<p><strong>ಜಮ್ಮು:</strong> ಜಮ್ಮು ಮತ್ತು ಕಾಶ್ಮೀರದ ಅಂತರರಾಷ್ಟ್ರೀಯ ಗಡಿಯಲ್ಲಿ ಭದ್ರತಾ ಸ್ಥಿತಿಯನ್ನು ಬಿಎಸ್ಎಫ್ ಮಹಾನಿರ್ದೇಶಕ ದಲ್ಜಿತ್ ಸಿಂಗ್ ಚೌಧರಿ ಪರಿಶೀಲಿಸಿದ್ದಾರೆ. ಅಲ್ಲದೆ ರಾಷ್ಟ್ರದ ಭದ್ರತೆಯನ್ನು ಕಾಪಾಡುವಲ್ಲಿ ನಿರಂತರ ಜಾಗರೂಕತೆ ಮತ್ತು ಸೈನ್ಯದ ಸನ್ನದ್ಧತೆಯ ಮಹತ್ವವನ್ನು ಒತ್ತಿ ಹೇಳಿದ್ದಾರೆ.</p><p>ಜಮ್ಮು ಮತ್ತು ಕಾಶ್ಮೀರದಲ್ಲಿ ಹೆಚ್ಚು ಶೆಲ್ಲಿಂಗ್ ನಡೆಯುವ ಪೂಂಛ್ ಜಿಲ್ಲೆಗೆ ಗುರುವಾರ ಭೇಟಿ ನೀಡಿದ ಅವರು, ಭದ್ರತೆಯನ್ನು ಪರಿಶೀಲನೆ ನಡೆಸಿದ್ದಾರೆ.</p>.ಗುಜರಾತ್, ಪಂಜಾಬ್, ರಾಜಸ್ಥಾನ, ಜಮ್ಮು–ಕಾಶ್ಮೀರದಲ್ಲಿ ನಾಳೆ ‘ಆಪರೇಷನ್ ಅಭ್ಯಾಸ್’.<p>‘ಜಮ್ಮುವಿನಲ್ಲಿ ಗಡಿ ಭದ್ರತಾ ಕ್ರಮಗಳನ್ನು ಪರಿಶೀಲಿಸಲು ಮತ್ತು ಬಲಪಡಿಸಲು ಜಮ್ಮುವಿನ ಪ್ರಧಾನ ಕಚೇರಿಯಲ್ಲಿ ಬಿಎಸ್ಎಫ್ ಮಹಾ ನಿರ್ದೇಶಕ ದಲ್ಜಿತ್ ಸಿಂಗ್ ಚೌಧರಿ ಸಭೆ ನಡೆಸಿದರು’ ಎಂದು ಬಿಎಸ್ಎಫ್ ಎಕ್ಸ್ ಪೋಸ್ಟ್ನಲ್ಲಿ ತಿಳಿಸಿದೆ.</p><p>ಸಭೆಯಲ್ಲಿ ಸದ್ಯದ ಕಾರ್ಯಾಚರಣೆ ತಂತ್ರಗಳು, ಸವಾಲುಗಳ ಬಗ್ಗೆ ಮಾಹಿತಿ ಪಡೆದುಕೊಂಡರಲ್ಲದೆ, ಅಂತರರಾಷ್ಟ್ರೀಯ ಗಡಿಯಲ್ಲಿ ಸದ್ಯದ ಭದ್ರತಾ ಸನ್ನಿವೇಶವನ್ನು ಪರಿಶೀಲನೆ ನಡೆಸಿದರು ಎಂದು ಅದು ತಿಳಿಸಿದೆ.</p>.ಜಮ್ಮು ಮತ್ತು ಕಾಶ್ಮೀರ: ಶಂಕಿತ ಉಗ್ರರೊಂದಿಗೆ ಗುಂಡಿನ ಚಕಮಕಿ, ಶೋಧ .<p>ಮುಂಬರುವ ಅಮರನಾಥ ಯಾತ್ರೆಯಿಂದಾಗಿ ಹೆಚ್ಚಿನ ಸುರಕ್ಷತೆ ಮತ್ತು ಭದ್ರತೆಯ ಅಗತ್ಯವನ್ನು ಅವರು ಒತ್ತಿ ಹೇಳಿದ್ದಾರೆ.</p><p>ಅಮರನಾಥ ದೇಗುಲ ಮಂಡಳಿಯ ಪ್ರಕಟಣೆ ಪ್ರಕಾರ, ದಕ್ಷಿಣ ಕಾಶ್ಮೀರದಲ್ಲಿರುವ 3,880 ಮೀಟರ್ ಎತ್ತರದ ಗುಹಾ ದೇವಾಲಯಕ್ಕೆ 38 ದಿನಗಳ ತೀರ್ಥಯಾತ್ರೆ ಜುಲೈ 3 ರಂದು ಪ್ರಾರಂಭವಾಗಿ ಆಗಸ್ಟ್ 9 ರಂದು ಮುಕ್ತಾಯಗೊಳ್ಳಲಿದೆ.</p><p>ವಾರ್ಷಿಕ ಅಮರನಾಥ ಯಾತ್ರೆಗಾಗಿ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ ಸುಮಾರು 42,000 ಸಿಬ್ಬಂದಿಯನ್ನು ಒಳಗೊಂಡ 580 ತುಕಡಿಗಳನ್ನು ನಿಯೋಜಿಸಲು ಕೇಂದ್ರವು ಆದೇಶಿಸಿದೆ.</p>.