ಹೈದರಾಬಾದ್ : ದೆಹಲಿ ಅಬಕಾರಿ ನೀತಿ ಪ್ರಕರಣ ಸಂಬಂಧ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ತನ್ನ ಬಂಧನವನ್ನು ಪ್ರಶ್ನಿಸಿ ಭಾರತ್ ರಾಷ್ಟ್ರ ಸಮಿತಿ (ಬಿಆರ್ಎಸ್) ಎಂಎಲ್ಸಿ ಕೆ. ಕವಿತಾ ಸೋಮವಾರ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.
ಆಕೆಯ ಸಹೋದರ ಹಾಗೂ ಬಿಆರ್ಎಸ್ ನಾಯಕ ಕೆ.ಟಿ ರಾಮರಾವ್ ಭಾನುವಾರ ಕವಿತಾ ಅವರನ್ನು ಭೇಟಿಯಾದ ಬಳಿಕ ಈ ಬೆಳವಣಿಗೆ ನಡೆದಿದೆ. ನ್ಯಾಯಾಲಯದ ಅನುಮತಿ ಮೇರೆಗೆ ಕೆಟಿಆರ್ ಕವಿತಾ ಅವರನ್ನು ಭೇಟಿ ಮಾಡಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.