರ್ಕಾರ, ಅಲ್ಪಸಂಖ್ಯಾತರಿಗೆ ಸಾಕಷ್ಟು ಅವಕಾಶಗಳನ್ನು ನೀಡಿದೆ. ಅಲ್ಪಸಂಖ್ಯಾತರಿಗೆ ದೊಡ್ಡ ಹುದ್ದೆಗಳನ್ನು ನೀಡುವುದು ಕಾಂಗ್ರೆಸ್ ಮಾತ್ರ. ಕಾಂಗ್ರೆಸ್ ಎಂದರೆ, ಮುಸ್ಲಿಮರು. ಮುಸ್ಲಿಮರೆಂದರೆ ಕಾಂಗ್ರೆಸ್' ಎಂದು ಪ್ರತಿಪಾದಿಸಿದ್ದಾರೆ.</p><p><strong>ಉಪ ಚುನಾವಣೆ<br></strong>ಜುಬಿಲಿ ಹಿಲ್ಸ್ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದ, ಬಿಆರ್ಎಸ್ನ ಮಂಗಟಿ ಗೋಪಿನಾಥ್ ಅವರು ಇದೇ ವರ್ಷ ಜೂನ್ನಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದರು. ಹೀಗಾಗಿ, ತೆರವಾಗಿರುವ ಸ್ಥಾನಕ್ಕೆ ಉಪ ಚುನಾವಣೆ ನಿಗದಿಯಾಗಿದೆ. ನವೆಂಬರ್ 11ರಂದು ಮತದಾನ ನಡೆಯಲಿದೆ.</p><p>ಗೋಪಿನಾಥ್ ಅವರ ಪತ್ನಿ ಸುನೀತ ಅವರನ್ನು ಬಿಆರ್ಎಸ್ನಿಂದ ಕಣಕ್ಕಿಳಿಸಿದೆ. ದೀಪಕ್ ರೆಡ್ಡಿ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ. ಕಾಂಗ್ರೆಸ್ನ ನವೀನ್ ರೆಡ್ಡಿ ಅವರಿಗೆ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಬೆಂಬಲ ಸೂಚಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್</strong>: ಜುಬಿಲಿ ಹಿಲ್ಸ್ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಸೋಲಿಸಲು ಬಿಜೆಪಿ ಮತ್ತು ಬಿಆರ್ಎಸ್ ಪಕ್ಷಗಳು ಒಂದಾಗಿವೆ ಎಂದು ತೆಲಂಗಾಣ ಮುಖ್ಯಮಂತ್ರಿ ರೇವಂತ ರೆಡ್ಡಿ ಬುಧವಾರ ಆರೋಪಿಸಿದ್ದಾರೆ.</p><p>ಕಾಂಗ್ರೆಸ್ ಅಭ್ಯರ್ಥಿ ನವೀನ್ ರೆಡ್ಡಿ ಪರ ಯುಸೂಫ್ಗಢದಲ್ಲಿ ನಡೆದ ಸಾರ್ವಜನಿಕ ಸಮಾವೇಶದಲ್ಲಿ ಮಾತನಾಡಿರುವ ಮುಖ್ಯಮಂತ್ರಿ, ಕೇಂದ್ರ ಸಚಿವ ಜಿ. ಕಿಶನ್ ರೆಡ್ಡಿ ಹಾಗೂ ಬಿಆರ್ಎಸ್ ಕಾರ್ಯಾಧ್ಯಕ್ಷ ಕೆ.ಟಿ. ರಾಮ ರಾವ್ (ಕೆಟಿಆರ್) ಅವರು ಒಂದೇ ನಾಣ್ಯದ ಎರಡು ಮುಖಗಳೆಂದು ಟೀಕಿಸಿದ್ದಾರೆ.</p><p>ರಾಜ್ಯದಲ್ಲಿ ಈ ಹಿಂದೆ ಬಿಆರ್ಎಸ್ ಅಧಿಕಾರದಲ್ಲಿದ್ದಾಗ ಪರಸ್ಪರ ಆರೋಪ ಪ್ರತ್ಯಾರೋಪದಲ್ಲಿ ತೊಡಗಿದ್ದ ಪಕ್ಷಗಳು (ಬಿಆರ್ಎಸ್, ಬಿಜೆಪಿ) ಇದೀಗ, ಕಾಂಗ್ರೆಸ್ ಅನ್ನು ಸೋಲಿಸಲು ಒಂದಾಗಿವೆ ಎಂದು ವ್ಯಂಗ್ಯವಾಡಿದ್ದಾರೆ.</p><p>ಬಿಆರ್ಎಸ್ ಸರ್ಕಾರದ ಅವಧಿಯಲ್ಲಿ ನಿರ್ಮಾಣಗೊಂಡ ಕಾಳೇಶ್ವರಂ ಯೋಜನೆಯನ್ನು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ವಿರೋಧಿಸಿದ್ದರು. ಯೋಜನೆಯು ಆಗಿನ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ (ಕೆಸಿಆರ್) ಅವರ ಪಾಲಿಗೆ ಎಟಿಎಂ ಇದ್ದಂತೆ ಎಂದು ಬಣ್ಣಿಸಿದ್ದರು. ಆ ಯೋಜನೆಯಲ್ಲಿ ನಡೆದಿದೆ ಎನ್ನಲಾದ ಹಗರಣಗಳ ಬಗ್ಗೆ ಸಿಬಿಐ ತನಿಖೆ ನಡೆಸಬೇಕು ಎಂದು ಕಿಶನ್ ರೆಡ್ಡಿ ಆಗ್ರಹಿಸಿದ್ದರು. ಕೆಸಿಆರ್ ಹಾಗೂ ಅವರ ಸಂಬಂಧಿ, ನೀರಾವರಿ ಸಚಿವ ಟಿ. ಹರೀಶ್ ರಾವ್ ಅವರನ್ನು ಬಂಧಿಸಬೇಕು ಎಂದು ಒತ್ತಾಯಿಸಿದ್ದರು ಎಂದು ನೆನಪಿಸಿದ್ದಾರೆ.