<p><strong>ಹೈದರಾಬಾದ್</strong>: ತೆಲಂಗಾಣದಲ್ಲಿ ಪ್ರತಿಪಕ್ಷ ಬಿಆರ್ಎಸ್ಗೆ ಮತ್ತೊಮ್ಮೆ ಹಿನ್ನಡೆಯಾಗಿದ್ದು, ಪಕ್ಷದ ಪ್ರಮುಖ ಶಾಸಕ ಸಂಜಯ್ ಕುಮಾರ್ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. </p><p>ಸಂಜಯ್ ಕುಮಾರ್ ಅವರನ್ನು ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಅವರು ಪಕ್ಷಕ್ಕೆ ಸ್ವಾಗತಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಕುಮಾರ್ ಕಾಂಗ್ರೆಸ್ ಸೇರಿದ ಐದನೇ ಬಿಆರ್ಎಸ್ ಶಾಸಕರಾಗಿದ್ದಾರೆ.</p><p>ಜೂನ್ 21ರಂದು ಹಿರಿಯ ಬಿಆರ್ಎಸ್ ಶಾಸಕ ಮತ್ತು ಮಾಜಿ ವಿಧಾನಸಭಾ ಸ್ಪೀಕರ್ ಪೋಚಾರಂ ಶ್ರೀನಿವಾಸ್ ರೆಡ್ಡಿ ಅವರು ಕಾಂಗ್ರೆಸ್ ಸೇರ್ಪಡೆಯಾಗಿದ್ದರು. ಇದರ ಬೆನ್ನಲ್ಲೇ ಸಂಜಯ್ ಕುಮಾರ್ ಪಕ್ಷ ಬದಲಾಯಿಸಿದ್ದಾರೆ.</p><p>ವೃತ್ತಿಯಲ್ಲಿ ವೈದ್ಯರಾಗಿರುವ ಸಂಜಯ್ ಕುಮಾರ್ ಅವರು ಎರಡನೇ ಬಾರಿಗೆ ವಿಧಾನಸಭೆಗೆ ಆಯ್ಕೆಯಾಗಿದ್ದರು.</p><p>ಇದಕ್ಕೂ ಮುನ್ನ ಬಿಆರ್ಎಸ್ ಶಾಸಕರಾದ ಕಡಿಯಂ ಶ್ರೀಹರಿ, ದಾನಂ ನಾಗೇಂದರ್ ಮತ್ತು ತಲ್ಲಂ ವೆಂಕಟ್ ರಾವ್ ಅವರು ಕಾಂಗ್ರೆಸ್ ಸೇರಿದ್ದರು. ಇವರಲ್ಲದೇ ಹೈದರಾಬಾದ್ ಮೇಯರ್ ವಿಜಯಲಕ್ಷ್ಮಿ ಆರ್. ಗದ್ವಾಲ್ ಸೇರಿದಂತೆ ಹಲವು ಬಿಆರ್ಎಸ್ ನಾಯಕರು ಕಾಂಗ್ರೆಸ್ಗೆ ಸೇರ್ಪಡೆಗೊಂಡಿದ್ದರು.</p><p>ಮುಂದಿನ ದಿನಗಳಲ್ಲಿ ಇನ್ನಷ್ಟು ಬಿಆರ್ಎಸ್ ಶಾಸಕರು ಕಾಂಗ್ರೆಸ್ ಸೇರುವ ಸಾಧ್ಯತೆಯಿದೆ ಎಂಬ ವದಂತಿ ರಾಜ್ಯ ರಾಜಕಾರಣದಲ್ಲಿ ಕೇಳಿಬಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್</strong>: ತೆಲಂಗಾಣದಲ್ಲಿ ಪ್ರತಿಪಕ್ಷ ಬಿಆರ್ಎಸ್ಗೆ ಮತ್ತೊಮ್ಮೆ ಹಿನ್ನಡೆಯಾಗಿದ್ದು, ಪಕ್ಷದ ಪ್ರಮುಖ ಶಾಸಕ ಸಂಜಯ್ ಕುಮಾರ್ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. </p><p>ಸಂಜಯ್ ಕುಮಾರ್ ಅವರನ್ನು ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಅವರು ಪಕ್ಷಕ್ಕೆ ಸ್ವಾಗತಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಕುಮಾರ್ ಕಾಂಗ್ರೆಸ್ ಸೇರಿದ ಐದನೇ ಬಿಆರ್ಎಸ್ ಶಾಸಕರಾಗಿದ್ದಾರೆ.</p><p>ಜೂನ್ 21ರಂದು ಹಿರಿಯ ಬಿಆರ್ಎಸ್ ಶಾಸಕ ಮತ್ತು ಮಾಜಿ ವಿಧಾನಸಭಾ ಸ್ಪೀಕರ್ ಪೋಚಾರಂ ಶ್ರೀನಿವಾಸ್ ರೆಡ್ಡಿ ಅವರು ಕಾಂಗ್ರೆಸ್ ಸೇರ್ಪಡೆಯಾಗಿದ್ದರು. ಇದರ ಬೆನ್ನಲ್ಲೇ ಸಂಜಯ್ ಕುಮಾರ್ ಪಕ್ಷ ಬದಲಾಯಿಸಿದ್ದಾರೆ.</p><p>ವೃತ್ತಿಯಲ್ಲಿ ವೈದ್ಯರಾಗಿರುವ ಸಂಜಯ್ ಕುಮಾರ್ ಅವರು ಎರಡನೇ ಬಾರಿಗೆ ವಿಧಾನಸಭೆಗೆ ಆಯ್ಕೆಯಾಗಿದ್ದರು.</p><p>ಇದಕ್ಕೂ ಮುನ್ನ ಬಿಆರ್ಎಸ್ ಶಾಸಕರಾದ ಕಡಿಯಂ ಶ್ರೀಹರಿ, ದಾನಂ ನಾಗೇಂದರ್ ಮತ್ತು ತಲ್ಲಂ ವೆಂಕಟ್ ರಾವ್ ಅವರು ಕಾಂಗ್ರೆಸ್ ಸೇರಿದ್ದರು. ಇವರಲ್ಲದೇ ಹೈದರಾಬಾದ್ ಮೇಯರ್ ವಿಜಯಲಕ್ಷ್ಮಿ ಆರ್. ಗದ್ವಾಲ್ ಸೇರಿದಂತೆ ಹಲವು ಬಿಆರ್ಎಸ್ ನಾಯಕರು ಕಾಂಗ್ರೆಸ್ಗೆ ಸೇರ್ಪಡೆಗೊಂಡಿದ್ದರು.</p><p>ಮುಂದಿನ ದಿನಗಳಲ್ಲಿ ಇನ್ನಷ್ಟು ಬಿಆರ್ಎಸ್ ಶಾಸಕರು ಕಾಂಗ್ರೆಸ್ ಸೇರುವ ಸಾಧ್ಯತೆಯಿದೆ ಎಂಬ ವದಂತಿ ರಾಜ್ಯ ರಾಜಕಾರಣದಲ್ಲಿ ಕೇಳಿಬಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>