<p><strong>ನವದೆಹಲಿ:</strong> ಮನರೇಗಾ ಬದಲು ಜಾರಿಗೊಳಿಸಿರುವ ‘ವಿಬಿ ಜಿ ರಾಮ್ ಜಿ’ ಕಾಯ್ದೆ ಹಾಗೂ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಕುರಿತು ಬಜೆಟ್ ಅಧಿವೇಶನದಲ್ಲಿ ಕೇಂದ್ರ ಸರ್ಕಾರ ಹಾಗೂ ವಿರೋಧ ಪಕ್ಷಗಳ ನಡುವೆ ಮತ್ತೊಂದು ಸುತ್ತಿನ ಸಂಘರ್ಷ ನಡೆಯುವ ಸಾಧ್ಯತೆ ದಟ್ಟವಾಗಿದೆ. </p>.<p>ಬಜೆಟ್ ಅಧಿವೇಶನದ ಮುನ್ನಾ ದಿನವಾದ ಮಂಗಳವಾರ ನಡೆದ ಸರ್ವಪಕ್ಷಗಳ ಸಭೆಯಲ್ಲಿ, ಈ ವಿಷಯಗಳ ಬಗ್ಗೆ ಚರ್ಚೆಗೆ ವಿರೋಧ ಪಕ್ಷಗಳು ಪಟ್ಟು ಹಿಡಿದವು. ಆದರೆ, ಈ ಬೇಡಿಕೆಯನ್ನು ಸರ್ಕಾರ ಸಾರಾಸಗಟಾಗಿ ತಿರಸ್ಕರಿಸಿತು. </p>.<p>ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಸೇರಿದಂತೆ ಹಲವಾರು ಹಿರಿಯ ಸಚಿವರು ಹಾಗೂ ವಿಪಕ್ಷಗಳ ಸದಸ್ಯರು ಭಾಗವಹಿಸಿದ್ದರು.</p>.<p>ಸಭೆಯ ಬಳಿಕ ಸುದ್ದಿಗಾರರ ಜತೆಗೆ ಮಾತನಾಡಿದ ಕಿರಣ್ ರಿಜಿಜು, ‘ಬಜೆಟ್ ಅಧಿವೇಶನದ ಪ್ರಾಥಮಿಕ ಗಮನವು ಬಜೆಟ್ ಕುರಿತು ಆಗಿರುತ್ತದೆ. ರಾಷ್ಟ್ರಪತಿಗಳ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಯ ಸಮಯದಲ್ಲಿ ಸದಸ್ಯರು ಇತರ ವಿಷಯಗಳನ್ನು ಪ್ರಸ್ತಾಪಿಸಬಹುದು‘ ಎಂದರು. </p>.<p>ಬಜೆಟ್ ಅಧಿವೇಶನದ ಶಾಸಕಾಂಗ ಕಾರ್ಯಸೂಚಿಯನ್ನು ಹಂಚಿಕೊಳ್ಳದಿದ್ದಕ್ಕೆ ಕಾಂಗ್ರೆಸ್ ಮತ್ತು ಸಿಪಿಐ(ಎಂ) ಸೇರಿದಂತೆ ವಿರೋಧ ಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿದವು. ಇದಕ್ಕೆ ಪ್ರತಿಕ್ರಿಯಿಸಿದ ರಿಜಿಜು, ‘ಸಾಮಾನ್ಯವಾಗಿ ರಾಷ್ಟ್ರಪತಿಗಳ ಭಾಷಣದ ನಂತರ ಈ ಕಾರ್ಯಸೂಚಿಯನ್ನು ಹಂಚಿಕೊಳ್ಳಲಾಗುತ್ತದೆ. ಆದಾಗ್ಯೂ, ಕಾರ್ಯಸೂಚಿ ಹಂಚಿಕೊಳ್ಳಲು ನಾನು ಸಿದ್ಧನಿದ್ದೇನೆ. ಈ ಬಗ್ಗೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದೇನೆ‘ ಎಂದರು. </p>.