ನವದೆಹಲಿ:ಕೇಂದ್ರ ಸರ್ಕಾರದ ಮುಖ್ಯ ಆರ್ಥಿಕ ಸಲಹೆಗಾರ ಕೃಷ್ಣಮೂರ್ತಿ ಸುಬ್ರಮಣಿಯನ್ ಅವರು ನರೇಂದ್ರ ಮೊದಿ ನೇತೃತ್ವದ ಹೊಸ ಸರ್ಕಾರದ ಮೊದಲ ಆರ್ಥಿಕ ಸಮೀಕ್ಷೆಯನ್ನು ಸಂಸತ್ನಲ್ಲಿ ಗುರುವಾರ(ಜೂನ್ 4) ಮಂಡಿಸಲಿದ್ದಾರೆ.
ಮೋದಿ ಅವರ ನೇತೃತ್ವದ ಎರಡನೇ ಅವಧಿಯ ಕೇಂದ್ರ ಸರ್ಕಾರ ಮಂಡಿಸುತ್ತಿರುವ ಕೇಂದ್ರ ಬಜೆಟ್ಗೂ ಮುನ್ನಾ ದಿನ ಆರ್ಥಿಕ ಸಮೀಕ್ಷೆ ಮಂಡನೆಯಾಗಲಿದೆ.
‘ಗುರುವಾರ ಸಂಸತ್ನಲ್ಲಿ ನನ್ನ ಪಾಲಿಗೆ ಅತ್ಯಂತ ಪ್ರಮುಖವಾದ ಹಾಗೂ ನೂತನ ಸರ್ಕಾರದ ಮೊದಲ ಆರ್ಥಿಕ ಸಮೀಕ್ಷೆಯನ್ನು ಮಂಡನೆ ಮಾಡಲು ಉತ್ಸಾಹದಿಂದ ಎದುರು ನೊಡುತ್ತಿದ್ದೇನೆ ಎಂದು’ ಕೃಷ್ಣಮೂರ್ತಿ ಸುಬ್ರಮಣಿಯನ್ ಅವರು ಮಂಗಳವಾರ #EcoSurvey2019 ನೊಂದಿಗೆ ಟ್ವೀಟ್ ಮಾಡಿದ್ದಾರೆ.
Looking forward with excitement to table my first - and the new Government's first - Economic Survey in Parliament on Thursday. #EcoSurvey2019
ಕೃಷ್ಣಮೂರ್ತಿ ಸುಬ್ರಮಣಿಯನ್ ಅವರು 2018ರ ಡಿಸೆಂಬರ್ನಲ್ಲಿ ಮುಖ್ಯ ಆರ್ಥಿಕ ಸಲಹೆಗಾರರಾಗಿ ನೇಮಕವಾಗಿದ್ದರು. ಇದಕ್ಕೂ ಮೊದಲು ಆ ಸ್ಥಾನದಲ್ಲಿದ್ದ ಅರವಿಂದ್ ಸುಬ್ರಮಣಿಯನ್ ಅವರು ತಮ್ಮ ಕೌಟುಂಬಿಕ ವಿಷಯಗಳ ಕಾರಣಕ್ಕೆ ಅಧಿಕಾರದಿಂದ ಕೆಳಗಿಳಿದಿದ್ದರು. ಆರು ತಿಂಗಳ ಬಳಿಕ ಈ ಸ್ಥಾನಕ್ಕೆ ನೇಮಕ ಮಾಡಲಾಗಿತ್ತು.
ಕೇಂದ್ರದ ನೂತನ ಸರ್ಕಾರದ ಮೊದಲ ಪೂರ್ಣ ಪ್ರಮಾಣದ ಬಜೆಟ್ಅನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಶುಕ್ರವಾರ(ಜೂನ್ 5) ಮಂಡಿಸಲಿದ್ದಾರೆ.