<p><strong>ನವದೆಹಲಿ:</strong>ಕೇಂದ್ರ ಸರ್ಕಾರದ ಮುಖ್ಯ ಆರ್ಥಿಕ ಸಲಹೆಗಾರ ಕೃಷ್ಣಮೂರ್ತಿ ಸುಬ್ರಮಣಿಯನ್ ಅವರು ನರೇಂದ್ರ ಮೊದಿ ನೇತೃತ್ವದ ಹೊಸ ಸರ್ಕಾರದ ಮೊದಲ ಆರ್ಥಿಕ ಸಮೀಕ್ಷೆಯನ್ನು ಸಂಸತ್ನಲ್ಲಿ ಗುರುವಾರ(ಜೂನ್ 4) ಮಂಡಿಸಲಿದ್ದಾರೆ.</p>.<p>ಮೋದಿ ಅವರ ನೇತೃತ್ವದ ಎರಡನೇ ಅವಧಿಯ ಕೇಂದ್ರ ಸರ್ಕಾರ ಮಂಡಿಸುತ್ತಿರುವ ಕೇಂದ್ರ ಬಜೆಟ್ಗೂ ಮುನ್ನಾ ದಿನ ಆರ್ಥಿಕ ಸಮೀಕ್ಷೆ ಮಂಡನೆಯಾಗಲಿದೆ.</p>.<p>‘ಗುರುವಾರ ಸಂಸತ್ನಲ್ಲಿ ನನ್ನ ಪಾಲಿಗೆ ಅತ್ಯಂತ ಪ್ರಮುಖವಾದ ಹಾಗೂ ನೂತನ ಸರ್ಕಾರದ ಮೊದಲ ಆರ್ಥಿಕ ಸಮೀಕ್ಷೆಯನ್ನು ಮಂಡನೆ ಮಾಡಲು ಉತ್ಸಾಹದಿಂದ ಎದುರು ನೊಡುತ್ತಿದ್ದೇನೆ ಎಂದು’ ಕೃಷ್ಣಮೂರ್ತಿ ಸುಬ್ರಮಣಿಯನ್ ಅವರು ಮಂಗಳವಾರ <a href="https://twitter.com/hashtag/EcoSurvey2019?src=hash">#EcoSurvey2019</a> ನೊಂದಿಗೆ ಟ್ವೀಟ್ ಮಾಡಿದ್ದಾರೆ.</p>.<p>ಆರ್ಥಿಕ ಸಮೀಕ್ಷೆಯು ಆರ್ಥಿಕ ಬೆಳವಣಿಗೆಯ ಒಂದು ದೃಷ್ಟಿಕೋನವಾಗಿದ್ದು, ಇದನ್ನು ಕೇಂದ್ರ ಬಜೆಟ್ಗೂ ಒಂದು ದಿನ ಮೊದಲೇ ಪ್ರಸ್ತುತ ಪಡಿಸಲಾಗುತ್ತದೆ.</p>.<p>ಸಮೀಕ್ಷೆಯು ಪ್ರಮುಖ ಅಭಿವೃದ್ಧಿ ಕಾರ್ಯಕ್ರಮಗಳ ಸಾರಾಂಶವನ್ನು ಹೊಂದಿದೆ, ಜತೆಗೆ ಸರ್ಕಾರದ ನೀತಿ ಉಪಕ್ರಮಗಳು ಮತ್ತು ಆರ್ಥಿಕ ಮುನ್ನೋಟವನ್ನು ಒಳಗೊಂಡಿದೆ.</p>.<p><strong>* ಇದನ್ನೂ ಓದಿ:<a href="https://www.prajavani.net/stories/national/know-your-budget-648303.html">ಬಜೆಟ್ 2019 | ಕೇಂದ್ರ ಬಜೆಟ್ ರೆಡಿ ಆಗೋದು ಹೀಗೆ...</a></strong></p>.<p>ಕೃಷ್ಣಮೂರ್ತಿ ಸುಬ್ರಮಣಿಯನ್ ಅವರು 2018ರ ಡಿಸೆಂಬರ್ನಲ್ಲಿ ಮುಖ್ಯ ಆರ್ಥಿಕ ಸಲಹೆಗಾರರಾಗಿ ನೇಮಕವಾಗಿದ್ದರು. ಇದಕ್ಕೂ ಮೊದಲು ಆ ಸ್ಥಾನದಲ್ಲಿದ್ದ ಅರವಿಂದ್ ಸುಬ್ರಮಣಿಯನ್ ಅವರು ತಮ್ಮ ಕೌಟುಂಬಿಕ ವಿಷಯಗಳ ಕಾರಣಕ್ಕೆ ಅಧಿಕಾರದಿಂದ ಕೆಳಗಿಳಿದಿದ್ದರು. ಆರು ತಿಂಗಳ ಬಳಿಕ ಈ ಸ್ಥಾನಕ್ಕೆ ನೇಮಕ ಮಾಡಲಾಗಿತ್ತು.