<p><strong>ವಿಪಕ್ಷಗಳ ಪಟ್ಟು ಏನು? </strong></p><ul><li><p>ವಿಬಿ ಜಿ ರಾಮ್ ಜಿ ಕಾಯ್ದೆ, ಎಸ್ಐಆರ್, ಮಾಲಿನ್ಯ, ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ, ಭಾರತದ ವಿದೇಶಾಂಗ ನೀತಿ, ಭಾರತದ ಮೇಲೆ ಅಮೆರಿಕ ವಿಧಿಸಿದ ಸುಂಕಗಳು, ದೇಶದ ಆರ್ಥಿಕ ಸ್ಥಿತಿ, ಯುಜಿಸಿಯ ಮಾರ್ಗಸೂಚಿ ಬಗ್ಗೆ ವಿಸ್ತೃತ ಚರ್ಚೆ. </p></li><li><p>ಎಸ್ಐಆರ್ ಕುರಿತು ಚರ್ಚೆಗೆ ಡಿಎಂಕೆ, ಟಿಎಂಸಿ ಹಾಗೂ ಎಡಪಕ್ಷಗಳ ಸಂಸದರಿಂದ ಆಗ್ರಹ. ಕೇಂದ್ರ–ರಾಜ್ಯಗಳ ಸಂಬಂಧ ಹಾಗೂ ವಿಪಕ್ಷಗಳ ಆಡಳಿತವಿರುವ ರಾಜ್ಯಗಳಲ್ಲಿ ಲೋಕಭವನಗಳ ದುರುಪಯೋಗದ ಕುರಿತ ಚರ್ಚೆಗೆ ಒತ್ತಾಯ. </p></li></ul>.<p><strong>‘ಕಾಯ್ದೆ’ ಹಿಂಪಡೆಯಲ್ಲ: ರಿಜಿಜು</strong></p><p>‘ಸಂಸತ್ನ ಉಭಯ ಸದನಗಳಿಂದ ಅಂಗೀಕಾರ ಪಡೆದು ವಿಬಿ ಜಿ ರಾಮ್ ಜಿ ಕಾಯ್ದೆಯು ದೇಶದಲ್ಲಿ ಜಾರಿಯಾಗಿದೆ. ನಾವು ರಿವರ್ಸ್ ಗೇರ್ನಲ್ಲಿ ಚಲಿಸಲು ಸಾಧ್ಯವಿಲ್ಲ. ಈ ಕಾಯ್ದೆಯನ್ನು ಹಿಂದಕ್ಕೆ ಪಡೆಯುವುದಿಲ್ಲ‘ ಎಂದು ಕಿರಣ್ ರಿಜಿಜು ಸ್ಪಷ್ಟಪಡಿಸಿದರು. ಚುನಾವಣಾ ವ್ಯವಸ್ಥೆಯ ಸುಧಾರಣೆ ಬಗ್ಗೆ ಈಗಾಗಲೇ ವ್ಯಾಪಕ ಚರ್ಚೆ ಆಗಿದೆ. ಇದೇ ವಿಷಯದ ಬಗ್ಗೆ ಮತ್ತೊಮ್ಮೆ ಚರ್ಚಿಸುವುದು ಅನಗತ್ಯ‘ ಎಂದು ಅವರು ಅಭಿಪ್ರಾಯಪಟ್ಟರು. ‘ವಿಪಕ್ಷ ಸದಸ್ಯರ ಸಲಹೆಗಳನ್ನು ಸರ್ಕಾರ ಮುಕ್ತ ಮನಸ್ಸಿನಿಂದ ಕೇಳಲು ಸಿದ್ಧವಿದೆ‘ ಎಂದರು. </p><p>‘ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ವಾಗ್ದಂಡನೆ ಪ್ರಕ್ರಿಯೆ ನಡೆಯುತ್ತಿದೆ. ಅವರ ವಿರುದ್ಧದ ಆರೋಪಗಳ ತನಿಖೆಗಾಗಿ ಲೋಕಸಭಾಧ್ಯಕ್ಷ ಓಂ ಬಿರ್ಲಾ ರಚಿಸಿರುವ ಮೂವರು ಸದಸ್ಯರ ಸಮಿತಿಯ ವರದಿಗಾಗಿ ಸರ್ಕಾರ ಕಾಯುತ್ತಿದೆ’ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಮನರೇಗಾ ಬದಲು ಜಾರಿಗೊಳಿಸಿರುವ ‘ವಿಬಿ ಜಿ ರಾಮ್ ಜಿ’ ಕಾಯ್ದೆ ಹಾಗೂ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಕುರಿತು ಬಜೆಟ್ ಅಧಿವೇಶನದಲ್ಲಿ ಕೇಂದ್ರ ಸರ್ಕಾರ ಹಾಗೂ ವಿರೋಧ ಪಕ್ಷಗಳ ನಡುವೆ ಮತ್ತೊಂದು ಸುತ್ತಿನ ಸಂಘರ್ಷ ನಡೆಯುವ ಸಾಧ್ಯತೆ ದಟ್ಟವಾಗಿದೆ. </p>.<p>ಬಜೆಟ್ ಅಧಿವೇಶನದ ಮುನ್ನಾ ದಿನವಾದ ಮಂಗಳವಾರ ನಡೆದ ಸರ್ವಪಕ್ಷಗಳ ಸಭೆಯಲ್ಲಿ, ಈ ವಿಷಯಗಳ ಬಗ್ಗೆ ಚರ್ಚೆಗೆ ವಿರೋಧ ಪಕ್ಷಗಳು ಪಟ್ಟು ಹಿಡಿದವು. ಆದರೆ, ಈ ಬೇಡಿಕೆಯನ್ನು ಸರ್ಕಾರ ಸಾರಾಸಗಟಾಗಿ ತಿರಸ್ಕರಿಸಿತು. </p>.<p>ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಸೇರಿದಂತೆ ಹಲವಾರು ಹಿರಿಯ ಸಚಿವರು ಹಾಗೂ ವಿಪಕ್ಷಗಳ ಸದಸ್ಯರು ಭಾಗವಹಿಸಿದ್ದರು.</p>.<p>ಸಭೆಯ ಬಳಿಕ ಸುದ್ದಿಗಾರರ ಜತೆಗೆ ಮಾತನಾಡಿದ ಕಿರಣ್ ರಿಜಿಜು, ‘ಬಜೆಟ್ ಅಧಿವೇಶನದ ಪ್ರಾಥಮಿಕ ಗಮನವು ಬಜೆಟ್ ಕುರಿತು ಆಗಿರುತ್ತದೆ. ರಾಷ್ಟ್ರಪತಿಗಳ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಯ ಸಮಯದಲ್ಲಿ ಸದಸ್ಯರು ಇತರ ವಿಷಯಗಳನ್ನು ಪ್ರಸ್ತಾಪಿಸಬಹುದು‘ ಎಂದರು. </p>.<p>ಬಜೆಟ್ ಅಧಿವೇಶನದ ಶಾಸಕಾಂಗ ಕಾರ್ಯಸೂಚಿಯನ್ನು ಹಂಚಿಕೊಳ್ಳದಿದ್ದಕ್ಕೆ ಕಾಂಗ್ರೆಸ್ ಮತ್ತು ಸಿಪಿಐ(ಎಂ) ಸೇರಿದಂತೆ ವಿರೋಧ ಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿದವು. ಇದಕ್ಕೆ ಪ್ರತಿಕ್ರಿಯಿಸಿದ ರಿಜಿಜು, ‘ಸಾಮಾನ್ಯವಾಗಿ ರಾಷ್ಟ್ರಪತಿಗಳ ಭಾಷಣದ ನಂತರ ಈ ಕಾರ್ಯಸೂಚಿಯನ್ನು ಹಂಚಿಕೊಳ್ಳಲಾಗುತ್ತದೆ. ಆದಾಗ್ಯೂ, ಕಾರ್ಯಸೂಚಿ ಹಂಚಿಕೊಳ್ಳಲು ನಾನು ಸಿದ್ಧನಿದ್ದೇನೆ. ಈ ಬಗ್ಗೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದೇನೆ‘ ಎಂದರು. </p>.<p><strong>ವಿಪಕ್ಷಗಳ ಪಟ್ಟು ಏನು? </strong></p><ul><li><p>ವಿಬಿ ಜಿ ರಾಮ್ ಜಿ ಕಾಯ್ದೆ, ಎಸ್ಐಆರ್, ಮಾಲಿನ್ಯ, ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ, ಭಾರತದ ವಿದೇಶಾಂಗ ನೀತಿ, ಭಾರತದ ಮೇಲೆ ಅಮೆರಿಕ ವಿಧಿಸಿದ ಸುಂಕಗಳು, ದೇಶದ ಆರ್ಥಿಕ ಸ್ಥಿತಿ, ಯುಜಿಸಿಯ ಮಾರ್ಗಸೂಚಿ ಬಗ್ಗೆ ವಿಸ್ತೃತ ಚರ್ಚೆ. </p></li><li><p>ಎಸ್ಐಆರ್ ಕುರಿತು ಚರ್ಚೆಗೆ ಡಿಎಂಕೆ, ಟಿಎಂಸಿ ಹಾಗೂ ಎಡಪಕ್ಷಗಳ ಸಂಸದರಿಂದ ಆಗ್ರಹ. ಕೇಂದ್ರ–ರಾಜ್ಯಗಳ ಸಂಬಂಧ ಹಾಗೂ ವಿಪಕ್ಷಗಳ ಆಡಳಿತವಿರುವ ರಾಜ್ಯಗಳಲ್ಲಿ ಲೋಕಭವನಗಳ ದುರುಪಯೋಗದ ಕುರಿತ ಚರ್ಚೆಗೆ ಒತ್ತಾಯ. </p></li></ul>.<p><strong>‘ಕಾಯ್ದೆ’ ಹಿಂಪಡೆಯಲ್ಲ: ರಿಜಿಜು</strong></p><p>‘ಸಂಸತ್ನ ಉಭಯ ಸದನಗಳಿಂದ ಅಂಗೀಕಾರ ಪಡೆದು ವಿಬಿ ಜಿ ರಾಮ್ ಜಿ ಕಾಯ್ದೆಯು ದೇಶದಲ್ಲಿ ಜಾರಿಯಾಗಿದೆ. ನಾವು ರಿವರ್ಸ್ ಗೇರ್ನಲ್ಲಿ ಚಲಿಸಲು ಸಾಧ್ಯವಿಲ್ಲ. ಈ ಕಾಯ್ದೆಯನ್ನು ಹಿಂದಕ್ಕೆ ಪಡೆಯುವುದಿಲ್ಲ‘ ಎಂದು ಕಿರಣ್ ರಿಜಿಜು ಸ್ಪಷ್ಟಪಡಿಸಿದರು. ಚುನಾವಣಾ ವ್ಯವಸ್ಥೆಯ ಸುಧಾರಣೆ ಬಗ್ಗೆ ಈಗಾಗಲೇ ವ್ಯಾಪಕ ಚರ್ಚೆ ಆಗಿದೆ. ಇದೇ ವಿಷಯದ ಬಗ್ಗೆ ಮತ್ತೊಮ್ಮೆ ಚರ್ಚಿಸುವುದು ಅನಗತ್ಯ‘ ಎಂದು ಅವರು ಅಭಿಪ್ರಾಯಪಟ್ಟರು. ‘ವಿಪಕ್ಷ ಸದಸ್ಯರ ಸಲಹೆಗಳನ್ನು ಸರ್ಕಾರ ಮುಕ್ತ ಮನಸ್ಸಿನಿಂದ ಕೇಳಲು ಸಿದ್ಧವಿದೆ‘ ಎಂದರು. </p><p>‘ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ವಾಗ್ದಂಡನೆ ಪ್ರಕ್ರಿಯೆ ನಡೆಯುತ್ತಿದೆ. ಅವರ ವಿರುದ್ಧದ ಆರೋಪಗಳ ತನಿಖೆಗಾಗಿ ಲೋಕಸಭಾಧ್ಯಕ್ಷ ಓಂ ಬಿರ್ಲಾ ರಚಿಸಿರುವ ಮೂವರು ಸದಸ್ಯರ ಸಮಿತಿಯ ವರದಿಗಾಗಿ ಸರ್ಕಾರ ಕಾಯುತ್ತಿದೆ’ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>