<p class="title"><strong>ಲಖನೌ</strong>: ಉತ್ತರ ಪ್ರದೇಶದಲ್ಲಿ 2022ರಲ್ಲಿ ವಿಧಾನಸಭಾ ಚುನಾವಣೆಗಳು ನಡೆಯಲಿದ್ದು, ಬಿಎಸ್ಪಿ ಈಗಿನಿಂದಲೇ ಚುನಾವಣಾ ತಂತ್ರಗಾರಿಕೆ ರೂಪಿಸಲು ಸಿದ್ಧತೆ ಆರಂಭಿಸಿದೆ.</p>.<p class="title">‘ಬಿಜೆಪಿಯ ವಿರುದ್ದ ಬ್ರಾಹ್ಮಣ ಸಮುದಾಯವನ್ನು ಜಾಗೃತಗೊಳಿಸಲು ಅಯೋಧ್ಯೆಯಲ್ಲಿ ಮುಂದಿನವಾರದಿಂದ ಬಿಎಸ್ಪಿ ಅಭಿಯಾನ ಆರಂಭಿಸಲಿದೆ’ ಎಂದು ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಅವರು ಭಾನುವಾರ ಹೇಳಿಕೆ ನೀಡಿದ್ದಾರೆ.</p>.<p class="title">ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬಿಜೆಪಿಯ ಮಾತುಗಳನ್ನು ಕೇಳಿ ಬ್ರಾಹ್ಮಣ ಸಮುದಾಯವು ದಾರಿ ತಪ್ಪುವುದಿಲ್ಲ. ಮುಂಬರುವ ಚುನಾವಣೆಯಲ್ಲಿ ಅವರು ನಮ್ಮ ಪಕ್ಷಕ್ಕೆ ಮತ ಹಾಕಲಿದ್ದಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.</p>.<p class="title">‘ಬಿಎಸ್ಪಿ ಪ್ರಧಾನ ಕಾರ್ಯದರ್ಶಿ ಸತೀಶ್ಚಂದ್ರ ಮಿಶ್ರಾ ಅವರ ನೇತೃತ್ವದಲ್ಲಿ ಜುಲೈ 23ರಂದು ಅಯೋಧ್ಯೆಯಲ್ಲಿ ಬ್ರಾಹ್ಮಣ ಸಮುದಾಯದ ಜಾಗೃತ ಅಭಿಯಾನ ಆರಂಭವಾಗಲಿದೆ. ಬಿಎಸ್ಪಿ ಆಡಳಿತದಲ್ಲಿ ಬ್ರಾಹ್ಮಣರ ಹಿತಾಸಕ್ತಿಗಳು ಸುರಕ್ಷಿತವಾಗಿ ಉಳಿಯಲಿವೆ’ ಎಂದೂ ಅವರು ಭರವಸೆ ನೀಡಿದ್ದಾರೆ.</p>.<p class="title">‘ರೈತರ ವಿಷಯಕ್ಕೆ ಸಂಬಂಧಿಸಿದಂತೆ ಎಲ್ಲಾ ರಾಜಕೀಯ ಪಕ್ಷಗಳು ಒಗ್ಗೂಡಿ ಕೇಂದ್ರ ಸರ್ಕಾರವನ್ನು ಹೊಣೆಯನ್ನಾಗಿಸಬೇಕು’ ಎಂದು ಮಾಯಾವತಿ ತಿಳಿಸಿದ್ದಾರೆ.</p>.<p class="title">‘ನೂತನ ಮೂರು ಕೃಷಿಕಾಯ್ದೆಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರ ವಿರುದ್ಧ ಕೇಂದ್ರ ಸರ್ಕಾರವು ತೋರಿದ ವರ್ತನೆ ಅತ್ಯಂತ ದುಃಖಕರವಾದದ್ದು. ಈ ನಿಟ್ಟಿನಲ್ಲಿ ಎಲ್ಲರೂ ಸೇರಿ ಸಂಸತ್ತಿನಲ್ಲಿ ಕೇಂದ್ರದ ವಿರುದ್ಧ ಒತ್ತಡ ಹೇರಬೇಕಾಗಿದೆ. ಕೇಂದ್ರ ಸರ್ಕಾರದ ತಪ್ಪು ಆರ್ಥಿಕ ನೀತಿಗಳಿಂದಾಗಿ ನಿರುದ್ಯೋಗ, ಹಣದುಬ್ಬರ ಹೆಚ್ಚಾಗಿದೆ.ಇದರಿಂದಾಗಿ ಜನರು ಕಷ್ಟ ಎದುರಿಸುತ್ತಿದ್ದಾರೆ’ ಎಂದು ದೂರಿದ್ದಾರೆ.</p>.<p class="title">‘ಇಂಧನ ಮತ್ತು ಅಡುಗೆ ಅನಿಲ ಬೆಲೆ ಏರಿಕೆ ಮತ್ತು ಕೋವಿಡ್ –19 ಲಸಿಕೆಗೆ ಸಂಬಂಧಿಸಿದ ವಿಷಯಗಳನ್ನು ಸಂಸತ್ತಿನಲ್ಲಿ ಪ್ರಸ್ತಾಪಿಸುವುದಾಗಿ’ ಬಿಎಸ್ಪಿ ಸಂಸದೆಯೂ ಆಗಿರುವ ಮಾಯಾವತಿ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಲಖನೌ</strong>: ಉತ್ತರ ಪ್ರದೇಶದಲ್ಲಿ 2022ರಲ್ಲಿ ವಿಧಾನಸಭಾ ಚುನಾವಣೆಗಳು ನಡೆಯಲಿದ್ದು, ಬಿಎಸ್ಪಿ ಈಗಿನಿಂದಲೇ ಚುನಾವಣಾ ತಂತ್ರಗಾರಿಕೆ ರೂಪಿಸಲು ಸಿದ್ಧತೆ ಆರಂಭಿಸಿದೆ.