ತಾಜ್ನೆಅವರು ಸಭಾ ಕೊಠಡಿಯೊಳಗೆ ಬರುತ್ತಿದ್ದಂತೆ ಕಾರ್ಯಕರ್ತರು ಅವರ ಶರ್ಟ್ ಹಿಡಿದು ಎಳೆದಾಡಿದ್ದಾರೆ. ಒಬ್ಬ ವ್ಯಕ್ತಿ ಅವರ ಮೇಲೆ ಪ್ಲಾಸ್ಟಿಕ್ ಕುರ್ಚಿಯಿಂದ ಹೊಡೆದಿದ್ದಾರೆ. ಕಾರ್ಯಕರ್ತರು ಕುರ್ಚಿ ಎತ್ತಿ ಬಿಸಾಡುತ್ತಿದ್ದಂತೆ ತಂಜೆ ಅವರು ಅಲ್ಲಿಂದ ಓಡಿ ಪಾರಾಗಿದ್ದಾರೆ. ಈ ದೃಶ್ಯಗಳು ಮೊಬೈಲ್ನಲ್ಲಿ ಸೆರೆಯಾಗಿವೆ.
ಬಿಎಸ್ಪಿ ಪಕ್ಷದ ಗೆಲುವಿಗಾಗಿ ನೇತಾರರು ಕೆಲಸ ಮಾಡಿಲ್ಲ ಎಂದು ಕಾರ್ಯಕರ್ತರು ಸಿಟ್ಟುಗೊಂಡಿದ್ದರು.ರಾಜ್ಯದಲ್ಲಿ ಬಿಎಸ್ಪಿ 48 ಸೀಟುಗಳಲ್ಲಿ ಸ್ಪರ್ಧಿಸಿದ್ದು ಕನಿಷ್ಠ 15 ಸೀಟುಗಳಲ್ಲಿ ಗೆಲ್ಲುವ ಭರವಸೆ ಇಟ್ಟಿತ್ತು.ಆದರೆ ಬಿಜೆಪಿ ಮತ್ತು ಶಿವಸೇನೆ ಮಹಾರಾಷ್ಟ್ರದಲ್ಲಿ 41 ಸೀಟುಗಳನ್ನು ಗೆದ್ದುಕೊಂಡಿತ್ತು. ಬಿಎಸ್ಪಿಗೆ ಇಲ್ಲಿ ಖಾತೆ ತೆರೆಯಲು ಸಾಧ್ಯವಾಗಲೇ ಇಲ್ಲ.