</p>.<p>ಕೇಂದ್ರದ ನೂತನ ಸರ್ಕಾರದ ಮೊದಲ ಪೂರ್ಣ ಪ್ರಮಾಣದ ಬಜೆಟ್ಅನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಶುಕ್ರವಾರ(ಜೂನ್ 5) ಮಂಡಿಸಲಿದ್ದಾರೆ.</p>.<p><strong>* ಇವನ್ನೂ ಓದಿ...</strong></p>.<p><strong>*<a href="https://www.prajavani.net/stories/national/union-budget-2019-648292.html">ಬಜೆಟ್ 2019 | ಕೇಂದ್ರ ಸರ್ಕಾರಕ್ಕೆ ಆದಾಯ ಎಲ್ಲಿಂದ? ಖರ್ಚು ಏನೆಲ್ಲಾ?</a></strong></p>.<p><strong>*<a href="https://www.prajavani.net/educationcareer/education/education-budget-expectations-647119.html">ಬಜೆಟ್ ನಿರೀಕ್ಷೆ | ಶಿಕ್ಷಣದತ್ತ ಇನ್ನಾದರೂ ಹರಿಯುವುದೇ ಚಿತ್ತ?</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong>ಕೇಂದ್ರ ಸರ್ಕಾರದ ಮುಖ್ಯ ಆರ್ಥಿಕ ಸಲಹೆಗಾರ ಕೃಷ್ಣಮೂರ್ತಿ ಸುಬ್ರಮಣಿಯನ್ ಅವರು ನರೇಂದ್ರ ಮೊದಿ ನೇತೃತ್ವದ ಹೊಸ ಸರ್ಕಾರದ ಮೊದಲ ಆರ್ಥಿಕ ಸಮೀಕ್ಷೆಯನ್ನು ಸಂಸತ್ನಲ್ಲಿ ಗುರುವಾರ(ಜೂನ್ 4) ಮಂಡಿಸಲಿದ್ದಾರೆ.</p>.<p>ಮೋದಿ ಅವರ ನೇತೃತ್ವದ ಎರಡನೇ ಅವಧಿಯ ಕೇಂದ್ರ ಸರ್ಕಾರ ಮಂಡಿಸುತ್ತಿರುವ ಕೇಂದ್ರ ಬಜೆಟ್ಗೂ ಮುನ್ನಾ ದಿನ ಆರ್ಥಿಕ ಸಮೀಕ್ಷೆ ಮಂಡನೆಯಾಗಲಿದೆ.</p>.<p>‘ಗುರುವಾರ ಸಂಸತ್ನಲ್ಲಿ ನನ್ನ ಪಾಲಿಗೆ ಅತ್ಯಂತ ಪ್ರಮುಖವಾದ ಹಾಗೂ ನೂತನ ಸರ್ಕಾರದ ಮೊದಲ ಆರ್ಥಿಕ ಸಮೀಕ್ಷೆಯನ್ನು ಮಂಡನೆ ಮಾಡಲು ಉತ್ಸಾಹದಿಂದ ಎದುರು ನೊಡುತ್ತಿದ್ದೇನೆ ಎಂದು’ ಕೃಷ್ಣಮೂರ್ತಿ ಸುಬ್ರಮಣಿಯನ್ ಅವರು ಮಂಗಳವಾರ <a href="https://twitter.com/hashtag/EcoSurvey2019?src=hash">#EcoSurvey2019</a> ನೊಂದಿಗೆ ಟ್ವೀಟ್ ಮಾಡಿದ್ದಾರೆ.</p>.<p>ಆರ್ಥಿಕ ಸಮೀಕ್ಷೆಯು ಆರ್ಥಿಕ ಬೆಳವಣಿಗೆಯ ಒಂದು ದೃಷ್ಟಿಕೋನವಾಗಿದ್ದು, ಇದನ್ನು ಕೇಂದ್ರ ಬಜೆಟ್ಗೂ ಒಂದು ದಿನ ಮೊದಲೇ ಪ್ರಸ್ತುತ ಪಡಿಸಲಾಗುತ್ತದೆ.</p>.<p>ಸಮೀಕ್ಷೆಯು ಪ್ರಮುಖ ಅಭಿವೃದ್ಧಿ ಕಾರ್ಯಕ್ರಮಗಳ ಸಾರಾಂಶವನ್ನು ಹೊಂದಿದೆ, ಜತೆಗೆ ಸರ್ಕಾರದ ನೀತಿ ಉಪಕ್ರಮಗಳು ಮತ್ತು ಆರ್ಥಿಕ ಮುನ್ನೋಟವನ್ನು ಒಳಗೊಂಡಿದೆ.</p>.<p><strong>* ಇದನ್ನೂ ಓದಿ:<a href="https://www.prajavani.net/stories/national/know-your-budget-648303.html">ಬಜೆಟ್ 2019 | ಕೇಂದ್ರ ಬಜೆಟ್ ರೆಡಿ ಆಗೋದು ಹೀಗೆ...</a></strong></p>.<p>ಕೃಷ್ಣಮೂರ್ತಿ ಸುಬ್ರಮಣಿಯನ್ ಅವರು 2018ರ ಡಿಸೆಂಬರ್ನಲ್ಲಿ ಮುಖ್ಯ ಆರ್ಥಿಕ ಸಲಹೆಗಾರರಾಗಿ ನೇಮಕವಾಗಿದ್ದರು. ಇದಕ್ಕೂ ಮೊದಲು ಆ ಸ್ಥಾನದಲ್ಲಿದ್ದ ಅರವಿಂದ್ ಸುಬ್ರಮಣಿಯನ್ ಅವರು ತಮ್ಮ ಕೌಟುಂಬಿಕ ವಿಷಯಗಳ ಕಾರಣಕ್ಕೆ ಅಧಿಕಾರದಿಂದ ಕೆಳಗಿಳಿದಿದ್ದರು. ಆರು ತಿಂಗಳ ಬಳಿಕ ಈ ಸ್ಥಾನಕ್ಕೆ ನೇಮಕ ಮಾಡಲಾಗಿತ್ತು.</p>.<p>ಕೇಂದ್ರದ ನೂತನ ಸರ್ಕಾರದ ಮೊದಲ ಪೂರ್ಣ ಪ್ರಮಾಣದ ಬಜೆಟ್ಅನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಶುಕ್ರವಾರ(ಜೂನ್ 5) ಮಂಡಿಸಲಿದ್ದಾರೆ.</p>.<p><strong>* ಇವನ್ನೂ ಓದಿ...</strong></p>.<p><strong>*<a href="https://www.prajavani.net/stories/national/union-budget-2019-648292.html">ಬಜೆಟ್ 2019 | ಕೇಂದ್ರ ಸರ್ಕಾರಕ್ಕೆ ಆದಾಯ ಎಲ್ಲಿಂದ? ಖರ್ಚು ಏನೆಲ್ಲಾ?</a></strong></p>.<p><strong>*<a href="https://www.prajavani.net/educationcareer/education/education-budget-expectations-647119.html">ಬಜೆಟ್ ನಿರೀಕ್ಷೆ | ಶಿಕ್ಷಣದತ್ತ ಇನ್ನಾದರೂ ಹರಿಯುವುದೇ ಚಿತ್ತ?</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>