<p><strong>ನವದೆಹಲಿ</strong>: ಭಾರತ್ ಸ್ಟೇಜ್–4 (ಬಿಎಸ್ ನಾಲ್ಕು) ಮಾನದಂಡಗಳಿಗೆ ಅನುಗುಣವಾಗಿ ಇರದ ಹಳೆಯ ವಾಹನಗಳ ವಿರುದ್ಧ ಕ್ರಮ ಕೈಗೊಳ್ಳಲು ದೆಹಲಿ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಬುಧವಾರ ಅನುಮತಿ ನೀಡಿದೆ. </p>.<p>ಬಿಎಸ್–3 ಮಾನದಂಡಗಳನ್ನು ಪೂರೈಸದ 10–15 ವರ್ಷದ ಹಳೆಯ ವಾಹನಗಳ ವಿರುದ್ಧ ಕ್ರಮ ಕೈಗೊಳ್ಳಲು ಅನುಮತಿ ನೀಡಬೇಕೆಂದು ಕೋರಿ ದೆಹಲಿ ಸರ್ಕಾರದ ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಐಶ್ವರ್ಯ ಭಾಟಿ ಅವರು ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದರು. </p>.<p>ಅರ್ಜಿ ಪುರಸ್ಕರಿಸಿದ ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಹಾಗೂ ನ್ಯಾಯಮೂರ್ತಿ ಜಾಯ್ಮಾಲ್ಯ ಬಾಗ್ಚಿ ಅವರನ್ನೊಳಗೊಂಡ ಪೀಠವು, ಸುಪ್ರೀಂ ಕೋರ್ಟ್ನ ಆಗಸ್ಟ್ 12ರ ಆದೇಶವನ್ನು ಪರಿಷ್ಕರಿಸಿದೆ. </p>.<p>‘ವಾಹನಗಳ ವಯಸ್ಸಿನ ಆಧಾರದಲ್ಲಿ ಮಾತ್ರ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳುವುದಕ್ಕೆ ಆಗಸ್ಟ್ 12ರ ಆದೇಶದಲ್ಲಿ ತಡೆ ನೀಡಲಾಗಿತ್ತು. ಆದರೆ, ಆ ವಾಹನಗಳು ಬಿಎಸ್–4 ಮಾನದಂಡಗಳಿಗೆ ಅನುಗುಣವಾಗಿದ್ದರೆ ಮಾತ್ರ ಮಾಲಿಕರಿಗೆ ಈ ರಕ್ಷಣೆ ಸಿಗಲಿದೆ. ಬಿಎಸ್–4 ಹಾಗೂ ಬಿಎಸ್ –3 ಮಾನದಂಡಗಳಿಗೆ ಅನುಗುಣವಾಗಿ ಇರದಿದ್ದರೆ ಕ್ರಮ ಕೈಗೊಳ್ಳಬಹುದು’ ಎಂದು ನ್ಯಾಯಪೀಠ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಭಾರತ್ ಸ್ಟೇಜ್–4 (ಬಿಎಸ್ ನಾಲ್ಕು) ಮಾನದಂಡಗಳಿಗೆ ಅನುಗುಣವಾಗಿ ಇರದ ಹಳೆಯ ವಾಹನಗಳ ವಿರುದ್ಧ ಕ್ರಮ ಕೈಗೊಳ್ಳಲು ದೆಹಲಿ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಬುಧವಾರ ಅನುಮತಿ ನೀಡಿದೆ. </p>.<p>ಬಿಎಸ್–3 ಮಾನದಂಡಗಳನ್ನು ಪೂರೈಸದ 10–15 ವರ್ಷದ ಹಳೆಯ ವಾಹನಗಳ ವಿರುದ್ಧ ಕ್ರಮ ಕೈಗೊಳ್ಳಲು ಅನುಮತಿ ನೀಡಬೇಕೆಂದು ಕೋರಿ ದೆಹಲಿ ಸರ್ಕಾರದ ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಐಶ್ವರ್ಯ ಭಾಟಿ ಅವರು ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದರು. </p>.<p>ಅರ್ಜಿ ಪುರಸ್ಕರಿಸಿದ ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಹಾಗೂ ನ್ಯಾಯಮೂರ್ತಿ ಜಾಯ್ಮಾಲ್ಯ ಬಾಗ್ಚಿ ಅವರನ್ನೊಳಗೊಂಡ ಪೀಠವು, ಸುಪ್ರೀಂ ಕೋರ್ಟ್ನ ಆಗಸ್ಟ್ 12ರ ಆದೇಶವನ್ನು ಪರಿಷ್ಕರಿಸಿದೆ. </p>.<p>‘ವಾಹನಗಳ ವಯಸ್ಸಿನ ಆಧಾರದಲ್ಲಿ ಮಾತ್ರ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳುವುದಕ್ಕೆ ಆಗಸ್ಟ್ 12ರ ಆದೇಶದಲ್ಲಿ ತಡೆ ನೀಡಲಾಗಿತ್ತು. ಆದರೆ, ಆ ವಾಹನಗಳು ಬಿಎಸ್–4 ಮಾನದಂಡಗಳಿಗೆ ಅನುಗುಣವಾಗಿದ್ದರೆ ಮಾತ್ರ ಮಾಲಿಕರಿಗೆ ಈ ರಕ್ಷಣೆ ಸಿಗಲಿದೆ. ಬಿಎಸ್–4 ಹಾಗೂ ಬಿಎಸ್ –3 ಮಾನದಂಡಗಳಿಗೆ ಅನುಗುಣವಾಗಿ ಇರದಿದ್ದರೆ ಕ್ರಮ ಕೈಗೊಳ್ಳಬಹುದು’ ಎಂದು ನ್ಯಾಯಪೀಠ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>