ಪಂಜಾಬ್ನ ಅಟ್ಟಾರಿ–ವಾಘಾ ಗಡಿ ಬಳಿಯ ಸೇನಾ ಶಿಬಿರದಲ್ಲಿ ಭಾನುವಾರ ಇಂಥದ್ದೇ ಘಟನೆ ನಡೆದಿತ್ತು. ಗಡಿ ಭದ್ರತಾ ಪಡೆಯ (ಬಿಎಸ್ಎಫ್) ಯೋಧ, ಕರ್ನಾಟಕ ಮೂಲದ ಸತ್ತೆಪ್ಪ ಎಂಬುವರು ನಡೆಸಿದ ಗುಂಡಿನ ದಾಳಿಯಲ್ಲಿ ನಾಲ್ವರು ಸಿಬ್ಬಂದಿ ಮೃತಪಟ್ಟಿದ್ದಾರೆ. ಮತ್ತೊಬ್ಬರು ಗಾಯಗೊಂಡಿದ್ದಾರೆ. ಗುಂಡು ಹಾರಿಸಿದ್ದ ಸತ್ತೆಪ್ಪ ಅವರೂ ಮೃತಪಟ್ಟಿದ್ದರು. ಈ ಘಟನೆ ದೇಶವನ್ನು ಬೆಚ್ಚಿಬೀಳಿಸಿರುವಾಗಲೇ ಅಂಥದ್ದೇ ಮತ್ತೊಂದು ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ.