ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಡಿಯಲ್ಲಿ ಬೇಲಿ ರಕ್ಷಣೆಗೆ ಜೇನು ಪೆಟ್ಟಿಗೆ ಮೊರೆ ಹೋದ ಬಿಎಸ್‌ಎಫ್‌

Published 5 ನವೆಂಬರ್ 2023, 23:30 IST
Last Updated 5 ನವೆಂಬರ್ 2023, 23:30 IST
ಅಕ್ಷರ ಗಾತ್ರ

ನವದೆಹಲಿ/ಕೋಲ್ಕತ್ತ: ಪಶ್ಚಿಮ ಬಂಗಾಳದ ಭಾರತ– ಬಾಂಗ್ಲಾದೇಶ ಗಡಿಯಲ್ಲಿ ಕಳ್ಳಸಾಗಣೆದಾರರು ಬೇಲಿ ತುಂಡರಿಸುವುದನ್ನು ತಡೆಯುವ ಸಲುವಾಗಿ ಗಡಿ ಭದ್ರತಾ ಪಡೆಯು (ಬಿಎಸ್‌ಎಫ್‌) ಜೇನು ಪೆಟ್ಟಿಗೆ ಅಳವಡಿಸುವ ವಿನೂತನ ಪ್ರಯೋಗಕ್ಕೆ ಮೊರೆ ಹೋಗಿದೆ.

 ‘ಜಾನುವಾರು, ಚಿನ್ನ ಮತ್ತು ಮಾದಕವಸ್ತುಗಳ ಕಳ್ಳಸಾಗಣೆದಾರರು ಬೇಲಿಯನ್ನು ತುಂಡರಿಸುತ್ತಾರೆ’ ಎಂದು ಬಿಎಸ್‌ಎಫ್‌ ಅಧಿಕಾರಿಗಳು ತಿಳಿಸಿದ್ದಾರೆ.

ಬಿಎಸ್‌ಎಫ್‌ನ 32ನೇ ಬೆಟಾಲಿಯನ್‌ ವತಿಯಿಂದ ನಾಡಿಯಾ ಜಿಲ್ಲೆಯ ಗಡಿ ಪ್ರದೇಶದಲ್ಲಿ ಜೇನು ಪೆಟ್ಟಿಗೆಗಳನ್ನು ಈಗಾಗಲೇ ಸ್ಥಾಪಿಸಲಾಗಿದೆ. ಇದು ಸ್ಥಳೀಯರ ಜೀವನೋಪಾಯಕ್ಕೂ ಸಹಾಯಕವಾಗಬಲ್ಲುದು ಎಂದು ಬಿಎಸ್‌ಎಫ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬಿಎಸ್‌ಎಫ್‌ನ ಈ ಯೋಜನೆಗೆ ಆಯುಷ್‌ ಸಚಿವಾಲಯವು ಸಹಕಾರ ನೀಡಿದ್ದು, ಲೋಹದ ಸ್ಮಾರ್ಟ್‌ ಬೇಲಿಗೆ ಜೇನು ಪೆಟ್ಟಿಗೆಗಳನ್ನು ಅಳವಡಿಸುವ ಸಲಕರಣೆಗಳನ್ನು ಮತ್ತು ಜೇನುಪೆಟ್ಟಿಗೆಗಳನ್ನು ಒದಗಿಸಿದೆ.

ಬಿಎಸ್‌ಎಫ್‌ನ 32ನೇ ಬೆಟಾಲಿಯನ್‌ನ ಕಮಾಂಡೆಂಟ್‌ ಸುಜಿತ್‌ ಕುಮಾರ್‌ ಅವರ ಪರಿಕಲ್ಪನೆಯಲ್ಲಿ ಈ ಯೋಜನೆಯು ಮೂಡಿಬಂದಿದೆ.

 ‘ಆಯುಷ್‌ ಸಚಿವಾಲಯವು ಹೂವು ಬಿಡುವ ಗಿಡಮೂಲಿಕೆ ಸಸ್ಯಗಳನ್ನು ನೀಡಿದ್ದು, ಅವುಗಳನ್ನು ಜೇನು ಪೆಟ್ಟಿಗೆಗಳ ಸಮೀಪ ನೆಡಲಾಗುವುದು’ ಎಂದು ಸುಜಿತ್‌ ಕುಮಾರ್‌ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT