ಲೋಕಸಭಾ ಚುನಾವಣಾ ಪ್ರಚಾರದಿಂದ ರೇವಂತ್ ರೆಡ್ಡಿ ಅವರನ್ನು ತಕ್ಷಣವೇ ನಿಷೇಧಿಸಬೇಕು. ಎಂಸಿಸಿ ಉಲ್ಲಂಘನೆ ಆರೋಪದದಡಿ ಅವರ ಹಾಗೂ ಕಾಂಗ್ರೆಸ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಬಿಆರ್ಎಸ್ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ.
ಏಪ್ರಿಲ್ 6ರಂದು ನಗರದ ಹೊರವಲಯದಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಸಿಎಂ ರೇವಂತ್ ರೆಡ್ಡಿ ಅವರು ಮಾಡಿದ ಭಾಷಣವನ್ನು ಉಲ್ಲೇಖಿಸಿ, ಬಿಆರ್ಎಸ್ ಪಕ್ಷದ ಅಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರ ಕುರಿತು ಅವಹೇಳನಕಾರಿಯಾಗಿ ಹೇಳಿಕೆಗಳನ್ನು ನೀಡಿದ್ದಾರೆಂದು ಬಿಆರ್ಎಸ್ ಪಕ್ಷ ಆರೋಪಿಸಿದೆ.