</p><p>ಕಾಳೇಶ್ವರಂ ಯೋಜನೆಯ ಹಗರಣಗಳಿಗೆ ಸಂಬಂಧಿಸಿದಂತೆ ನಮ್ಮ ಸರ್ಕಾರ ಮೂರು ತಿಂಗಳ ಹಿಂದೆಯೇ ಸಿಬಿಐಗೆ ದೂರು ನೀಡಿದೆ. ಆದಾಗ್ಯೂ, ತನಿಖಾ ಸಂಸ್ಥೆ ಇನ್ನೂ ಎಫ್ಐಆರ್ ದಾಖಲಿಸಿಕೊಂಡಿಲ್ಲವೇಕೆ ಎಂದು ಪ್ರಶ್ನಿಸಿದ್ದಾರೆ.</p><p>'ಫಾರ್ಮುಲಾ ಇ ರೇಸ್' ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಟಿಆರ್ ಅವರನ್ನು ಬಂಧಿಸಲು ಎಸಿಬಿ ಸಲ್ಲಿಸಿರುವ ಮನವಿ ಕಳೆದೆರಡು ತಿಂಗಳಿನಿಂದ ರಾಜ್ಯಪಾಲರ ಬಳಿ ಬಾಕಿ ಉಳಿದಿದೆ ಎಂದು ಉಲ್ಲೇಖಿಸಿರುವ ಸಿಎಂ, 'ಇದರ ಹಿಂದಿನ ರಹಸ್ಯವೇನು ಎಂದು ನೀವು ಆಲೋಚಿಸುವಿರಿ' ಎಂದಿದ್ದಾರೆ.</p><p>ಬಿಆರ್ಎಸ್ ಮತ್ತು ಬಿಜೆಪಿ ಶೀಘ್ರದಲ್ಲೇ ವಿಲೀನಗೊಳ್ಳಲಿದೆ ಎಂದೂ ಹೇಳಿದ್ದಾರೆ.</p>.ಚುನಾವಣಾ ಆಯೋಗ, BJP ಸೃಷ್ಟಿಸಿರುವ ಭಯದಿಂದ ಪಶ್ಚಿಮ ಬಂಗಾಳದಲ್ಲಿ ಆತ್ಮಹತ್ಯೆ: TMC.ತೆಲಂಗಾಣ: ಮೊಹಮ್ಮದ್ ಅಜರುದ್ದೀನ್ಗೆ ಎರಡು ಖಾತೆ.<p>ಮಾಜಿ ಕ್ರಿಕೆಟಿಗ ಮೊಹಮ್ಮದ್ ಅಜರುದ್ದೀನ್ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದ ಕಿಶನ್ ರೆಡ್ಡಿ ವಿರುದ್ಧವೂ ರೇವಂತ ರೆಡ್ಡಿ ಗುಡುಗಿದ್ದಾರೆ.</p><p>ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದವರನ್ನು ಸಚಿವರನ್ನಾಗಿಸಿದರೆ, ಕಿಶನ್ ರೆಡ್ಡಿ ಅವರಿಗೇನು ಸಮಸ್ಯೆ ಎಂದು ಕೇಳಿದ್ದಾರೆ.</p><p>'ಕಾಂಗ್ರೆಸ್ ಸರ್ಕಾರ, ಅಲ್ಪಸಂಖ್ಯಾತರಿಗೆ ಸಾಕಷ್ಟು ಅವಕಾಶಗಳನ್ನು ನೀಡಿದೆ. ಅಲ್ಪಸಂಖ್ಯಾತರಿಗೆ ದೊಡ್ಡ ಹುದ್ದೆಗಳನ್ನು ನೀಡುವುದು ಕಾಂಗ್ರೆಸ್ ಮಾತ್ರ. ಕಾಂಗ್ರೆಸ್ ಎಂದರೆ, ಮುಸ್ಲಿಮರು. ಮುಸ್ಲಿಮರೆಂದರೆ ಕಾಂಗ್ರೆಸ್' ಎಂದು ಪ್ರತಿಪಾದಿಸಿದ್ದಾರೆ.</p><p><strong>ಉಪ ಚುನಾವಣೆ<br></strong>ಜುಬಿಲಿ ಹಿಲ್ಸ್ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದ, ಬಿಆರ್ಎಸ್ನ ಮಂಗಟಿ ಗೋಪಿನಾಥ್ ಅವರು ಇದೇ ವರ್ಷ ಜೂನ್ನಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದರು. ಹೀಗಾಗಿ, ತೆರವಾಗಿರುವ ಸ್ಥಾನಕ್ಕೆ ಉಪ ಚುನಾವಣೆ ನಿಗದಿಯಾಗಿದೆ. ನವೆಂಬರ್ 11ರಂದು ಮತದಾನ ನಡೆಯಲಿದೆ.</p><p>ಗೋಪಿನಾಥ್ ಅವರ ಪತ್ನಿ ಸುನೀತ ಅವರನ್ನು ಬಿಆರ್ಎಸ್ನಿಂದ ಕಣಕ್ಕಿಳಿಸಿದೆ. ದೀಪಕ್ ರೆಡ್ಡಿ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ. ಕಾಂಗ್ರೆಸ್ನ ನವೀನ್ ರೆಡ್ಡಿ ಅವರಿಗೆ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಬೆಂಬಲ ಸೂಚಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>