<p><strong>ನವದೆಹಲಿ:</strong> ಬಜೆಟ್ ಅಧಿವೇಶನದಲ್ಲಿ ಬಿ–ಜಿ ರಾಮ್ ಜಿ ಕಾಯ್ದೆ ಮತ್ತು ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್ಐಆರ್) ಕುರಿತು ಚರ್ಚೆಗೆ ಕೇಂದ್ರ ಸರ್ಕಾರ ನಿರಾಕರಿಸಿದೆ. </p><p>ಇಂದು (ಮಂಗಳವಾರ) ನಡೆದ ಸರ್ವಪಕ್ಷಗಳ ಸಭೆಯಲ್ಲಿ ಬುಧವಾರದಿಂದ ಆರಂಭವಾಗಲಿರುವ ಸಂಸತ್ತಿನ ಬಜೆಟ್ ಅಧಿವೇಶನದಲ್ಲಿ ಬಿ–ಜಿ ರಾಮ್ ಜಿ ಕಾಯ್ದೆ ಹಾಗೂ ಎಸ್ಐಆರ್ ಕುರಿತು ಚರ್ಚೆಗೆ ವಿಪಕ್ಷಗಳು ಬೇಡಿಕೆ ಮುಂದಿರಿಸಿದ್ದವು. </p><p>ಈ ಕುರಿತು ಪ್ರತಿಕ್ರಿಯಿಸಿದ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು, 'ಈ ಎರಡೂ ವಿಷಯಗಳ ಕುರಿತು ಈಗಾಗಲೇ ಉಭಯ ಸದನಗಳಲ್ಲಿ ಚರ್ಚಿಸಲಾಗಿದೆ' ಎಂದು ಹೇಳಿದ್ದಾರೆ. </p>.ಸಂಗತ: ‘ಎಸ್ಐಆರ್’ ಜೊತೆ ಸಲ್ಲಾಪ ಅಪಾಯಕಾರಿ.ಎಸ್ಐಆರ್ | ಮತದಾರರ ಹೊರಗಿಡುವ ಪ್ರಕ್ರಿಯೆ: ಮಮತಾ ಬ್ಯಾನರ್ಜಿ ಆರೋಪ.<p>ಬಜೆಟ್ ಅಧಿವೇಶನಕ್ಕೂ ಒಂದು ದಿನಕ್ಕೂ ಮೊದಲು ಕರೆಯಲಾದ ಸರ್ವಪಕ್ಷಗಳ ಸಭೆಯ ಬಳಿಕ ರಿಜಿಜು ಮಾತನಾಡಿದ್ದಾರೆ. ಈ ಸಭೆಯಲ್ಲಿ ಕಾಂಗ್ರೆಸ್ನ ಜೈರಾಮ್ ರಮೇಶ್, ಸಿಪಿಐ(ಎಂ)ನ ಜಾನ್ ಬ್ರಿಟಾಸ್ ಸೇರಿದಂತೆ ಪ್ರಮುಖರು ಭಾಗವಹಿಸಿದರು. </p><p>ಭಾರತದ ಮೇಲೆ ಅಮೆರಿಕದ ಸುಂಕ ಹೇರಿಕೆ, ವಿದೇಶಾಂಗ ನೀತಿ ವಿಷಯಗಳು, ವಾಯು ಮಾಲಿನ್ಯ, ಆರ್ಥಿಕತೆ, ಸಾಮಾಜಿಕ ಮಾಧ್ಯಮಗಳ ನಿರ್ಬಂಧದ ಕುರಿತಾಗಿಯೂ ಚರ್ಚೆ ನಡೆಸುವಂತೆ ವಿರೋಧ ಪಕ್ಷದ ನಾಯಕರು ಒತ್ತಾಯಿಸಿದ್ದಾರೆ. </p><p>ಜನವರಿ 28ರಿಂದ ಅಧಿವೇಶನ ಆರಂಭವಾಗಲಿದೆ. ಮೊದಲ ದಿನ ಲೋಕಸಭೆ ಮತ್ತು ರಾಜ್ಯಸಭೆಯ ಜಂಟಿ ಸದನಗಳ ಸದಸ್ಯರನ್ನು ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾಷಣ ಮಾಡಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಬಜೆಟ್ ಅಧಿವೇಶನದಲ್ಲಿ ಬಿ–ಜಿ ರಾಮ್ ಜಿ ಕಾಯ್ದೆ ಮತ್ತು ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್ಐಆರ್) ಕುರಿತು ಚರ್ಚೆಗೆ ಕೇಂದ್ರ ಸರ್ಕಾರ ನಿರಾಕರಿಸಿದೆ. </p><p>ಇಂದು (ಮಂಗಳವಾರ) ನಡೆದ ಸರ್ವಪಕ್ಷಗಳ ಸಭೆಯಲ್ಲಿ ಬುಧವಾರದಿಂದ ಆರಂಭವಾಗಲಿರುವ ಸಂಸತ್ತಿನ ಬಜೆಟ್ ಅಧಿವೇಶನದಲ್ಲಿ ಬಿ–ಜಿ ರಾಮ್ ಜಿ ಕಾಯ್ದೆ ಹಾಗೂ ಎಸ್ಐಆರ್ ಕುರಿತು ಚರ್ಚೆಗೆ ವಿಪಕ್ಷಗಳು ಬೇಡಿಕೆ ಮುಂದಿರಿಸಿದ್ದವು. </p><p>ಈ ಕುರಿತು ಪ್ರತಿಕ್ರಿಯಿಸಿದ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು, 'ಈ ಎರಡೂ ವಿಷಯಗಳ ಕುರಿತು ಈಗಾಗಲೇ ಉಭಯ ಸದನಗಳಲ್ಲಿ ಚರ್ಚಿಸಲಾಗಿದೆ' ಎಂದು ಹೇಳಿದ್ದಾರೆ. </p>.ಸಂಗತ: ‘ಎಸ್ಐಆರ್’ ಜೊತೆ ಸಲ್ಲಾಪ ಅಪಾಯಕಾರಿ.ಎಸ್ಐಆರ್ | ಮತದಾರರ ಹೊರಗಿಡುವ ಪ್ರಕ್ರಿಯೆ: ಮಮತಾ ಬ್ಯಾನರ್ಜಿ ಆರೋಪ.<p>ಬಜೆಟ್ ಅಧಿವೇಶನಕ್ಕೂ ಒಂದು ದಿನಕ್ಕೂ ಮೊದಲು ಕರೆಯಲಾದ ಸರ್ವಪಕ್ಷಗಳ ಸಭೆಯ ಬಳಿಕ ರಿಜಿಜು ಮಾತನಾಡಿದ್ದಾರೆ. ಈ ಸಭೆಯಲ್ಲಿ ಕಾಂಗ್ರೆಸ್ನ ಜೈರಾಮ್ ರಮೇಶ್, ಸಿಪಿಐ(ಎಂ)ನ ಜಾನ್ ಬ್ರಿಟಾಸ್ ಸೇರಿದಂತೆ ಪ್ರಮುಖರು ಭಾಗವಹಿಸಿದರು. </p><p>ಭಾರತದ ಮೇಲೆ ಅಮೆರಿಕದ ಸುಂಕ ಹೇರಿಕೆ, ವಿದೇಶಾಂಗ ನೀತಿ ವಿಷಯಗಳು, ವಾಯು ಮಾಲಿನ್ಯ, ಆರ್ಥಿಕತೆ, ಸಾಮಾಜಿಕ ಮಾಧ್ಯಮಗಳ ನಿರ್ಬಂಧದ ಕುರಿತಾಗಿಯೂ ಚರ್ಚೆ ನಡೆಸುವಂತೆ ವಿರೋಧ ಪಕ್ಷದ ನಾಯಕರು ಒತ್ತಾಯಿಸಿದ್ದಾರೆ. </p><p>ಜನವರಿ 28ರಿಂದ ಅಧಿವೇಶನ ಆರಂಭವಾಗಲಿದೆ. ಮೊದಲ ದಿನ ಲೋಕಸಭೆ ಮತ್ತು ರಾಜ್ಯಸಭೆಯ ಜಂಟಿ ಸದನಗಳ ಸದಸ್ಯರನ್ನು ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾಷಣ ಮಾಡಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>