ಜಮ್ಮು & ಕಾಶ್ಮೀರಕ್ಕೆ ನಾಗರಿಕ ವಿಮಾನಯಾನ ಸಚಿವ: ಭದ್ರತಾ ಸ್ಥಿತಿ ಪರಿಶೀಲನೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಮ್ಮು:</strong> ಜಮ್ಮು ಮತ್ತು ಕಾಶ್ಮೀರದ ಅಂತರರಾಷ್ಟ್ರೀಯ ಗಡಿಯಲ್ಲಿ ಭದ್ರತಾ ಸ್ಥಿತಿಯನ್ನು ಬಿಎಸ್ಎಫ್ ಮಹಾನಿರ್ದೇಶಕ ದಲ್ಜಿತ್ ಸಿಂಗ್ ಚೌಧರಿ ಪರಿಶೀಲಿಸಿದ್ದಾರೆ. ಅಲ್ಲದೆ ರಾಷ್ಟ್ರದ ಭದ್ರತೆಯನ್ನು ಕಾಪಾಡುವಲ್ಲಿ ನಿರಂತರ ಜಾಗರೂಕತೆ ಮತ್ತು ಸೈನ್ಯದ ಸನ್ನದ್ಧತೆಯ ಮಹತ್ವವನ್ನು ಒತ್ತಿ ಹೇಳಿದ್ದಾರೆ.</p><p>ಜಮ್ಮು ಮತ್ತು ಕಾಶ್ಮೀರದಲ್ಲಿ ಹೆಚ್ಚು ಶೆಲ್ಲಿಂಗ್ ನಡೆಯುವ ಪೂಂಛ್ ಜಿಲ್ಲೆಗೆ ಗುರುವಾರ ಭೇಟಿ ನೀಡಿದ ಅವರು, ಭದ್ರತೆಯನ್ನು ಪರಿಶೀಲನೆ ನಡೆಸಿದ್ದಾರೆ.</p>.ಗುಜರಾತ್, ಪಂಜಾಬ್, ರಾಜಸ್ಥಾನ, ಜಮ್ಮು–ಕಾಶ್ಮೀರದಲ್ಲಿ ನಾಳೆ ‘ಆಪರೇಷನ್ ಅಭ್ಯಾಸ್’.<p>‘ಜಮ್ಮುವಿನಲ್ಲಿ ಗಡಿ ಭದ್ರತಾ ಕ್ರಮಗಳನ್ನು ಪರಿಶೀಲಿಸಲು ಮತ್ತು ಬಲಪಡಿಸಲು ಜಮ್ಮುವಿನ ಪ್ರಧಾನ ಕಚೇರಿಯಲ್ಲಿ ಬಿಎಸ್ಎಫ್ ಮಹಾ ನಿರ್ದೇಶಕ ದಲ್ಜಿತ್ ಸಿಂಗ್ ಚೌಧರಿ ಸಭೆ ನಡೆಸಿದರು’ ಎಂದು ಬಿಎಸ್ಎಫ್ ಎಕ್ಸ್ ಪೋಸ್ಟ್ನಲ್ಲಿ ತಿಳಿಸಿದೆ.</p><p>ಸಭೆಯಲ್ಲಿ ಸದ್ಯದ ಕಾರ್ಯಾಚರಣೆ ತಂತ್ರಗಳು, ಸವಾಲುಗಳ ಬಗ್ಗೆ ಮಾಹಿತಿ ಪಡೆದುಕೊಂಡರಲ್ಲದೆ, ಅಂತರರಾಷ್ಟ್ರೀಯ ಗಡಿಯಲ್ಲಿ ಸದ್ಯದ ಭದ್ರತಾ ಸನ್ನಿವೇಶವನ್ನು ಪರಿಶೀಲನೆ ನಡೆಸಿದರು ಎಂದು ಅದು ತಿಳಿಸಿದೆ.</p>.ಜಮ್ಮು ಮತ್ತು ಕಾಶ್ಮೀರ: ಶಂಕಿತ ಉಗ್ರರೊಂದಿಗೆ ಗುಂಡಿನ ಚಕಮಕಿ, ಶೋಧ .<p>ಮುಂಬರುವ ಅಮರನಾಥ ಯಾತ್ರೆಯಿಂದಾಗಿ ಹೆಚ್ಚಿನ ಸುರಕ್ಷತೆ ಮತ್ತು ಭದ್ರತೆಯ ಅಗತ್ಯವನ್ನು ಅವರು ಒತ್ತಿ ಹೇಳಿದ್ದಾರೆ.</p><p>ಅಮರನಾಥ ದೇಗುಲ ಮಂಡಳಿಯ ಪ್ರಕಟಣೆ ಪ್ರಕಾರ, ದಕ್ಷಿಣ ಕಾಶ್ಮೀರದಲ್ಲಿರುವ 3,880 ಮೀಟರ್ ಎತ್ತರದ ಗುಹಾ ದೇವಾಲಯಕ್ಕೆ 38 ದಿನಗಳ ತೀರ್ಥಯಾತ್ರೆ ಜುಲೈ 3 ರಂದು ಪ್ರಾರಂಭವಾಗಿ ಆಗಸ್ಟ್ 9 ರಂದು ಮುಕ್ತಾಯಗೊಳ್ಳಲಿದೆ.</p><p>ವಾರ್ಷಿಕ ಅಮರನಾಥ ಯಾತ್ರೆಗಾಗಿ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ ಸುಮಾರು 42,000 ಸಿಬ್ಬಂದಿಯನ್ನು ಒಳಗೊಂಡ 580 ತುಕಡಿಗಳನ್ನು ನಿಯೋಜಿಸಲು ಕೇಂದ್ರವು ಆದೇಶಿಸಿದೆ.</p>.ಜಮ್ಮು & ಕಾಶ್ಮೀರಕ್ಕೆ ನಾಗರಿಕ ವಿಮಾನಯಾನ ಸಚಿವ: ಭದ್ರತಾ ಸ್ಥಿತಿ ಪರಿಶೀಲನೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>