ನವದೆಹಲಿ: ಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಬರುವಿಕೆಗಾಗಿ ಜನರು ವಾಘಾ ಗಡಿಯಲ್ಲಿ ಕಾಯುತ್ತಿದ್ದಾರೆ. ಅಭಿನಂದನ್ ಅವರನ್ನು ಸಂಜೆ 4 ಗಂಟೆಯ ಹೊತ್ತಿಗೆ ಬಿಡುಗಡೆ ಮಾಡುವುದಾಗಿ ಪಾಕಿಸ್ತಾನ ಹೇಳಿದ್ದು, ಭಾರತದ ಗಡಿ ಭದ್ರತಾ ಪಡೆ (ಬಿಎಸ್ಎಫ್) ವಾಘಾ- ಅಟ್ಟಾರಿಗಡಿಯಲ್ಲಿ ನಡೆಯುವ ಬೀಟಿಂಗ್ ರಿಟ್ರೀಟ್ ಕಾರ್ಯಕ್ರಮ ರದ್ದು ಮಾಡಿದೆ.