</p>.<p class="title">‘ಬಿಜೆಪಿಯ ವಿರುದ್ದ ಬ್ರಾಹ್ಮಣ ಸಮುದಾಯವನ್ನು ಜಾಗೃತಗೊಳಿಸಲು ಅಯೋಧ್ಯೆಯಲ್ಲಿ ಮುಂದಿನವಾರದಿಂದ ಬಿಎಸ್ಪಿ ಅಭಿಯಾನ ಆರಂಭಿಸಲಿದೆ’ ಎಂದು ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಅವರು ಭಾನುವಾರ ಹೇಳಿಕೆ ನೀಡಿದ್ದಾರೆ.</p>.<p class="title">ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬಿಜೆಪಿಯ ಮಾತುಗಳನ್ನು ಕೇಳಿ ಬ್ರಾಹ್ಮಣ ಸಮುದಾಯವು ದಾರಿ ತಪ್ಪುವುದಿಲ್ಲ. ಮುಂಬರುವ ಚುನಾವಣೆಯಲ್ಲಿ ಅವರು ನಮ್ಮ ಪಕ್ಷಕ್ಕೆ ಮತ ಹಾಕಲಿದ್ದಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.</p>.<p class="title">‘ಬಿಎಸ್ಪಿ ಪ್ರಧಾನ ಕಾರ್ಯದರ್ಶಿ ಸತೀಶ್ಚಂದ್ರ ಮಿಶ್ರಾ ಅವರ ನೇತೃತ್ವದಲ್ಲಿ ಜುಲೈ 23ರಂದು ಅಯೋಧ್ಯೆಯಲ್ಲಿ ಬ್ರಾಹ್ಮಣ ಸಮುದಾಯದ ಜಾಗೃತ ಅಭಿಯಾನ ಆರಂಭವಾಗಲಿದೆ. ಬಿಎಸ್ಪಿ ಆಡಳಿತದಲ್ಲಿ ಬ್ರಾಹ್ಮಣರ ಹಿತಾಸಕ್ತಿಗಳು ಸುರಕ್ಷಿತವಾಗಿ ಉಳಿಯಲಿವೆ’ ಎಂದೂ ಅವರು ಭರವಸೆ ನೀಡಿದ್ದಾರೆ.</p>.<p class="title">‘ರೈತರ ವಿಷಯಕ್ಕೆ ಸಂಬಂಧಿಸಿದಂತೆ ಎಲ್ಲಾ ರಾಜಕೀಯ ಪಕ್ಷಗಳು ಒಗ್ಗೂಡಿ ಕೇಂದ್ರ ಸರ್ಕಾರವನ್ನು ಹೊಣೆಯನ್ನಾಗಿಸಬೇಕು’ ಎಂದು ಮಾಯಾವತಿ ತಿಳಿಸಿದ್ದಾರೆ.</p>.<p class="title">‘ನೂತನ ಮೂರು ಕೃಷಿಕಾಯ್ದೆಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರ ವಿರುದ್ಧ ಕೇಂದ್ರ ಸರ್ಕಾರವು ತೋರಿದ ವರ್ತನೆ ಅತ್ಯಂತ ದುಃಖಕರವಾದದ್ದು. ಈ ನಿಟ್ಟಿನಲ್ಲಿ ಎಲ್ಲರೂ ಸೇರಿ ಸಂಸತ್ತಿನಲ್ಲಿ ಕೇಂದ್ರದ ವಿರುದ್ಧ ಒತ್ತಡ ಹೇರಬೇಕಾಗಿದೆ. ಕೇಂದ್ರ ಸರ್ಕಾರದ ತಪ್ಪು ಆರ್ಥಿಕ ನೀತಿಗಳಿಂದಾಗಿ ನಿರುದ್ಯೋಗ, ಹಣದುಬ್ಬರ ಹೆಚ್ಚಾಗಿದೆ.ಇದರಿಂದಾಗಿ ಜನರು ಕಷ್ಟ ಎದುರಿಸುತ್ತಿದ್ದಾರೆ’ ಎಂದು ದೂರಿದ್ದಾರೆ.</p>.<p class="title">‘ಇಂಧನ ಮತ್ತು ಅಡುಗೆ ಅನಿಲ ಬೆಲೆ ಏರಿಕೆ ಮತ್ತು ಕೋವಿಡ್ –19 ಲಸಿಕೆಗೆ ಸಂಬಂಧಿಸಿದ ವಿಷಯಗಳನ್ನು ಸಂಸತ್ತಿನಲ್ಲಿ ಪ್ರಸ್ತಾಪಿಸುವುದಾಗಿ’ ಬಿಎಸ್ಪಿ ಸಂಸದೆಯೂ ಆಗಿರುವ ಮಾಯಾವತಿ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>