ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆಸಿಆರ್ ಆಸ್ಪತ್ರೆಗೆ ದಾಖಲು

Published 8 ಡಿಸೆಂಬರ್ 2023, 4:15 IST
Last Updated 8 ಡಿಸೆಂಬರ್ 2023, 4:15 IST
ಅಕ್ಷರ ಗಾತ್ರ

ಹೈದರಾಬಾದ್: ಬಿದ್ದು ಗಾಯಗೊಂಡಿರುವ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಅಧ್ಯಕ್ಷ, ತೆಲಂಗಾಣದ ಮಾಜಿ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್‌ (ಕೆಸಿಆರ್‌) ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

69 ವರ್ಷದ ಕೆಸಿಆರ್ ಗುರುವಾರ ರಾತ್ರಿ ಎರ್ರವಲ್ಲಿ ಫಾರ್ಮ್‌ ಹೌಸ್‌ನಲ್ಲಿ ಬಿದ್ದು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಖಾಸಗಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕೆಸಿಆರ್‌ಗೆ ಚಿಕಿತ್ಸೆ ಒದಗಿಸಲಾಗುತ್ತಿದ್ದು, ವೈದ್ಯರು ನಿಗಾ ವಹಿಸುತ್ತಿದ್ದಾರೆ.

'ಬಿಆರ್‌ಎಸ್ ಅಧ್ಯಕ್ಷ ಕೆಸಿಆರ್‌ ಅವರಿಗೆ ಸಣ್ಣ ಪುಟ್ಟ ಗಾಯವಾಗಿದ್ದು, ಸದ್ಯ ಆಸ್ಪತ್ರೆಯಲ್ಲಿ ತಜ್ಞರ ಆರೈಕೆಯಲ್ಲಿದ್ದಾರೆ. ಹಿತೈಷಿಗಳ ಬೆಂಬಲ ಹಾಗೂ ಹಾರೈಕೆಯೊಂದಿಗೆ ಶೀಘ್ರದಲ್ಲೇ ಸಂಪೂರ್ಣವಾಗಿ ಗುಣಮುಖರಾಗಲಿದ್ದಾರೆ' ಎಂದು ಪುತ್ರಿ, ಎಂಎಲ್‌ಸಿ ಕೆ. ಕವಿತಾ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT